Home / ಕವನ / ಕವಿತೆ / ಅಶಾಂತ ಮನಸ್ಸುಗಳ ನಡುರಾತ್ರಿ

ಅಶಾಂತ ಮನಸ್ಸುಗಳ ನಡುರಾತ್ರಿ

ಈಗಷ್ಟೇ ನಡುರಾತ್ರಿ
ಬಿ.ಪಿ. ಸದ್ದುಗಳೆಲ್ಲ
ಒಂದೊಂದಾಗಿ ಅಡಗುತ್ತಿವೆ
ಬ್ರೇನ್ ಹೆಮರೇಜಕ್ಕೆ ಹತ್ತಿರವಿದ್ದ
ಉದ್ಯಮಿಗಳು ಇನ್ನೂ
ಲೆಕ್ಕಾಚಾರದಲ್ಲಿದ್ದಾರೆ

ಇರಲಿ ನಾಳಿನ ಜಗಳಕ್ಕೆಂದು
ಹೊಸಪದಗಳಿಗೆ ಹುಡುಕಾಡುವ
ಬುದ್ದಿ ಜೀವಿಗಳು ನೆತ್ತಿಯೊಳಗೆ ಕಣ್ಣಿಟ್ಟು
ಏನೋ ಸಾಧನೆಗೆ ಉರಿಯುತ್ತ
ಹೊರಳಾಡುತ್ತಿದ್ದಾರೆ.

ಜಾಗತೀಕರಣದ ನೆಪಮಾಡಿ
ಬೇಡವಾದುದೆಲ್ಲ ನಮ್ಮ ಅಂಗಳಕೆ
ಬಂದು ಬೀಳುತ್ತಿವೆಯಲ್ಲ ಎಂದೇ ಹೊರಗೆ
ಭಾಷಣ ಮಾಡಿದವರು
ರಾತ್ರಿ ಇನ್ನೂ ಇಸ್ತ್ರಿ ಮಾಡುತ್ತಿದ್ದಾರೆ

ಮೌಲ್ಯಗಳು ಗಾಳಿಗೆ ತೂರಿ
ಕನಸಿನಂಗಳಕೆ ಚಂದಿರನ ಕರೆದು ನಾಗಾಲೋಟದ ಕುದುರೆ ಏರಿ
ಇದ್ದುದೆಲ್ಲ ಇಲ್ಲದಂತೆ
ಇಲ್ಲದ್ದೆಲ್ಲ ಇದ್ದಂತೆ ಕಾಣುವ ಹದಿಹರೆಯದವರು
ಇನ್ನೂ ಕನವರಿಸುತ್ತಿದ್ದಾರೆ.

ವೇದಿಕೆಯ ಮೇಲೆ
ಮಹಿಳಾವಾದ ಸ್ವಾತಂತ್ರ್ಯ ಸಮಾನತೆ
ಭಾಷಣಮಾಡಿ ಏನೋ ಸಾಧಿಸಿದಂತೆ
ಮನೆಯವರೊಂದಿಗೆ ವಿರೋಧ
ಕಟ್ಟಿಕೊಂಡ ಆಕೆ
ನಾಳೆ ಕೋರ್ಟಿಗೆ
ಯಾವುದಕ್ಕೊ ಅರ್ಜಿಸಲ್ಲಿಸಲು
ಕಣ್ಣೀರು ಚೀರಾಟ ಭರಾಟೆಗಳಲಿ
ಏನೇನೋ ಗೀಚಾಡುತ್ತಿದ್ದಾಳೆ

ಬೆಳಗಾದರೆ ಮತ್ತೆಲ್ಲ
ರಾಕ್ಷಸೀ ಚಟುವಟಿಕೆಗಳು
ಬಿಸಿಲು ಉರಿಬಿಸಿಲು ಬಿಸುಲ್ಗುದುರೆಯ
ಧಗೆ ಇವರುಗಳ ಒಳಹೊರಗೆಲ್ಲ

ರಾತ್ರಿಯೇ ನಿನ್ನ ಕತ್ತಲೆಯ
ಕಪ್ಪು ಹರವು ತೆಕ್ಕೆಯೊಳಗೆ
ಇವರನ್ನೆಲ್ಲಾ ಎಳೆದು ತಬ್ಬಿ
ಸುಮ್ಮನೆ ಮಲಗಿ ಬಿಡಬಾರದೆ
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...