Home / ಕವನ / ಕವಿತೆ / ಕ್ರೀಟದೇವಿ

ಕ್ರೀಟದೇವಿ

ಮುನ್ನೀರ ಚೆಲುವನು ಮುಂಗಾಣಬಯಸಿದಲ್ಲಿ
ಭೂಮಧ್ಯ ಸಮುದ್ರವನು ನೋಡು ಕಿರುಹಗಲಿನಲ್ಲಿ,-
ಶರದೃತುವಿನಾರಂಭದಲ್ಲಿ!

ನೂರೊಂದು ಬುರುಗಿನ ಬಳ್ಳಿಯೊಡನೆ ತಿಳ್ಳಿಯಾಡುತಿದೆ ಗಾಳಿ,
ಕಳ್ಳಹೆಜ್ಜೆಯನಿಕ್ಕಿ ತೆರೆಗಳನು ತರಿದೊಡ್ಡುತಿದೆ
ಸಿಂಗರಿಸಿ ಮ೦ಜಿನಂತಹ ಸೀಕರವನೇಳು ಬಣ್ಣಗಳಿಂದ.
ದಿಕ್ಕಿಲ್ಲದೆ ಬಳ್ಳಿವಳ್ಳಿಯಾಗಿ ತೇಲುತಿದೆ ಬೆಳ್ಳಿಯ ಬುರುಗು!

ನೋಡುತೀ ಬೆಳ್ಳಿಯ ಕೆನೆಯನು-ಫೇನವನು-
ಹುಟ್ಟುಕಡೆಯಲೊಡೆದು ಬರುವ ವಿಮಲೋದಕವನು-
ನೋಡಿದಲ್ಲೆಲ್ಲ ಕೆನೆವಾಲಂತೆ ಥಳಥಳಿಸುವ ಸಮುದ್ರವನು,-
ನೆನೆಯುವೆನು ಹಿರಿಯರೊರೆದೊಂದು ಮಾತ:
ಕ್ಷೀರಸಾಗರವದು ಕನಸಲ್ಲ! ಕಣ್ಣಿನ ಬದುಕು!
ಸೂರ್ಯನಾರಾಯಣನ ಪದತಲದಿ ಪವಡಿಸಿಹ ಕ್ಷೀರಸಾಗರವ ಕಾಣು!

ಈ ಹಾಲ್ಗಡಲ ಹೃದಯ ಕಮಲವು ಬಿರಿಯೆ ಹಿಂದೊಮ್ಮೆ
ಮೆಲ್ಲನದರೊಳಗಿಂದ ಜನಿಸಿದೆ ಮಾಲಕುವಿುಯಂತೆ:
ವರಿಸಿದೆ ದೇವನ, ಹರಿಸಿದೆ ನಿನ್ನಣುಗರನು: ಓ ಕ್ರೀಟದೇವಿ!
ನಿನ್ನರಿಗಳಳಿದರೆಲೆ ಕ್ರಿಮಿಕೀಟಕಗಳಂತೆ!

ಹಬ್ಬಿತು ನಿನ್ನ ಕೀರ್ತಿ ಸಪ್ತಸಮುದ್ರಗಳ ದಾಟಿ;
ಉಳಿದ ನೆಲದಣುಗರು ನಿದ್ದೆ ತಿಳಿದೇಳುವ ಮುನ್ನ
ಕಟ್ಟಿದರು ನಿನ್ನ ಕುವರರು ಕೊತ್ತಳದ ಕೋಟೆಗಳನು,-
ಜನರ ಕಟ್ಟುಪಾಡನು, ಸುಖವನು, ಶಾಂತಿಯನು,-
ಆಳಿದರು ನೂರು ಪಟ್ಟಣಗಳನು, ಬಾಳಿದರು ವೈಭವದಿ,-
ಹೋಮರನು ಒಪ್ಪುವಂತೆ!

ಇ೦ದಿಗೋ! ಆವರಿಸಿಹುದು ಹಿಮವು ನಿನ್ನ ಪರ್ವತಾವಳಿಗಳನ್ನು:
ಮಣ್ಣುಗೂಡಿಹುದಿಂದು ಗಳಿಸಿದ ಘನೈಶ್ವರ್ಯವೆಲ್ಲ:
ನೆಟ್ಟಿಹರು ಬೆಳಕು-ನಿಲ್ಗಂಬವನೊಂದ ನಿನ್ನ ತಲೆಯ ಮೇಲೆ,
ಮರೆಯಾಗದಿರಲೆಂದು ಹಿಂದೆ ನೀನೂರಿದಾ ನೆನಹು.
ಸಾಮ್ರಾಜ್ಯ ಮದದಿ ನಿನ್ನ ಲೆಕ್ಕಿಸದೆ ಮುಂದೆ ಸಾಗಿರುವವರ
ಸೊಕ್ಕಿಳಿಯಬಹುದೆಂದು ಮಂಜುದುಟಿಯ ಮುಗುಳ್ನಗೆಯಿಂದ ಸೂಚಿಸಿ
ಕರಾಳ ಕಾಲದುಶ್ಶಾಸನನ ತೋಳ್‌ ತಕ್ಕೆಗೆ ಸಿಲುಕಿ ಬಣ್ಣಗುಂದಿ
ಬಿಳುಪೇರಿ ನಿಲ್ಲಲಾರದೆ ನಿಂತಿರುವೆ ಮರೆಮಾಚಿ ನಾಚಿ ಓ! ಕ್ರೀಟದೇವಿ!
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...