Home / ಕವನ / ಕವಿತೆ / ಬ್ರಹ್ಮ ಕಮಲ

ಬ್ರಹ್ಮ ಕಮಲ

ಗವ್ವನೆಯ ಅಮವಾಸೆಯ ಕಗ್ಗತ್ತಲು
ಮಳೆಗಾಲದ ಕವದಿಹೊದ್ದು ಗಡದ್ದಾಗಿ ಮಲಗಿದ್ದು
ಕನಸುಗಳೂ ಒಡೆಯದ ನಿಶ್ಶಬ್ದ ರಾತ್ರಿಗೆ
ಸವಾಲು ಎನ್ನುವಂತೆಯೋ ಏನೋ
ಕತ್ತಲಂಗಳಕೆ ಚಂದ್ರಲೇಪಿತ ಕಮಲೆ ಹುಟ್ಟಬೇಕೆ?

ಎಳೆಗೂಸು ಎಸಳು ಇನ್ನೂ ಹೊಕ್ಕಳಬಳ್ಳಿ ಬಿಡಿಸಿಲ್ಲ
ಕಣ್ಣಲ್ಲೇ ಕಣ್ಣಿಟ್ಟಿದ್ದರೂ ಉಗುರಿಗೆ ಗುಲಾಬಿ ತುಂಬುತ
ಚಂದ್ರವದನೆಯಾಗಿ ಎದೆಯಂಗಳದಿ ಕನಸುಗಳ
ಪುಳಕಿಸುತ ನಿಂತಳಲ್ಲ ತರಳೆ ಸುಷ್ಮಿತೆ
ಏನಿವಳ ಬಿಂಕ ಬಿನ್ನಾಣ ಆಹಾ! ಮದುವಣಗಿತ್ತಿ

ಕತ್ತಲೆಯೊಂದಿಗೆ ಕೂಡಿ ಪ್ರೀತಿಬೆಳೆದದ್ದು
ಏನೆಲ್ಲ ಪಿಸುಗುಟ್ಟಿದ್ದು ಹೇಳಬೇಕೆ? ನಾಚಿದಳು
ಮೃದು ಸ್ಪರ್ಶ ಸುವಾಸನೆ ರೋಮಾಂಚನೆಗೆ
ಕತ್ತಲು ಬೆರಗಾಗಿ ಕಣ್ಣುಬಿಟ್ಟದ್ದು ಹುಡುಕಾಟ
ಅದೇಕೋ ಶ್ವೇತಕಮಲೆ ಬ್ರಹ್ಮನಾಭಿ ಸೇರಿದ್ದು
ಮತ್ತೆ ವಿರಹಕ್ಕೆ ಹಾದಿಯಾಯಿತೆ?
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...