Home / ಕಥೆ / ಜನಪದ / ಸೊಸೆಗೇನು ಅಧಿಕಾರ ?

ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?”

“ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?”

“ಏನಂದರು ?” ಸಂಗಮ್ಮನ ಪ್ರಶ್ನೆ.

“ಮಜ್ಜಿಗೆ ಆಗಿಲ್ಲವೆಂದರು” ನೀಲಜ್ಜಿಯ ಪಡಿನುಡಿ.

“ಯಾರು ಹೇಳಿದರು ಹೀಗೆ ?”

“ನಿನ್ನ ಸೊಸೆ ನಿಂಬೆಕ್ಕ.”

“ಆಕೆಗೇನು ಅಧಿಕಾರ ಹಾಗೆ ಹೇಳಲಿಕ್ಕೆ. ಬಾನನ್ನೊಡನೆ” ಎಂದಳು ಸಂಗಮ್ಮ.

ಸಂಗಮ್ಮ ಮುಂದೆ ಮುಂದೆ, ನೀಲಜ್ಜಿ ಹಿಂದೆ ಹಿಂದೆ. ಹತ್ತುಮಾರು ಹೋಗುವಷ್ಟರಲ್ಲಿ ಮನೆ ಬಂತು. ಸಂಗಮ್ಮ ಬಿರಬಿರನೆ ತಲೆವಾಗಿಲು ಹೊಕ್ಕು ಪಡಸಾಲೆಯನ್ನು ಏರಿದಳು. ನೀಲಜ್ಜಿಯು ಮೆಲ್ಲನೆ ನಡೆದು ಬಂದು ಮೆಟ್ಟುಗಟ್ಟೆಯ ಬಳಿ ನಿಂತುಕೊಂಡಳು.

“ತಾ ಇಲ್ಲಿ. ಮಜ್ಜಿಗೆ ಒಯ್ಯುವುದಕ್ಕೆ ಏನು ತಂದಿರುವಿ?” ಎನ್ನುತ್ತ ಸಂಗವ್ವನು ಆಕೆ ಕೊಟ್ಟ ಚಿಕ್ಕ ಗಡಿಗೆಯನ್ನು ತೆಗೆದುಕೊಂಡು ಅಡಿಗೆ ಮನೆ ಹೊಕ್ಕಳು. ಸಂಗಮ್ಮನು ಮರಳಿ ಬರುವ ದಾರಿಯನ್ನೇ ಮಿಕಿಮಿಕಿ ನೋಡುತ್ತ ನೀಲಜ್ಜಿ ನಿಂತುಕೊಳ್ಳುವಷ್ಟರಲ್ಲಿ ಸಂಗಮ್ಮ ಹೊರಕ್ಕೆ ಬಂದೇ ಬಿಟ್ಟಳು. “ನಿನ್ನ ಮಕ್ಕಳ ಹೊಟ್ಟೆ ತಣ್ಣಗಾಗಲಿ ಸಂಗೂ” ಎಂದು ನೀಲಜ್ಜಿ ಹರಕೆ ನುಡಿಯಾಡುತ್ತಿರುವಾಗಲೇ ಸಂಗಮ್ಮ –

“ಇಗಾ ಅಜ್ಜಿ. ಈ ಹೊತ್ತು ಮಜ್ಜಿಗೆ ಆಗಿಲ್ಲ” ಎನ್ನುತ್ತ ಆಕೆಯ ಗಡಿಗೆಯನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಸಿದಳು. “ಅಯಽ ! ಅದೇ ಮಾತು ಖರೇ ಅಯ್ತಲ್ಲ” ಎನ್ನುತ್ತ ನೀಲಜ್ಜಿ ತನ್ನ ಮನೆಯ ಹಾದಿ ಹಿಡಿದಳು.

ಮಜ್ಜಿಗೆ ಆಗಿಲ್ಲವೆಂದು ಹೇಳುವುದಕ್ಕೆ ಸೊಸೆಗೇನು ಅಧಿಕಾರ ? ಆ ಮಾತನ್ನು ಅತ್ತೆಯಾದವಳೇ ಹೇಳಬೇಕು ಅಲ್ಲವೇ ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...