ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?”

“ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?”

“ಏನಂದರು ?” ಸಂಗಮ್ಮನ ಪ್ರಶ್ನೆ.

“ಮಜ್ಜಿಗೆ ಆಗಿಲ್ಲವೆಂದರು” ನೀಲಜ್ಜಿಯ ಪಡಿನುಡಿ.

“ಯಾರು ಹೇಳಿದರು ಹೀಗೆ ?”

“ನಿನ್ನ ಸೊಸೆ ನಿಂಬೆಕ್ಕ.”

“ಆಕೆಗೇನು ಅಧಿಕಾರ ಹಾಗೆ ಹೇಳಲಿಕ್ಕೆ. ಬಾನನ್ನೊಡನೆ” ಎಂದಳು ಸಂಗಮ್ಮ.

ಸಂಗಮ್ಮ ಮುಂದೆ ಮುಂದೆ, ನೀಲಜ್ಜಿ ಹಿಂದೆ ಹಿಂದೆ. ಹತ್ತುಮಾರು ಹೋಗುವಷ್ಟರಲ್ಲಿ ಮನೆ ಬಂತು. ಸಂಗಮ್ಮ ಬಿರಬಿರನೆ ತಲೆವಾಗಿಲು ಹೊಕ್ಕು ಪಡಸಾಲೆಯನ್ನು ಏರಿದಳು. ನೀಲಜ್ಜಿಯು ಮೆಲ್ಲನೆ ನಡೆದು ಬಂದು ಮೆಟ್ಟುಗಟ್ಟೆಯ ಬಳಿ ನಿಂತುಕೊಂಡಳು.

“ತಾ ಇಲ್ಲಿ. ಮಜ್ಜಿಗೆ ಒಯ್ಯುವುದಕ್ಕೆ ಏನು ತಂದಿರುವಿ?” ಎನ್ನುತ್ತ ಸಂಗವ್ವನು ಆಕೆ ಕೊಟ್ಟ ಚಿಕ್ಕ ಗಡಿಗೆಯನ್ನು ತೆಗೆದುಕೊಂಡು ಅಡಿಗೆ ಮನೆ ಹೊಕ್ಕಳು. ಸಂಗಮ್ಮನು ಮರಳಿ ಬರುವ ದಾರಿಯನ್ನೇ ಮಿಕಿಮಿಕಿ ನೋಡುತ್ತ ನೀಲಜ್ಜಿ ನಿಂತುಕೊಳ್ಳುವಷ್ಟರಲ್ಲಿ ಸಂಗಮ್ಮ ಹೊರಕ್ಕೆ ಬಂದೇ ಬಿಟ್ಟಳು. “ನಿನ್ನ ಮಕ್ಕಳ ಹೊಟ್ಟೆ ತಣ್ಣಗಾಗಲಿ ಸಂಗೂ” ಎಂದು ನೀಲಜ್ಜಿ ಹರಕೆ ನುಡಿಯಾಡುತ್ತಿರುವಾಗಲೇ ಸಂಗಮ್ಮ –

“ಇಗಾ ಅಜ್ಜಿ. ಈ ಹೊತ್ತು ಮಜ್ಜಿಗೆ ಆಗಿಲ್ಲ” ಎನ್ನುತ್ತ ಆಕೆಯ ಗಡಿಗೆಯನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಸಿದಳು. “ಅಯಽ ! ಅದೇ ಮಾತು ಖರೇ ಅಯ್ತಲ್ಲ” ಎನ್ನುತ್ತ ನೀಲಜ್ಜಿ ತನ್ನ ಮನೆಯ ಹಾದಿ ಹಿಡಿದಳು.

ಮಜ್ಜಿಗೆ ಆಗಿಲ್ಲವೆಂದು ಹೇಳುವುದಕ್ಕೆ ಸೊಸೆಗೇನು ಅಧಿಕಾರ ? ಆ ಮಾತನ್ನು ಅತ್ತೆಯಾದವಳೇ ಹೇಳಬೇಕು ಅಲ್ಲವೇ ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯೯
Next post ಬೆಗ್ಗರ್

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…