Home / ಕಥೆ / ಜನಪದ / ಕೊನೆಯಾಶೆ

ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...