Home / ಕವನ / ಕವಿತೆ / ಅಸ್ಮಿತೆ

ಅಸ್ಮಿತೆ

ಬ್ರೆಡ್‌ಗೆ ಚೀಸ್ ಹಚ್ಚಿ ತಿನ್ನುವಾಗ
ಪಿಝಾಹಟ್‌ದಲ್ಲಿ ಕುಳಿತಾಗ
ಸ್ಟಾರ್ ಹೋಟೆಲಿನ ಮಂದ ಬೆಳಕಿನ ಜಾಝ್‌ದಲ್ಲಿ
ಶಾಪಿಂಗ್ ಮಳಿಗೆಯಲ್ಲಿ ಏ/ಸಿ ಕಾರಿನಲ್ಲಿ
ಇರುವಾಗಲೂ ಇಲ್ಲಿ
ಎಲ್ಲರೆದೆಯಲಿ ಹಕ್ಕಿಗಳೇನೇನೋ
ಮಾತಾಡುತ್ತವೆ.

ಏನೆಲ್ಲ ಐಶಾರಾಮಿ ಬದುಕು ವಿದೇಶಗಳಲಿ
ಆದರೂ ಮನಸು ಮನಸುಗಳಿಗೇಕೋ
ಒಂಟಿತನ ಆತಂಕ
ಕಳೆದು ಹೋಗುವ ಭಯ ತಲ್ಲಣ
ಇದ್ದಕ್ಕಿದ್ದಂತೆ ಒಮ್ಮೊಮ್ಮೆ ಮರಳಿ
ಊರಿಗೆ ಹೊರಟೇ ಬಿಡಬೇಕೆನ್ನುವ
ಉಮ್ಮಳ ಕೊನೆಗೆ
ನಮ್ಮ ನಾವೇ ಸಮಾಧಾನಿಸಿಕೊಳ್ಳುವ
ಸಂತೈಯಿಸಿಕೊಳ್ಳುವ ಎಲ್ಲದರ ಲೆಕ್ಖಾಚಾರ
ಸಮೃದ್ಧಿಯ ನಡುವೆಯೂ ಒಮ್ಮೊಮ್ಮೆ
ಮನಸು ಭಾರ ಮರುಭೂಮಿ.

ಹಬ್ಬ ಜಾತ್ರೆಗಳ ವಿಶೇಷತೆಗಳು
ಮದುವೆ ಗೃಹಪ್ರವೇಶಗಳ ಸಂಭ್ರಮ
ಸಂಬಂಧಿಕರ ಭೇಟಿ ಮಾತು – ಹರಟೆ
ತುಂಟ ಹುಡುಗರ ತುಂಟಾಟಗಳನೆಲ್ಲ ಹೊತ್ತ
ಅಂಚೆ ಪತ್ರಗಳು ಬರುತ್ತವೆ
ಮನಸು ಬೆಚ್ಚಗಾಗಿ ಕಣ್ಣು ಮಂಜಾಗುವುದು
ಎಲ್ಲದಕೂ ಸ್ಪರ್ಧೆ ಬಿಳಿಯರೊಂದಿಗೆ
ಆಫೀಸು ಶಾಲೆ ಕಾಲೇಜು ಎಲ್ಲೆಲ್ಲೂ-
ದೂರ ದೂರ ಇರಬೇಡಿ ದೇಶಬಿಟ್ಟು ಬಂದವರಿಲ್ಲಿ
ಜಾತಿ ಮತ ಭಾಷೆ ಯಾವುದಾದರೇನು
ಭಾರತೀಯರಲ್ಲವೇ ನೀವೆಲ್ಲ
ನಿಮ್ಮತನಕಾಗಿ ಒಗ್ಗೂಡಿ
ಹಕ್ಕಿಗಳೆಲ್ಲರೆದೆಯೊಳಗೆ ಗರಿಬಿಚ್ಚುತ್ತವೆ.

ಈಗ ವಾರಾಂತ್ಯದ ಪಾರ್ಟಿ, ಹಬ್ಬಗಳಿಗೆ
ಹಪಹಪಿಸುತ್ತೇವೆ.
ಕೊಳಲು, ಸಿತಾರ್, ಮೃದಂಗದವರು
ಜೋಕ್ಸ್, ಡಾನ್ಸ್, ಶಾಯರಿಯವರು
ದಸರಾ, ದೀಪಾವಳಿ ಪ್ರಿಯರು
ರೇಶ್ಮೆ ಸೀರೆ ಉಟ್ಟು ನಮಸ್ಕರಿಸುವವರು
ರಾಜಕೀಯ, ಇತಿಹಾಸ, ವಿಜ್ಞಾನ ತಂತ್ರಜ್ಞಾನಗಳ
ಚರ್ಚಿಸುವವರು ಎಲ್ಲ ಸೇರುತ್ತೇವೆ
ವಿದೇಶಿಗರನ್ನು ಆಹ್ವಾನಿಸಿ
ಸಂಸ್ಕೃತಿ, ಸಾಧನೆ ಬಿಂಬಿಸುತ್ತಿದ್ದಂತೆ
ಫೋಟೋಗಳು ಕ್ಲಿಕ್ ಆಗುತ್ತವೆ
ನಮ್ಮ ಐಡೆಂಟಿಟಿಗೆ ನಮಗೆ ಹೆಮ್ಮೆ
ಇನ್ನಷ್ಟೂ ವರ್ಷ ಇರಬೇಕೆನಿಸುತ್ತದೆ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...