Home / ಕವನ / ಕವಿತೆ / ಅಸ್ಮಿತೆ

ಅಸ್ಮಿತೆ

ಬ್ರೆಡ್‌ಗೆ ಚೀಸ್ ಹಚ್ಚಿ ತಿನ್ನುವಾಗ
ಪಿಝಾಹಟ್‌ದಲ್ಲಿ ಕುಳಿತಾಗ
ಸ್ಟಾರ್ ಹೋಟೆಲಿನ ಮಂದ ಬೆಳಕಿನ ಜಾಝ್‌ದಲ್ಲಿ
ಶಾಪಿಂಗ್ ಮಳಿಗೆಯಲ್ಲಿ ಏ/ಸಿ ಕಾರಿನಲ್ಲಿ
ಇರುವಾಗಲೂ ಇಲ್ಲಿ
ಎಲ್ಲರೆದೆಯಲಿ ಹಕ್ಕಿಗಳೇನೇನೋ
ಮಾತಾಡುತ್ತವೆ.

ಏನೆಲ್ಲ ಐಶಾರಾಮಿ ಬದುಕು ವಿದೇಶಗಳಲಿ
ಆದರೂ ಮನಸು ಮನಸುಗಳಿಗೇಕೋ
ಒಂಟಿತನ ಆತಂಕ
ಕಳೆದು ಹೋಗುವ ಭಯ ತಲ್ಲಣ
ಇದ್ದಕ್ಕಿದ್ದಂತೆ ಒಮ್ಮೊಮ್ಮೆ ಮರಳಿ
ಊರಿಗೆ ಹೊರಟೇ ಬಿಡಬೇಕೆನ್ನುವ
ಉಮ್ಮಳ ಕೊನೆಗೆ
ನಮ್ಮ ನಾವೇ ಸಮಾಧಾನಿಸಿಕೊಳ್ಳುವ
ಸಂತೈಯಿಸಿಕೊಳ್ಳುವ ಎಲ್ಲದರ ಲೆಕ್ಖಾಚಾರ
ಸಮೃದ್ಧಿಯ ನಡುವೆಯೂ ಒಮ್ಮೊಮ್ಮೆ
ಮನಸು ಭಾರ ಮರುಭೂಮಿ.

ಹಬ್ಬ ಜಾತ್ರೆಗಳ ವಿಶೇಷತೆಗಳು
ಮದುವೆ ಗೃಹಪ್ರವೇಶಗಳ ಸಂಭ್ರಮ
ಸಂಬಂಧಿಕರ ಭೇಟಿ ಮಾತು – ಹರಟೆ
ತುಂಟ ಹುಡುಗರ ತುಂಟಾಟಗಳನೆಲ್ಲ ಹೊತ್ತ
ಅಂಚೆ ಪತ್ರಗಳು ಬರುತ್ತವೆ
ಮನಸು ಬೆಚ್ಚಗಾಗಿ ಕಣ್ಣು ಮಂಜಾಗುವುದು
ಎಲ್ಲದಕೂ ಸ್ಪರ್ಧೆ ಬಿಳಿಯರೊಂದಿಗೆ
ಆಫೀಸು ಶಾಲೆ ಕಾಲೇಜು ಎಲ್ಲೆಲ್ಲೂ-
ದೂರ ದೂರ ಇರಬೇಡಿ ದೇಶಬಿಟ್ಟು ಬಂದವರಿಲ್ಲಿ
ಜಾತಿ ಮತ ಭಾಷೆ ಯಾವುದಾದರೇನು
ಭಾರತೀಯರಲ್ಲವೇ ನೀವೆಲ್ಲ
ನಿಮ್ಮತನಕಾಗಿ ಒಗ್ಗೂಡಿ
ಹಕ್ಕಿಗಳೆಲ್ಲರೆದೆಯೊಳಗೆ ಗರಿಬಿಚ್ಚುತ್ತವೆ.

ಈಗ ವಾರಾಂತ್ಯದ ಪಾರ್ಟಿ, ಹಬ್ಬಗಳಿಗೆ
ಹಪಹಪಿಸುತ್ತೇವೆ.
ಕೊಳಲು, ಸಿತಾರ್, ಮೃದಂಗದವರು
ಜೋಕ್ಸ್, ಡಾನ್ಸ್, ಶಾಯರಿಯವರು
ದಸರಾ, ದೀಪಾವಳಿ ಪ್ರಿಯರು
ರೇಶ್ಮೆ ಸೀರೆ ಉಟ್ಟು ನಮಸ್ಕರಿಸುವವರು
ರಾಜಕೀಯ, ಇತಿಹಾಸ, ವಿಜ್ಞಾನ ತಂತ್ರಜ್ಞಾನಗಳ
ಚರ್ಚಿಸುವವರು ಎಲ್ಲ ಸೇರುತ್ತೇವೆ
ವಿದೇಶಿಗರನ್ನು ಆಹ್ವಾನಿಸಿ
ಸಂಸ್ಕೃತಿ, ಸಾಧನೆ ಬಿಂಬಿಸುತ್ತಿದ್ದಂತೆ
ಫೋಟೋಗಳು ಕ್ಲಿಕ್ ಆಗುತ್ತವೆ
ನಮ್ಮ ಐಡೆಂಟಿಟಿಗೆ ನಮಗೆ ಹೆಮ್ಮೆ
ಇನ್ನಷ್ಟೂ ವರ್ಷ ಇರಬೇಕೆನಿಸುತ್ತದೆ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...