ಮನೆ ಅಳಿಯ

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್ತಿದ್ದರು.

“ನನ್ನ ಹಣೇಬರಹದಾಗ ಇಷ್ಟೇ ಬರೆದಾದ. ಅದಕ್ಕ್ಯಾಕ ಚಿಂತಿ ಮಾಡಬೇಕು” ಎಂದು ವಿಚಾರಮಾಡಿ ದಿನಾಲು ಕೆಲಸಮಾಡುತ್ತ ಇದ್ದನು. ಒಂದುದಿನ ಹೊಲದಾಗ ಎತ್ತುಬಿಟ್ಟಿದ್ದ. ಧಾರೆ ಮಳೆ ಸುರೀಲಿಕ್ಕ ಹತ್ತಿತು. ಆ ಸಮಯದಾಗ ನೀರಿನ ಬಿಂದಿಗೆಯೊಳಗಿನ ನೀರೆಲ್ಲ ಚೆಲ್ಲಿ ಅದರಲ್ಲಿ ಅಂಗಿ, ಧೋತರ ತುರುಕಿದನು. ತಾನು ಬರಿಯ ಚಡ್ಡಿಯಮೇಲೆ ನಿಂತನು. ಬಿಂದಿಗೆ ಬೋರಲು ಹಾಕಿದ- ಹಾಂಗೇ ತಾಸು ಗಟ್ಟಲೆ ನಿಂತನು. ಮಳೆ ಹೊಡೆದು ಹೊಡೆದು ಬಹಳ ಹೊತ್ತಿನ ಮೇಲೆ ನಿಂತು ಬಿಟ್ಟಿತು. ಛಕ್ಕನೆ ಬಿಸಿಲುಬಿತ್ತು. ಉಟ್ಟುಕೊಂಡು ತೊಟ್ಟುಕೊಂಡು ನಿಂತನು. ಅಲ್ಲಿಗೆ ಒಬ್ಬ ಗೋಸಾವಿ ಮೈತೋಯಿಸಿಕೊಂಡು ಬಂದನು. “ನಾನು ಇಷ್ಟು ತೋಯಿಸಿಕೂಂಡೀನು. ಈ ಮನುಷ್ಯ ಏನೂ ತೋಯಿಸಿಕೊಂಡಿಲ್ಲ. ಇದರಾಗೇನಿದೆ ಚಮತ್ಕಾರ” ಎಂದುಕೊಂಡನು. “ಯಾಕಪ್ಪ ನಿನ್ನ ಮೈಮ್ಯಾಗ ಮಳೆ ಬಿದ್ದೀಲ್ಲೇನು” ಎಂದು ಕೇಳಿದನು.

“ನಂದು ನನಗೇ ಗೊತ್ತು. ನಿಂದು ನಿನಗೇ ಗೊತ್ತು. ನನಗ ಇದರ ಅರ್ಥಹೇಳು ಅಂದರ, ನಿನ್ನ ಹಂತ್ಯಾಕಿದ್ದ ಮಂತ್ರ ತಂತ್ರ ಹೇಳಿದೆರ ನಾ ನನ್ನ ಹಿಕಮತಿ ಹೇಳತೀನಿ” ಎಂದು ನುಡಿದನು ಅಳಿಯ-

ತನ್ನ ಪರಿಸ್ಥಿತಿಯನ್ನೆಲ್ಲ ಅಳಿಯ ಹೇಳಿದನು. “ಹೂತ್ತರಳಿ ದನಕಾಯಲು ಅತ್ತ ಮಾವ ಕಳಿಸತಾರ. ಅತ್ತಿ ಮಾವ ಹೇಣತಿ ಯಾರೂ ಸೇರೂದಿಲ್ಲ. ಈ ಪರಿಸ್ಥಿತಿ ಹೋಗೂ ಸಲುವಾಗಿ ಒಂದು ಉಪಾಯ ಹೇಳು” ಎಂದು ಗೋಸಾವಿಗೆ ಕೇಳಿಕೊಂಡನು. ಗೋಸಾವಿ ಅಲ್ಲೇಬಿದ್ದ ಏಳು ಹರಳು ಆರಿಸಿಕೊಂಡನು.

“ಒಂದು ಹರಳು ಒಗೆದು ಅಲ್ಲೇ ಚಿಟಕಾಸಿ ಕೂಡು, ಅಂದರ ಅಲ್ಲೇ ನೆಲಕ್ಕ ಹತ್ತಂಡಿ ಆಗಿ ಚಿಟಕಾಸಿಕೊಂಡು ಬಿಡತಾದ. ಅತ್ತಿ ಮಾವ ಮಲಕೊಂಡ ಜಾಗಾದಿಂದ ಏಳಬಾರದು – ಎರಡು ಹರಳು ಒಗೆದರೆ – ಯಾರೂ ಅವರೀಗಿ ಎಬ್ಬಿಸಲಿಕ್ಕೆ ಸಾಧ್ಯವಿಲ್ಲ. ಹೀಂಗ ಏಳು ಹರಳು ಉಪಯೋಗಿಸುವುದರಾಗ ಅತ್ತಿ ಮಾವ ಹಾದೀ ಮ್ಯಾಲ ಬರತಾರ” ಎಂದು ಹೇಳಿ, ಅಳಿಯನ ಹಿಕಮತ್ತಿಯ ಬಗ್ಗೆ ಕೇಳುತ್ತಾನೆ.

“ಗುಂಡರಗಿಯೊಳಗೆ ಅರಿವೆ ತುರುಕಿ ಬಿಂದಿಗೆ ಬೋರಲ ಹಾಕಿದ್ದರಿಂದ ಮಳಿ ಹತ್ತಲಿಲ್ಲ.”

ಅಳಿಯ ಮನೆಗೆ ಬಂದು ಬಂಕಿನಲ್ಲಿ ಮಲಗಿಕೊಂಡನು”. ಬಾಗಿಲಲ್ಲಿ ಬಂದು ಅತ್ತೆ ಮಾವ ಮಲಗಿದಲ್ಲೆ ಮಲಗಲಿ ಎಂದು ಸೈ ಎಂದನು. ಬಾಗಿಲಿಗೆ ಬಂದು ಬಾಗಿಲು ತೆರೆಯಿರಿ ಅನ್ನುತ್ತಾನೆ. ಅವರು ನೆಲಕ್ಕೆ ಮೆತ್ತಿಕೊಂಡವರು ಮೇಲೆ ಏಳಲೊಲ್ಲರಾದರು. “ತೊರೆಯ ಆಚೆಗೆ ಜಾಣಿಹಾಳ. ಅವಳೀಗಿ ಕೇಳಿ ಬರ್ರಿ” ಎಂದು ಮಂದೀಗಿ ಕಳಿಸ್ತಾರ. ಜಾಣಿ ನಡುನೀರೊಳಗಿಂದ ಹಾಯ್ದು ಬರುವಾಗ ಇಂವ ನಿಂತಲ್ಲಿ – ನಿಂತು – ನೀರಾಗ ನಿಂತಕ್ಕಿ ನಿಂತಾಂಗೇ ಇರಲಿ ಎಂದು ಗಟ್ಟಿಯಾಗಿ ಹೇಳುತ್ತಲೇ ಹರಳ ಒಗೆಯುತ್ತಾನೆ.

ಜಾಣಿ ಇವನಿಗೆ ಅಂಗಲಾಚಿ ಬೇಡುತ್ತಾಳೆ – “ನನಗೆ ಬಿಡುಗಡೆ ಮಾಡಿದರೆ ನಿನಗ ಬೇಡಿದ್ದು ಕೊಡುತ್ತೀನಿ.”

ನಡೆ ಅಂದಕೂಡಲೇ ನೀರೂಳಗಿಂದ ಜಾಣಿ ಪಾರಾಗಿ ಮುಂದೆ ಮುಂದೆ ಬಂದಳು. ಬಂದು ಅತ್ತೆ ಮಾವಂದಿರಿಗೆ ಬುದ್ಧಿ ಹೇಳಿದಳು –

“ನಿಮ್ಮ ಅಳಿಯನಿಗೆ ಈ ರೀತಿ ಕಾಡಬೇಡಿರಿ. ಇಲ್ಲ ಅಂದರೆ ನೀವು ನೆಲದ ಮ್ಯಾಗಿಂದ ಏಳಲಿಕ್ಕೆ ಸಾಧ್ಯವೇ ಇಲ್ಲ” ಎಂದು ಗಟ್ಟಿಯಾಗಿ ಹೇಳುತ್ತಾಳೆ.

“ನಾವು ಹಿಂಥಾ ಕೆಲಸ ಇನ್ನೆಂದೂ ಮಾಡೂದಿಲ್ಲ” ಎಂದು ಗಲ್ಲಗಲ್ಲ ಬಡಕೊಳ್ಳುತ್ತಾರೆ. ಏಳಬೇಕೆನ್ನುತ್ತಾರೆ, ಏಳುವದಾಗಲಿಲ್ಲ. ಆಗ ಅಳಿಯ “ನಡೆ” ಅಂದ ಕೂಡಲೇ ಗಪ್ಪನೆ ಎದ್ದು ಕುಳಿತರು.

ಅಂದಿನಿಂದ ಅಳಿಯದೇವರ ಸತ್ಕಾರ ನಡೆಯಲು ಆರಂಭವಾಯಿತು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೦೫
Next post ಮೂಡಲಲ್ಲಿ ವಿಕಸಿಸುವ ಪ್ರಪಂಚ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys