Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...