ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೧೫
Next post ವೋಟು ಬೇಟೆಯಾಟ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…