Home / ಕವನ / ಕವಿತೆ / ದೊಂಗಲುನ್ನಾರೂಽರೇ-ಜಾಗ್ರತಽ

ದೊಂಗಲುನ್ನಾರೂಽರೇ-ಜಾಗ್ರತಽ

ದೊಂಗಲುನ್ನಾರೂಽರೇ-ಜಾಗ್ರತಽ
ಎಚ್ಚರಿದೊಂದೇ ಆಗಲಿ ವ್ರತಾ || ಪಲ್ಲ||

ಇನ್ನಾರು ನಿಮ್ಮಽಽ| ಎಚ್ರಾ ಕೊಡಾವ್ರಣ್ಣಾ
ಹಾದಿ ಐತೀ ಬಲೂ ಬಲೂ ದೂರಾ
ಗಂಟಽ ಬೀಳ್ತಾನ ಅಲ್ಲಿನೆ ಚೋರಾ
ನಿದ್ದೀ ಬ್ಯಾಡ್ರೆಪ್ಪಾ, ಬಂದೀತು ಘೋರಾ || ದೊಂಗಲು….

ಕಳ್ಳಾ ಅಂಬಾವ | ಬ್ಯಾರೇ ಯಾರೂ ಇಲ್ಲಾ
ಅಂವಾ ನಮ್ಹಾಂಗಽ ನಿಮ್ಹಾಂಗಽ ಎಲ್ಲಾ
ಆದ್ರ ಧಂದೇನ ಮಾಡಿಕೊಂಡಾನ ಖುಲ್ಲಾ! ದೊಂಗಲು….

ಅಂದಾನು ಹೆದರ್ಬ್ಯಾಡೊ, ಹೆದರ್ಬ್ಯಾಡೊ ತಮ್ಮಾ
ಐತಿ, ರಾಜ್ಯಾನ ಇದು ನಮ್ಮ ನಿಮ್ಮಾ
ಬ್ಯಾರೆ ಬರ್ತಾರು ಯಾರು? ಮಕ್ಕೋ ಸುಮ್ಮಾ|| ದೊಂಗಲು….

ಇದ್ದವ್ರ ಹರಕೊಳ್ಳಾಕ ಇಲ್ದವ್ರು ಬರ್ತಾರ
ಇದ್ದದ್ದು ಇಲ್ಲದ್ದ್ಯಾವ್ದೋ ಯಣ್ಣಾ
ಮನಸ್ಕಾರಽ ಹೂಲೀ ಎಬಿಸಿ
ಮನಸ್ಯಾರ್ನ ತಿಂತಾರ
ದೇವ್ರಽ ತೆರೀಬೇಕೋ ಕಣ್ಣಾ
ಮುಚ್ಚಿ ಕೊಂಡೈತಿ | ಅಂತಃಕರ್ಣಾ
ಕರ್ಣನ ಕಿಸೇಕಽನ ಹಾಕಾವ್ರು ಕನ್ನಾ
ಬಂದು ಎದ್ದೈತಿ ಅಲ್ಲಲ್ಲಿ ಹಾಹಾಕಾರ
ಸ್ವಾಹಾಕಾರಾನ ಬಲು | ದೊಡ್ಡ ಮಂತ್ರ ಆಗೈತಿ
ಬಂದೈತ್ಯೋ ಗೆಣೆಯಾ ಭಾಳ ಘೋರಾ
ಇಲ್ಲಿ ಪಾರಾದಾವ್ನಽ ಖರೇ ಶೂರಾ | ದೊಂಗಲು….

ಅಂಬಿಕಾತನಯನಿಗು ಇತಿಮಿತಿ ಬಿದ್ದೈತಿ
ನೆಂಬಿಕ್ಯಾರೆ ಯಾರ್ದಪ್ಪಾ ಇಲ್ಲಿ
ಪೂಜಾರೀನಽ ಕೂತು | ದೇವರ್ನ ಕದ್ದರ
ಇನ್ನ ಫಜೀತಿ, ಬ್ಯಾರೆ ಯಾವ್ದೈತಿ
ಸೋದಽರ ಭಾವಾ ಹೇಳೂವ
ಚೋದ್ಯರು ಚೋದರು ಮಾದರು ಕೂಡ್ಯಾರು
ಗ್ಯಾಂಗ, ಗ್ಯಾಂಗೀಽಗೆ ಬ್ಯಾರೆ ಹೆಸರೈತಿ
ಯಾಲೀ ಧೂಲಾ ಅಂತ, ಹೈದೋಸ ನಡಿಸ್ಯಾರ
ಮನಸ್ಯಾರ್ಕಿ ಒಳಗಽ ಕಸರೈತಿ
ಸಾಲಾಽ, ಸಾಲೀಽ ಅಂತ! ನೆಂಟಸ್ತ್ಕಿ ಬೆಳಸ್ತಾರು
ಸೋದೇರು ಭಾನಚೋದ ಮಂದಿ | ಭಾಳ ಬೆರ್ಕಿ
ಅಲ್ಲಿ ತುರ್ಕಿ, ಇಲ್ಲಿ ತುರ್ಕಿ, ಹೊಡದಾರು ನಡುವಽ ಗಿರ್ಕಿ
ತೂಕಡಿಸಬ್ಯಾಡೋ ಜೋಲಿ ತಪ್ಪಿ || ದೊಂಗಲು….

ಮನಸ್ಯಾರ್ಹಾಂಗ ಕಾಣ್ತಾರಂತ
ಮನಸ್ಯಾರಽ ಅಂತ ತಿಳ್ದು
ನಿದ್ದೀ ಮಾಡಾಕ ಒಪ್ಪಿಗಿಪ್ಪಿ
ಹುಷಾರ್‌, ಹುಷಾರ್‌ | ಗೆಣೆಯಾ, ತಮ್ಮ; ಅಣ್ಣಾ
ಜಂಪು ಹತ್ತೀತು ತಪ್ಪೀಸಿ ಕಣ್ಣಾ || ದೊಂಗಲು…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...