Home / ಲೇಖನ / ಇತರೆ / ದಿ ಡೈರಿ ಆಫ್ ಎ ಎಂಗ್ ಗರ್‍ಲ್ – ಆನ್‌ ಫ್ರಾಂಕ್ – ಗುರುವಾರ, ಅಕ್ಟೋಬರ್ ೮, ೧೯೪೨

ದಿ ಡೈರಿ ಆಫ್ ಎ ಎಂಗ್ ಗರ್‍ಲ್ – ಆನ್‌ ಫ್ರಾಂಕ್ – ಗುರುವಾರ, ಅಕ್ಟೋಬರ್ ೮, ೧೯೪೨

ಪ್ರೀತಿಯ ಕಿಟಿ,

ನಿನ್ನೆ ಇನ್ನೊಂದು ಕಲಹ. ಮಮ್ಮಿ ಹೆದರಿಕೆ ಹುಟ್ಟಿಸುವಷ್ಟು ಕೋಪಗೊಂಡಿದ್ದರು. ಡ್ಯಾಡಿಯ ಹತ್ತಿರ ನನ್ನ ಬಗ್ಗೆ ಅವರಿಗೆ ಏನೆನ್ನಿಸುತ್ತದೆ ಎಂಬುದನ್ನು ಹೇಳಿದರು. ಆನಂತರ ತುಂಬಾ ಆರ್ದ್ರವಾಗಿ ಕಣ್ಣಿರಿಟ್ಟರು. ನಾನು ಅಲ್ಲಿಂದ ಎದ್ದು ಹೊರಟೆ. ಯಾವತ್ತೂ ಬರದಂತಹ ತಲೆನೋವು ನನ್ನ ಬಾಧಿಸಿತು. ಕೊನೆಗೆ ನನಗೇಕೆ ಅಮ್ಮನಿಗಿಂತ ಡ್ಯಾಡಿ ಹೆಚ್ಚು ಪ್ರಿಯರಾಗುತ್ತಾರೆ ಎಂದು ಡ್ಯಾಡಿಗೆ ಹೇಳಿದೆ. ಅದಕ್ಕವರು ಆ ಭಾವನೆಯಿಂದ ನಾನು ಹೊರಬರಬೇಕೆಂದರು. ಆದರೆ ನಾನು ನಂಬುವುದಿಲ್ಲ. ಒತ್ತಾಯಪೂರ್ವಕ ಮಮ್ಮಿಯೊಂದಿಗೆ ಶಾಂತವಾಗಿರಬೇಕಾಗಿದೆ. ಮಮ್ಮಿಗೆ ಹುಷಾರಿಲ್ಲದಿರುವಾಗ ಇಲ್ಲ ತಲೆನೋವು ಬಾಧಿಸಿದಾಗ ನಾನು ಅವರಿಗೆ ಕೆಲಸದಲ್ಲಿ ಸ್ವ‌ಇಚ್ಛೆಯಿಂದ ಸಹಾಯ ಮಾಡಬೇಕೆಂದು ಡ್ಯಾಡಿ ಬಯಸುತ್ತಾರೆ. ಆದರೆ ಅದು ನನಗಾಗದು. ಯಾಕೆಂದರೆ ನನಗೆ ಫ್ರೆಂಚ್ ಕಲಿಕೆಯ ಕೆಲಸ ಬಹಳವಿದೆ. ಅಲ್ಲದೇ ಈಗ ನಾನು `La Belle Nivernaise’, `Assault’, `Joop ter Heul’ ಓದುತ್ತಿರುವೆ.

ನಿನ್ನ,
ಆನ್

Tagged:

Leave a Reply

Your email address will not be published. Required fields are marked *

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...