ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯೧
Next post ಜಿಗಳೆಗಳು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys