Home / ಕಥೆ / ಜನಪದ / ಯಾರಿಗೆ ಕೊಡಬೇಕು ಕನ್ಯೆ

ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...