Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್