ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯೫
Next post ಹಸಿವು

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys