Home / ಕವನ / ಕವಿತೆ / ಬೆಳೆದು ಬಂದ ಬಯಕೆ

ಬೆಳೆದು ಬಂದ ಬಯಕೆ

ದಿವಸ ದಿವಸ ಕಳೆದು ಇಂದು ವರುಷ ತುಂಬಿ ನಿಂತಿದೆ
ನೂರು ನೋವನೆಣಿಸಿ ಗುಣಿಸಿ ಮನಕೆ ಮಂಕು ಕವಿದಿದೆ
ಹಗಲು ಇರುಳು ನೆನವೆ ಬುತ್ತಿ
ಹೃದಯದೊರತೆಯಲ್ಲ ಬತ್ತಿ
ದೇಹವೆಲ್ಲ ಕರಗಿ ಸೊರಗಿ ಬಾಳು ಬೇಸರೆನಿಸಿದೆ.
ಜೀವ ಮೌನ ತಾಳಿದೆ.
ಇಂದು ನಗುವೆ ಇಲ್ಲವಾಯ್ತು
ಮೌನ ಭಾರದಿಂದ ಸೋತು
ದೇಹ ಭೂಮಿಗಿಳಿದಿದೆ
ಧೂಳಿಯಲ್ಲಿ ನರಳಿದೆ;
ನನ್ನ ಸುತ್ತು ಮುತ್ತಲೇನು
ಮುಖವನೆತ್ತಿ ನೋಡಲೇನು
ಚಣ ಚಣಕೂ ಕರುಳ ಕೆಣಕಿ ಕಣ್ಣಿರಿಯುವ ಕತ್ತಲೆ
ಅದರ ಕುಣಿತ ಬತ್ತಲೆ!
ದುಃಖ ಅತಿಥಿಯಂತೆ ಬಂದು
ಮನೆಯ ಹೊಸ್ತಿಲಾಚೆ ನಿಂದು
ನನ್ನ ಕೂಗಿ ಕರೆದರೆ
ಬಾಗಿಲನ್ನು ಬಡಿದರೆ
ಕರುಣೆ ಇಲ್ಲದವರ ತೆರದಿ ಅದಕೆ ಬೇಡವೆನ್ನಲೆ?
ನನ್ನತನವ ಮರೆಯಲೆ?
ತಾಳ್ಮೆ ಬಾನ ಬಿತ್ತರ
ಹಿಮಾಲಯಕು ಎತ್ತರ
ಅದರ ಪೂರ್ವ ಪುಣ್ಯವೇನೊ
ಸೌಭಾಗ್ಯದ ಚಿಹ್ನೆಯೇನೊ
ಹೃದಯದಾಳದಲ್ಲಿ ಮೌನ ಗರ್ಭಧರಿಸಿದಂತಿದೆ.
ಬೆಳಕಿಗಾಗಿ ತಪಿಸಿದೆ.
ನನ್ನ ಎದೆಯ ಮೂಡಲಲ್ಲಿ
ಕನಸು ಮನಸು ಕೂಡುವಲ್ಲಿ
ಇಂದು ಇಲ್ಲವಾದರೂ
ಮುಂದೆ ಒಮ್ಮೆಯಾದರೂ
ಹಾಲು ಹಣ್ಣು ಹೂವು ಜೇನು ಹೊತ್ತು ಬರನೆ ಚಂದಿರ
ಕಣ್-ಮನಕೂ ಸುಂದರ!
ಪೂರ್ಣಕಲಾ ಪುಣ್ಯಮಾಯಿ
ಬೆಳುದಿಂಗಳ ಹಾಲ ತಾಯಿ
ಇರುಳ ಜೋಗುಳನ್ನು ಹಾಡಿ
ಕಣ್ಣು ತುಂಬುವಂತೆ ನೋಡಿ
ಈ ಚಂದ್ರಮ ಈ ಸಂಭ್ರಮ-ನಿನಗೆ ಇರಲಿ ಎನ್ನಳೆ?
ಉಡಿಯ ತೆರೆದ ಕರೆಯಳೆ!
*****
Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...