Home / ಕವನ / ಕವಿತೆ / ಹೂವು ಹಣ್ಣು ಬಿಡಲಿ

ಹೂವು ಹಣ್ಣು ಬಿಡಲಿ

ಗಳಿಗೆ ಗಳಗೆಗೂ ಎಜೆಯ ಕಡಲಿನಲಿ
ಅಳಲ ತೆರೆಗಳೆದ್ದು;
ದಡಕೆ ಅಪ್ಪಳಿಸಿ ಮನವ ಕಲಕುತಿವೆ
ಕಳೆದ ನೆನಹು ತಂದು.
ಹಗಲು ಮನಸಿನಲಿ ಇರುಳು ಕನಸಿನಲಿ
ಚಿತ್ರ ನೂರು ನೂರು!
ಮುಗಿಲ ತೇರಿನಲಿ ತೇಲಿ ಬಂದಿರಲು
ಕಣ್ಣ ತುಂಬ ನೀರು.
ಕರುಣೆ ಹೂವಿನಲಿ ಎದೆಯ ಹಾಲಿನಲಿ
ನಕ್ಕ ತಂಗಿ ತಾಯಿ!
ಅಗಲಿ ಹೋಗಿಹರು ಮರಳಿ ಬರದಿಹರು
ಅಕ್ಕ ಅಣ್ಣ ಗೌರಿ.
ಅವರ ಎದೆಯ ಉಲಿ ಮೌನವಾಂತಿರಲು
ಶಿವನೆ ಬಾಳಿದೇನು!
ಏಸೊ ನೆನಹುಗಳು ‘ಪ್ರೀತಿ ಗುರುತು’ಗಳು
ಎಲ್ಲ ಕನಸು ಏನು?
ಮನವು ಮಿಡಿದಿರಲು ಹೃದಯವಳುತಿರಲು
ಕಣ್ಣು ತುಂಬಿ ಹರಿದು;
ನನ್ನ ಕರುಣಾಳು ತಾಯಿ ಕನಸಿನಲಿ
ನುಡಿವಳೆದೆಗೆ ಬಂದು.
ಅಗಲಿ ಹೋದವರು ಮರಳಿ ಬರದಿರಲು
ಮೂಕ ಶೋಕವೇನು?
ಬರಲಿ ಬಂದವರು ಎಲ್ಲ ನಿನ್ನವರು
ಕೊನೆಗೆ ನಿನಗೆ ನೀನು.
ನಿನ್ನ ಇರವಿನಲಿ ಧೈರ್ಯನವಿರುತಿರಲಿ
ಮರೆತೆಯೇನು ಎಲ್ಲ?
ಮಾತು ಮಾತಿನಲಿ ಪ್ರೀತಿ ಹರಿದಿರಲಿ
ಬಾಳು ಬೇವು ಬೆಲ್ಲ.
ನಿನ್ನ ಎದೆಯ ಗಿರಿ ಕರಗಿ ನೀರಾಗಿ
ಹರಿದು ಬರುವೆ ನಾನು;
ಕವಿಯ ಬಾಳ್ಗುರಿಗೆ ತೋರು ಬೆರಳಾದ
ಅನ್ನಪೂರ್ಣೆ ನಾನು.
ನಿನ್ನ ಕಣ್ಣಿನಲಿ ನನ್ನ ಹೃದಯವನು
ಅಳೆದು ನೋಡಬಹುದು;
ಕಣ್ಣ ಮಿಂಚಿನಲಿ ಕಂಡ ಬೆಳಕಿನಲಿ
ಗುರಿಯ ಕಾಣಬಹುದು.
೧೦
ನಾನು ಹರಿದಿರುವ ಎದೆಯ ಭೂಮಿಯಲಿ
ಕಾವ್ಯ ಸಸಿಯು ಉದಿಸಿ
ನಭಕು ಬೆಳೆದಿರಲಿ ನೆರಳು ನೀಡಿರಲಿ
ಹೂವು ಹಣ್ಣು ಬಿಡಲಿ!
*****
Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...