Home / ಕಥೆ / ಜನಪದ / ಸೊಸೆಗೇನು ಅಧಿಕಾರ ?

ಸೊಸೆಗೇನು ಅಧಿಕಾರ ?

ಸೆರಗಿನಿಂದ ಕೈ‌ಒರಸಿಕೊಂಡು ದಾರಿಯಲ್ಲಿ ಬರುತ್ತಿದ್ದ ನೀಲಜ್ಜಿಯನ್ನು ಕಂಡು ಸಂಗಮ್ಮ ಕೇಳಿದಳು – “ಎಲ್ಲಿಗೆ ಹೋಗಿದ್ದೆ ನೀಲಜ್ಜಿ ?”

“ನಿಮ್ಮ ಮನೆಗೆ ಹೋಗಿದ್ದೆ. ಮುಕ್ಕು ಮಜ್ಜಿಗೆ ಸಿಕ್ಕಾವೆಂದು ?”

“ಏನಂದರು ?” ಸಂಗಮ್ಮನ ಪ್ರಶ್ನೆ.

“ಮಜ್ಜಿಗೆ ಆಗಿಲ್ಲವೆಂದರು” ನೀಲಜ್ಜಿಯ ಪಡಿನುಡಿ.

“ಯಾರು ಹೇಳಿದರು ಹೀಗೆ ?”

“ನಿನ್ನ ಸೊಸೆ ನಿಂಬೆಕ್ಕ.”

“ಆಕೆಗೇನು ಅಧಿಕಾರ ಹಾಗೆ ಹೇಳಲಿಕ್ಕೆ. ಬಾನನ್ನೊಡನೆ” ಎಂದಳು ಸಂಗಮ್ಮ.

ಸಂಗಮ್ಮ ಮುಂದೆ ಮುಂದೆ, ನೀಲಜ್ಜಿ ಹಿಂದೆ ಹಿಂದೆ. ಹತ್ತುಮಾರು ಹೋಗುವಷ್ಟರಲ್ಲಿ ಮನೆ ಬಂತು. ಸಂಗಮ್ಮ ಬಿರಬಿರನೆ ತಲೆವಾಗಿಲು ಹೊಕ್ಕು ಪಡಸಾಲೆಯನ್ನು ಏರಿದಳು. ನೀಲಜ್ಜಿಯು ಮೆಲ್ಲನೆ ನಡೆದು ಬಂದು ಮೆಟ್ಟುಗಟ್ಟೆಯ ಬಳಿ ನಿಂತುಕೊಂಡಳು.

“ತಾ ಇಲ್ಲಿ. ಮಜ್ಜಿಗೆ ಒಯ್ಯುವುದಕ್ಕೆ ಏನು ತಂದಿರುವಿ?” ಎನ್ನುತ್ತ ಸಂಗವ್ವನು ಆಕೆ ಕೊಟ್ಟ ಚಿಕ್ಕ ಗಡಿಗೆಯನ್ನು ತೆಗೆದುಕೊಂಡು ಅಡಿಗೆ ಮನೆ ಹೊಕ್ಕಳು. ಸಂಗಮ್ಮನು ಮರಳಿ ಬರುವ ದಾರಿಯನ್ನೇ ಮಿಕಿಮಿಕಿ ನೋಡುತ್ತ ನೀಲಜ್ಜಿ ನಿಂತುಕೊಳ್ಳುವಷ್ಟರಲ್ಲಿ ಸಂಗಮ್ಮ ಹೊರಕ್ಕೆ ಬಂದೇ ಬಿಟ್ಟಳು. “ನಿನ್ನ ಮಕ್ಕಳ ಹೊಟ್ಟೆ ತಣ್ಣಗಾಗಲಿ ಸಂಗೂ” ಎಂದು ನೀಲಜ್ಜಿ ಹರಕೆ ನುಡಿಯಾಡುತ್ತಿರುವಾಗಲೇ ಸಂಗಮ್ಮ –

“ಇಗಾ ಅಜ್ಜಿ. ಈ ಹೊತ್ತು ಮಜ್ಜಿಗೆ ಆಗಿಲ್ಲ” ಎನ್ನುತ್ತ ಆಕೆಯ ಗಡಿಗೆಯನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಸಿದಳು. “ಅಯಽ ! ಅದೇ ಮಾತು ಖರೇ ಅಯ್ತಲ್ಲ” ಎನ್ನುತ್ತ ನೀಲಜ್ಜಿ ತನ್ನ ಮನೆಯ ಹಾದಿ ಹಿಡಿದಳು.

ಮಜ್ಜಿಗೆ ಆಗಿಲ್ಲವೆಂದು ಹೇಳುವುದಕ್ಕೆ ಸೊಸೆಗೇನು ಅಧಿಕಾರ ? ಆ ಮಾತನ್ನು ಅತ್ತೆಯಾದವಳೇ ಹೇಳಬೇಕು ಅಲ್ಲವೇ ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...