Home / ಕವನ / ಕವಿತೆ / ಅಸ್ಮಿತೆ

ಅಸ್ಮಿತೆ

ಬ್ರೆಡ್‌ಗೆ ಚೀಸ್ ಹಚ್ಚಿ ತಿನ್ನುವಾಗ
ಪಿಝಾಹಟ್‌ದಲ್ಲಿ ಕುಳಿತಾಗ
ಸ್ಟಾರ್ ಹೋಟೆಲಿನ ಮಂದ ಬೆಳಕಿನ ಜಾಝ್‌ದಲ್ಲಿ
ಶಾಪಿಂಗ್ ಮಳಿಗೆಯಲ್ಲಿ ಏ/ಸಿ ಕಾರಿನಲ್ಲಿ
ಇರುವಾಗಲೂ ಇಲ್ಲಿ
ಎಲ್ಲರೆದೆಯಲಿ ಹಕ್ಕಿಗಳೇನೇನೋ
ಮಾತಾಡುತ್ತವೆ.

ಏನೆಲ್ಲ ಐಶಾರಾಮಿ ಬದುಕು ವಿದೇಶಗಳಲಿ
ಆದರೂ ಮನಸು ಮನಸುಗಳಿಗೇಕೋ
ಒಂಟಿತನ ಆತಂಕ
ಕಳೆದು ಹೋಗುವ ಭಯ ತಲ್ಲಣ
ಇದ್ದಕ್ಕಿದ್ದಂತೆ ಒಮ್ಮೊಮ್ಮೆ ಮರಳಿ
ಊರಿಗೆ ಹೊರಟೇ ಬಿಡಬೇಕೆನ್ನುವ
ಉಮ್ಮಳ ಕೊನೆಗೆ
ನಮ್ಮ ನಾವೇ ಸಮಾಧಾನಿಸಿಕೊಳ್ಳುವ
ಸಂತೈಯಿಸಿಕೊಳ್ಳುವ ಎಲ್ಲದರ ಲೆಕ್ಖಾಚಾರ
ಸಮೃದ್ಧಿಯ ನಡುವೆಯೂ ಒಮ್ಮೊಮ್ಮೆ
ಮನಸು ಭಾರ ಮರುಭೂಮಿ.

ಹಬ್ಬ ಜಾತ್ರೆಗಳ ವಿಶೇಷತೆಗಳು
ಮದುವೆ ಗೃಹಪ್ರವೇಶಗಳ ಸಂಭ್ರಮ
ಸಂಬಂಧಿಕರ ಭೇಟಿ ಮಾತು – ಹರಟೆ
ತುಂಟ ಹುಡುಗರ ತುಂಟಾಟಗಳನೆಲ್ಲ ಹೊತ್ತ
ಅಂಚೆ ಪತ್ರಗಳು ಬರುತ್ತವೆ
ಮನಸು ಬೆಚ್ಚಗಾಗಿ ಕಣ್ಣು ಮಂಜಾಗುವುದು
ಎಲ್ಲದಕೂ ಸ್ಪರ್ಧೆ ಬಿಳಿಯರೊಂದಿಗೆ
ಆಫೀಸು ಶಾಲೆ ಕಾಲೇಜು ಎಲ್ಲೆಲ್ಲೂ-
ದೂರ ದೂರ ಇರಬೇಡಿ ದೇಶಬಿಟ್ಟು ಬಂದವರಿಲ್ಲಿ
ಜಾತಿ ಮತ ಭಾಷೆ ಯಾವುದಾದರೇನು
ಭಾರತೀಯರಲ್ಲವೇ ನೀವೆಲ್ಲ
ನಿಮ್ಮತನಕಾಗಿ ಒಗ್ಗೂಡಿ
ಹಕ್ಕಿಗಳೆಲ್ಲರೆದೆಯೊಳಗೆ ಗರಿಬಿಚ್ಚುತ್ತವೆ.

ಈಗ ವಾರಾಂತ್ಯದ ಪಾರ್ಟಿ, ಹಬ್ಬಗಳಿಗೆ
ಹಪಹಪಿಸುತ್ತೇವೆ.
ಕೊಳಲು, ಸಿತಾರ್, ಮೃದಂಗದವರು
ಜೋಕ್ಸ್, ಡಾನ್ಸ್, ಶಾಯರಿಯವರು
ದಸರಾ, ದೀಪಾವಳಿ ಪ್ರಿಯರು
ರೇಶ್ಮೆ ಸೀರೆ ಉಟ್ಟು ನಮಸ್ಕರಿಸುವವರು
ರಾಜಕೀಯ, ಇತಿಹಾಸ, ವಿಜ್ಞಾನ ತಂತ್ರಜ್ಞಾನಗಳ
ಚರ್ಚಿಸುವವರು ಎಲ್ಲ ಸೇರುತ್ತೇವೆ
ವಿದೇಶಿಗರನ್ನು ಆಹ್ವಾನಿಸಿ
ಸಂಸ್ಕೃತಿ, ಸಾಧನೆ ಬಿಂಬಿಸುತ್ತಿದ್ದಂತೆ
ಫೋಟೋಗಳು ಕ್ಲಿಕ್ ಆಗುತ್ತವೆ
ನಮ್ಮ ಐಡೆಂಟಿಟಿಗೆ ನಮಗೆ ಹೆಮ್ಮೆ
ಇನ್ನಷ್ಟೂ ವರ್ಷ ಇರಬೇಕೆನಿಸುತ್ತದೆ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...