Home / ಕವನ / ಕವಿತೆ / ಛಾಯೆ

ಛಾಯೆ

ಏನುಂಟೊ ಅದನು ಅಲ್ಲಗಳೆಯಲು ಸಲ್ಲ.
ಇಹುದು ಇಲ್ಲೆಂಬ ವ್ಯಾಪಾರ ಉಂಟಿನ ಗಂಟು.
ಇಹುದು ಎಂಬುದು ದೃಶ್ಶ. ದೃಶ್ಯದಾಚೆಗೆ ಸಾರೆ
ಇಲ್ಲೆಂದು ಎನಿಸುವುದು. ರೂಪದಾವಿರ್ಭಾವ,
ರೂಪದ ತಿರೋಭಾವ. ರೂಪವೆಂಬುದು ವಸ್ತು;
ಅಸ್ತಿ ಎಂಬುದು ಭಾವ ಸದ್ವಸ್ತು ಸದ್ಭಾವಗಳ
ಗ್ರಂಥಿ ಗ್ರಥನವೆ ಗ್ರಂಥ. ದೇವಯಾನದ ಪಂಥ.
ಘನ ಘನಂಗಳ ಬಂಧ ಸಂಬಂಧದರಿವಿನಲೆ
ಹೊತ್ತು ಹೊತ್ತುತ್ತಲಿದೆ, ಹೊತ್ತು ಹೊಳೆಯುತ್ತಲಿದೆ.
ಅದರ ಗೊತ್ತೋ ಗುರಿಯೊ! ಅದುವೆ ಎತ್ತೋ ಏಲ್ಲೊ!
ಅದರ ಆಲಯರಚನೆಗಾಗಿ ಲೀಲಾಯಿಸುತ
ಲಯಲಯವು ಪ್ರಲಯವನೆ ಪ್ರತಿಮುಖಿಸಿ ಏಳುತಿದೆ
ಬೀಳುತಿದೆ, ಬಿತ್ತುತಿದೆ, ಎತ್ತುತಿದೆ ತಲೆ ಮತ್ತೆ.
ಇಂಥ ತಲೆ ಬಾಲದಲಿ ದೇಹವನು ತಾಳುತಿದೆ
ಆ ವಿದೇಹದ ಭಾವ “ಓಂ ಭವತಿ! ದೇಹಿ ಭಿ
ಕ್ಷಾಂದೇಹಿ!” ನಾ ನೇಹಿ, ನಾದೇಹಿ, ನಾ ಗೇಹಿ.
ಓ ಪುಷ್ಪಗರ್ಭೆ ಓ ಓಂ ದಿವ್ಯ ಸಂದರ್ಭೆ
ಅಪ್ರಕಾಶಿತವನ್ನು ಸುಪ್ರಕಾಶದಿ ಬೆಳಗಿ
ಇಲ್ಲ ಎನಿಸಿದುದನ್ನು ಅಹುದೆಂಬ ರೀತಿಯಲಿ
ಘನ ಪಿಂಡ ಮಾಡಿ ಮೂಡಿಸು ನಿನ್ನ ಮೋಡಿಯಲಿ
ಬೇರೆ ಸರ್ಗದ ಛಾಯೆ ಬಿತ್ತು ಈ ರೂಢಿಯಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...