Home / ಕಥೆ / ಜನಪದ / ರುಚಿಗಾರ ಸವಿಗಾರ

ರುಚಿಗಾರ ಸವಿಗಾರ

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು.

ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್ತು ನೂಲುತ್ತ ಕುಳಿತಳು. ಅಂದು ಸೋಮವಾರ. ಆಕೆಗೆ ಒಪ್ಪೊತ್ತು. ಸಂಜೆಯ ಊಟವಿರಲಿಲ್ಲ. ನೂಲುವುದು ಸಾಕಾದ ಬಳಿಕ ರಾಟಿಯನ್ನು ಒತ್ತಟ್ಟಿಗೆ ಸರಿಸಿಟ್ಟು, ಕೈ ಬಾಯಿ ತೊಳಕೊಂಡು, ನೀರು ಕುಡಿಯುವುದಕ್ಕೆ ಅಣಿಯಾದಳು. ಆಕೆಯ ಬಾಯಲ್ಲಿ ಹಲ್ಲು ಇರಲಿಲ್ಲ. ಕಾಳು ನುರಿಸುವದಕ್ಕೆ ಆಗದೆ ಅಬಡು ಜಬಡು ತಿಂದು ನೀರು ಕುಡಿಯುತ್ತ – “ಏನು ಹೋದೆಯೋ ನನ್ನ ರುಚಿಗಾರ, ನನ್ನ ಸವಿಗಾರ” ಎಂದು ಮೈಮರೆತು ನುಡಿದಳು.

ಆ ಮಾತು ನೆರೆಮನೆಯವರಿಗೆ ಕೇಳಿಸಿತು. – “ಈಕೆ ಯಾರೊಡನೆ ಮಾತಾಡುತ್ತಿದ್ದಾಳೆ? ಅವನೆಂಥ ರುಚಿಗಾರ ಸವಿಗಾರ ಇದ್ದಿರಬಹುದು ಈಕೆಗೆ” ಎಂದು ಸಂಶಯ ಪಟ್ಟರು.

“ಅಜ್ಜೀ, ನೀನು ಯಾರೊಡನೆ ಮಾತಾಡುತ್ತಿರುವಿ ?” ಎಂಬ ದನಿ ನೆರೆಮನೆಯವರಿಂದ ಕೇಳಿ ಬಂತು.

“ನಾನಾರೊಡನೆ ಮಾತಾಡಲೆವ್ವ! ನನಗಾರಿದ್ದಾರೆ ?”

“ರುಚಿಗಾರ ಸವಿಗಾರ ಅಂದೆಯಲ್ಲ, ಯಾರು ಅವರು ?” ನೆರೆಮನೆಯಿಂದ ಬಂದ ಪ್ರಶ್ನೆ.

“ಇನ್ನೆಲ್ಲಿಯ ರುಚಿಗಾರ. ಇನ್ನೆಲ್ಲಿಯ ಸವಿಗಾರ ! ಹೋಗಿಬಿಟ್ಟು ಬಹಳ ದಿನಗಳಾದವು” ಮುದುಕಿಯ ಮರುನುಡಿ.

“ಹಳೆ ಗೆಳೆತನದ ನೆನಪಾದಂತೆ ತೋರುತ್ತದೆ ಮುದುಕಿಗೆ” ಎಂದುಕೊಂಡಿದ್ದಾಳೆ ನೆರೆಯವಳು. “ಹೋದವರು ಮರಳಿ ಬರಲಾರರು ಅಜ್ಜೀ. ನಾವೂ ಒಮ್ಮೆ ಅದೇ ಹಾದಿಯಲ್ಲಿ ಹೋಗತಕ್ಕವರೇ ಅಲ್ಲವೇ ?” ಎಂದಳು.

“ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ – ಏನು ಹೋದೆಯೋ ನನ್ನ ರುಚಿಗಾರ – ಸವಿಗಾರ ಎಂದು.” ಮುದುಕಿ ಅರ್ಥವನ್ನು ಸ್ಪಷ್ಟಗೊಳಿಸಿದಳು.

“ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ !” ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...