Home / ಕಥೆ / ಜನಪದ / ಸೊಸೆಗೇನು ಅಧಿಕಾರ ?

ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?”

“ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?”

“ಏನಂದರು ?” ಸಂಗಮ್ಮನ ಪ್ರಶ್ನೆ.

“ಮಜ್ಜಿಗೆ ಆಗಿಲ್ಲವೆಂದರು” ನೀಲಜ್ಜಿಯ ಪಡಿನುಡಿ.

“ಯಾರು ಹೇಳಿದರು ಹೀಗೆ ?”

“ನಿನ್ನ ಸೊಸೆ ನಿಂಬೆಕ್ಕ.”

“ಆಕೆಗೇನು ಅಧಿಕಾರ ಹಾಗೆ ಹೇಳಲಿಕ್ಕೆ. ಬಾನನ್ನೊಡನೆ” ಎಂದಳು ಸಂಗಮ್ಮ.

ಸಂಗಮ್ಮ ಮುಂದೆ ಮುಂದೆ, ನೀಲಜ್ಜಿ ಹಿಂದೆ ಹಿಂದೆ. ಹತ್ತುಮಾರು ಹೋಗುವಷ್ಟರಲ್ಲಿ ಮನೆ ಬಂತು. ಸಂಗಮ್ಮ ಬಿರಬಿರನೆ ತಲೆವಾಗಿಲು ಹೊಕ್ಕು ಪಡಸಾಲೆಯನ್ನು ಏರಿದಳು. ನೀಲಜ್ಜಿಯು ಮೆಲ್ಲನೆ ನಡೆದು ಬಂದು ಮೆಟ್ಟುಗಟ್ಟೆಯ ಬಳಿ ನಿಂತುಕೊಂಡಳು.

“ತಾ ಇಲ್ಲಿ. ಮಜ್ಜಿಗೆ ಒಯ್ಯುವುದಕ್ಕೆ ಏನು ತಂದಿರುವಿ?” ಎನ್ನುತ್ತ ಸಂಗವ್ವನು ಆಕೆ ಕೊಟ್ಟ ಚಿಕ್ಕ ಗಡಿಗೆಯನ್ನು ತೆಗೆದುಕೊಂಡು ಅಡಿಗೆ ಮನೆ ಹೊಕ್ಕಳು. ಸಂಗಮ್ಮನು ಮರಳಿ ಬರುವ ದಾರಿಯನ್ನೇ ಮಿಕಿಮಿಕಿ ನೋಡುತ್ತ ನೀಲಜ್ಜಿ ನಿಂತುಕೊಳ್ಳುವಷ್ಟರಲ್ಲಿ ಸಂಗಮ್ಮ ಹೊರಕ್ಕೆ ಬಂದೇ ಬಿಟ್ಟಳು. “ನಿನ್ನ ಮಕ್ಕಳ ಹೊಟ್ಟೆ ತಣ್ಣಗಾಗಲಿ ಸಂಗೂ” ಎಂದು ನೀಲಜ್ಜಿ ಹರಕೆ ನುಡಿಯಾಡುತ್ತಿರುವಾಗಲೇ ಸಂಗಮ್ಮ –

“ಇಗಾ ಅಜ್ಜಿ. ಈ ಹೊತ್ತು ಮಜ್ಜಿಗೆ ಆಗಿಲ್ಲ” ಎನ್ನುತ್ತ ಆಕೆಯ ಗಡಿಗೆಯನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಸಿದಳು. “ಅಯಽ ! ಅದೇ ಮಾತು ಖರೇ ಅಯ್ತಲ್ಲ” ಎನ್ನುತ್ತ ನೀಲಜ್ಜಿ ತನ್ನ ಮನೆಯ ಹಾದಿ ಹಿಡಿದಳು.

ಮಜ್ಜಿಗೆ ಆಗಿಲ್ಲವೆಂದು ಹೇಳುವುದಕ್ಕೆ ಸೊಸೆಗೇನು ಅಧಿಕಾರ ? ಆ ಮಾತನ್ನು ಅತ್ತೆಯಾದವಳೇ ಹೇಳಬೇಕು ಅಲ್ಲವೇ ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...