Home / ಕವನ / ಕವಿತೆ / ಸಾಹಿತ್ಯೋದ್ಯಾನ

ಸಾಹಿತ್ಯೋದ್ಯಾನ

ನೋಡಿಲ್ಲಿ ಕನ್ನಡದ ಸಾಹಿತ್ಯದುದ್ಯಾನ
ಸೊಂಪಾಗಿ ಬೆಳೆದಿಹುದು ಹತ್ತಾರು ಶತಮಾನ!
ಕವಿಕೃಷೀವಲರಿಲ್ಲಿ ಬೆಳೆದಿಹರು ಬಹುಕಾಲ
ಕಾವ್ಯತರುಗಣ ಕವನಲತೆ ಕುಂಜಗಳ ಜಾಲ
ಕನ್ನಡದ ನುಡಿ ಧೀರರಾಜರಾಶ್ರಯದಲ್ಲಿ
ಉನ್ನತಿಯ ಪಡೆದಿಹುದು ಉದ್ಯಾನ ಜಗದಲ್ಲಿ!
ಕಳೆಹುಟ್ಟಿ ಬೆಳೆದಿರಲು ಉದ್ಯಾನವನದಲ್ಲಿ
ವ್ಯಾಕರಣ ಕುಂಟೆಯನು ಹೂಡಿದರು ಕಳೆಯಲ್ಲಿ
ಛಂದಸ್ಸು ಹಲುಬೆಯನು ಹೊಡೆದಿಹರು ಹೊಲದಲ್ಲಿ
ಕಳೆಗಿಂತ ಬೆಳೆಮುಂದೆ ಹುಲುಸಾಯ್ತು ಎಲ್ಲೆಲ್ಲು!
ನೃಪತುಂಗ ಚಕ್ರೇಶ ಮಾಡಿದನು ದಾರಿಯನು
ಮುಂದೆ ಬರುವರಿಗೊಂದು `ಕವಿರಾಜಮಾರ್ಗ’ವನು
ಅಲ್ಲಿಂದ ಕಾವ್ಯಸಸಿ ಹಾಲ್ತುಂಬಿ ಹುಲುಸಾಯ್ತು
ಜೈನಕವಿಗಣ ಸೇರಿ ಕೈನೀರ ನೆರೆದಾಯ್ತು
ಪಂಪರನ್ನರ ಪೊನ್ನಜನ್ನರ ಕೃಷಿಯನಾಡು
ಸೊಂಪು ಕಾವ್ಯದ ಬೆಳೆಗೆ ಇಂಬಾಯ್ತು ಈ ಬೀಡು
ಸಂಸ್ಕೃತದ ಪುಣ್ಯತರವಾಹಿನಿಯ ಹರಿಸಿದರು
ಸಾಹಿತ್ಯದುದ್ಯಾನ ತರುಲತೆಗೆ; ಬರಿಸಿದರು
ರಾಜರಾಜರನು ಘನದೇವದೇವರನಲ್ಲಿ
ವನಕೇಳಿ ಜಲಕೇಳಿಯಾಣೆ ಸಾಹಿತ್ಯದಲ್ಲಿ!
ಪಾಮರರು ನಿಂತಾಯ್ತು ಮುಳ್ಳು ಬೇಲಿಯ ಹಿಂದೆ
ಬಿಗುಮಾನ ಬಲವಾಯ್ತುು ಬಡಜನರ ಕಣ್ಮುಂದೆ!
ಮುಂದೆ ಬಂದರು ವೀರಶೈವ ಕವಿಕೃಷೀವಲರು
ಹಂಪೆ ಹರಿಹರ ರಾಘವಾಂಕಾದಿ ಬುಧಜನರು
ಬೆಳೆಸಿದರು ಚಿರಭಕ್ತಿ ಕಾವ್ಯತರುಗಳನಿಲ್ಲಿ
ರಚಿಸಿದರು ನೀತಿಮಾರ್ಗವನು ಸಾಹಿತ್ಯದಲ್ಲಿ.
ಬಸವಣ್ಣ ಮಹದೇವಿ ಜಸವೆತ್ತ ಅಲ್ಲಮರು
ಲಾವಣ್ಯತರ ‘ವಚನ’ ಲತೆಗಳನು ಬೆಳೆಸಿದರು.
ಸಾಂಗತ್ಯ ಚೌಪದಿ ತ್ರಿಪದಿ ವರಷಟ್ಟದಿಯು
ಎಂದೆಂಬ ಕಾವ್ಯ ಸಸ್ಯಗಳಿಗಾಯ್ತು ಪಾತಿಯು.
ವೀರನಾರಣ ರುದ್ರಭಟ್ಟಾರ್ಯ ಲಕ್ಷ್ಮೀಶ
ಕವಿಕೃಷೀವಲರಿಲ್ಲಿ ಪಡೆದ ಕವಿತಾವೇಶ
ಮೂಡಿಹುದು ಧೃವಕಾವ್ಯತರುವೃಂದ ರೂಪದಲಿ
ತಣಿಸುತ್ತ ರಸಿಕರನು ಕಾವ್ಯರಸಪಾನದಲಿ.
ಕನಕ ವಿಟ್ಟಲ ವ್ಯಾಸ ವರದಾಸಗಣವಿಲ್ಲಿ
ಭಕ್ತಿಲತೆಯನು ನೆಟ್ಟಿಹರು ತಣಿದು ಮನದಲ್ಲಿ.
ಅಂದಿನಿಂ ಎಂದೆಂದು ಕನ್ನಡದ ರಾಜಗಣ
ಮಾಡಿಹುದು ಕನ್ನಡದ ಉದ್ಯಾನಕಾವರಣ.
ರಾಷ್ಟ್ರಕೂಟರು ಧೀರಚಾಲುಕ್ಯ ಹೊಯ್ಸಳರು
ವಿಜಯನಗರ ಸಾಮ್ರಾಜ್ಯ ಧುರಧೀರ ಭೂಪಾಲರು
ಮೈಸೂರು ಯದುವಂಶ ಮಹರಾಜ ಪುಂಗವರು
ಮನವಿಟ್ಟು ಮಾಡಿಹರು ಈ ನುಡಿಯ ಶೃಂಗಾರ.
ಕನ್ನಡದ ಉದ್ಯಾನ ವರ್ಧಿಸಲಿ ಇಳೆಯಲ್ಲಿ
ಕಾವ್ಯತರು ಕವನಲತೆ ಎಂದೆಂದು ಬೆಳೆದಿಲ್ಲಿ.
*****
Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...