Home / ಕಥೆ / ಜನಪದ / ಪಾದರಕ್ಷೆಯ ಪುಣ್ಯ

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು – “ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೀಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದು ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ಬೆಣ್ಣೆ, ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ
ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ – ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತು ರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು – “ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ” ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಯಣದ ಸಿದ್ಧತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ – ‘ತಮ್ಮ ಪಾದರಕ್ಷೆ ಯ ಪುಣ್ಯ’ ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು – “ಎಲ್ಲಿ ಮಾಯವಾದವು?”

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು-

“ಹಿಂದಿನೂರಿನ  ಶಿಷ್ಯಮಕ್ಕಳು ಮಾತುಮಾತಿಗೆ ‘ತಮ್ಮ ಪಾದರಕ್ಷೆಯ ಪುಣ್ಯ’ ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ.”

“ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ – ಗುರುವಿನಿಂದ ದಕ್ಷಿಣೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...