Home / ಕವನ / ಕವಿತೆ / ಸರಸ್ವತಿಗೆ

ಸರಸ್ವತಿಗೆ

ಜಗಭಾಂಡ ತುಂಬಿ ತುಳುಕುವ
ಸೊಗಸೆಂಬೀ ಸೋಮವನ್ನು ಸೊಗದಿಂ ಕುಡಿದು
ನಗೆ ನಗುತ ನುಡಿಯನಾಡುವ
ಬಗೆಯೇ ಬಗೆ, ನಿನ್ನ ‘ಕಾವ್ಯ ಸೇವೆ’ ಯ ಬಿರುದು!
ಕನ್ನಡ ಕಂದನು ನಾನೈ
ಉನ್ನತ ಉದಾತ್ತ ಭರತ ಬಾಲನು ನಾನೇ!
ಸನ್ನುತ ವಿಶ್ವಕುಮಾರನು,
ನನ್ನಿಯ ಜಗದಂತರಾತ್ಮಶಿಶುವೂ ತಾನೇ!
ಅನಿಸಲಿ ಅನಿಸಲಿ ಜಗವೆನ-
ಗನಿ- ಅನಿಸಲಿ ತಾಯೆ ಜನಿಸಲನಿಸಿಕೆಯಿಂದು!
ನನಗೆ ವರ ನೀಡು ರಸವತಿ
ಅನಿಸಿಕೆಯಾ ಜಗದ ಮಗನು ಆಗಲಿ ಎಂದು!
ಎರಕವು ಮರುಗಲು ಬರುವದೆ
ಇರುತಿಹುದದು ಅಂತರಂಗದಂಕುರಮೊಂದು!
ನರನಿದರ ನೆರವಿನಿಂದಲೆ
ನೆರೆಯೆಲ್ಲರನೆನ್ನ ಬಲ್ಲ ತನ್ನವರೆಂದು !
ಕನ್ನಡ ಕಂದನ ಮನದೊಳು
ನನ್ನಿಯು ನೀನಾಗಿ ಕವನ ನೆನಿಸುವ ಕನಸು
ಚಿನ್ನದ ರನ್ನದ ಮುಗಿಲಿನ
ಬಣ್ಣಂಗಳ ಬಗೆಯೊಳೀಗ ಬೀಳುತಲಿಹುದು!
ಮನಸಿನ ಕರುಳಿನ ಕನಸನು
ನನಸನು ಮಾಡವ್ವ! ಅಂತರಂಗದಿ ಮೂಡೌ!
ಇನಿದಾಗಿ ಹರಿವ ರಸಗಳು
ಜನಿಸಲಿ ನನಸಿನಲಿ! ನನಸು ಕನಸಿನ ಗೊನೆಯು!
‘ಸತ್ಯವು ಸೊಬಗೇ; ಸೊಬಗೂ
ಸತ್ಯವು’ ‘ಸೊಬಗುಳ್ಳ ಸುದ್ದಿ ಸೊಗಸಿನ ಸೂರಿ’!
ನಿತ್ಯದೊಳೀ ಮಂತ್ರವ ಜಪಿ-
ಸುತ್ತಿರಲೀ ಸತ್ಯ ಸೃಷ್ಟಿ ಸೊಬಗಿನ ಸೃಷ್ಟಿ !
*****
Tagged:

Leave a Reply

Your email address will not be published. Required fields are marked *

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...