Home / ಕವನ / ಕವಿತೆ / ವಿದ್ಯಾರಣ್ಯ

ವಿದ್ಯಾರಣ್ಯ

ಪರಶಿವನು ವರತಪವನೆಸಗಿದನು ವನದಲ್ಲಿ
ಗಿರಿಕನ್ಯೆ ಪಾರ್ವತಿಯ ಶುಶ್ರೂಷೆಯಲ್ಲಿ!
ಚಿರಕಾಲ ಸಾಗದೆಯೆ ಮನಸೋತ ವನಿತೆಯಲಿ
ಜಗವ ಮುಳುಗಿಸಿದ ಬೆಂಕಿ ಬೇಗುದಿಯಲ್ಲಿ ೧

ಯತಿಯೆ! ವಿದ್ಯಾರಣ್ಯ! ಕುಳಿತಿರುವೆ ತಪದಲ್ಲಿ
ತರುಣಿಮಣಿ ತುಂಗಭದ್ರೆಯ ಸೇವೆಯಲ್ಲಿ!
ಮನವಿನಿತು ಚಲಿಸದೆಯೆ ವರಯೋಗ ಮೌನದಲಿ
ಸಾಧಿಸಲು ಮುಕ್ತಿಯನು ಸ್ವಾತಂತ್ರ್ಯದಲ್ಲಿ ೨

ತುಂಗಭದ್ರೆಯ ತೆರೆಯ ಮಂಜುಳದ ನಾದದಲಿ
ಗಿಳಿವಿಂಡಿನಾ ಚಿಲಿಮಿಲಿಯ ಮೆಲ್ಲುಲಿಯಲಿ
ಕೋಗಿಲೆಯ ಕಲಕಂಠ ಮಧುರತರ ಗಾನದಲಿ
ವೈರಾಗ್ಯ ಸಾಧನೆಯ ಹಿಡಿದೆ ಯೋಗದಲ್ಲಿ ೩

ನದಿಯ ಕಲರವ ನಿನ್ನ ಜಪಮಾಲೆ ಮಂತ್ರಗಳು
ಅರಗಿಣಿಯ ಸವಿನುಡಿಯೆ ವೇದಘೋಷಗಳು
ಕೋಗಿಲೆಯ ಸವಿಗಾನ ಮೊರೆಯುತಿಹ ಓಂಕಾರ
ಸಂನ್ಯಾಸಿ ನಿನ್ನ ಮನವೇ ನಿರ್ವಿಕಾರ! ೪

ಹಿಂದಲ್ಲಿ ಪರಶಿವನು ತಪಗೆಟ್ಟ ಕತದಿಂದ
ಬಂದಿಹರೊ! ವಿದ್ಯಾರಣ್ಯ ರೂಪದಲಿಂದು!
ತಪಗೆಯ್ದು ಪರಿಪೂರ್ಣ ಸಿದ್ಧಿಯನು ಪಡೆಯಲೆಂದು
ಕರ್ಣಾಟದೇಕೀಕರಣವೇ ಗುರಿಯೆಂದು. ೫

ಪಂಪಾಸರಸಿನಲಿ ಈಜುತಿರುವಾ ಕಲಹಂಸ
ಪದಗತಿಯ ವೈಖರಿಯ ನರಿಯೆ ಪರಮಹಂಸ!
ನಿನ್ನ ವೈರಾಗ್ಯ ಗುರಿಯೇನೊ! ಯತಿರಾಜಹಂಸ!
ರಾಜಯೋಗವ ಹಿಡಿದೆ ಯತಿಕುಲೋತ್ತಂಸ! ೬

ಹುಕ್ಕ ಬಕ್ಕರ ಹೂಡಿದೆಯ ರಾಜ್ಯರಥದಲ್ಲಿ!
ಸಂನ್ಯಾಸಿ ಸಾರಥಿಯು ನೀನೆ ಜಗದಲ್ಲಿ!
ಒಕ್ಕಲಿಕ್ಕಿದೆ ಧರ್ಮದ್ರೋಹಿಗಳ ಛಲದಲ್ಲಿ
ಕನ್ನಡದ ಸಾಮ್ರಾಜ್ಯ ದೇವಿಯಡಿಯಲ್ಲಿ ೭

ರಾಜಯೋಗವು ಭಕ್ತಿಯೋಗವು ಕರ್ಮಯೋಗವು
ಕೂಡಿದಾ ಬ್ರಹ್ಮತೇಜೋಮೂರ್ತಿ ನಮಿಪೆ!
ಹರಸು ಕನ್ನಡನಾಡಿನೇಳ್ಗೆಯನು ಯತಿವರನೆ!
ಶಿರಬಾಗಿ ನಮಿಸುವೆನು ವೈರಾಗ್ಯಮೂರ್ತಿಯೇ ೮
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...