Home / ಕವನ / ಕವಿತೆ / ಅಶಾಂತ ಮನಸ್ಸುಗಳ ನಡುರಾತ್ರಿ

ಅಶಾಂತ ಮನಸ್ಸುಗಳ ನಡುರಾತ್ರಿ

ಈಗಷ್ಟೇ ನಡುರಾತ್ರಿ
ಬಿ.ಪಿ. ಸದ್ದುಗಳೆಲ್ಲ
ಒಂದೊಂದಾಗಿ ಅಡಗುತ್ತಿವೆ
ಬ್ರೇನ್ ಹೆಮರೇಜಕ್ಕೆ ಹತ್ತಿರವಿದ್ದ
ಉದ್ಯಮಿಗಳು ಇನ್ನೂ
ಲೆಕ್ಕಾಚಾರದಲ್ಲಿದ್ದಾರೆ

ಇರಲಿ ನಾಳಿನ ಜಗಳಕ್ಕೆಂದು
ಹೊಸಪದಗಳಿಗೆ ಹುಡುಕಾಡುವ
ಬುದ್ದಿ ಜೀವಿಗಳು ನೆತ್ತಿಯೊಳಗೆ ಕಣ್ಣಿಟ್ಟು
ಏನೋ ಸಾಧನೆಗೆ ಉರಿಯುತ್ತ
ಹೊರಳಾಡುತ್ತಿದ್ದಾರೆ.

ಜಾಗತೀಕರಣದ ನೆಪಮಾಡಿ
ಬೇಡವಾದುದೆಲ್ಲ ನಮ್ಮ ಅಂಗಳಕೆ
ಬಂದು ಬೀಳುತ್ತಿವೆಯಲ್ಲ ಎಂದೇ ಹೊರಗೆ
ಭಾಷಣ ಮಾಡಿದವರು
ರಾತ್ರಿ ಇನ್ನೂ ಇಸ್ತ್ರಿ ಮಾಡುತ್ತಿದ್ದಾರೆ

ಮೌಲ್ಯಗಳು ಗಾಳಿಗೆ ತೂರಿ
ಕನಸಿನಂಗಳಕೆ ಚಂದಿರನ ಕರೆದು ನಾಗಾಲೋಟದ ಕುದುರೆ ಏರಿ
ಇದ್ದುದೆಲ್ಲ ಇಲ್ಲದಂತೆ
ಇಲ್ಲದ್ದೆಲ್ಲ ಇದ್ದಂತೆ ಕಾಣುವ ಹದಿಹರೆಯದವರು
ಇನ್ನೂ ಕನವರಿಸುತ್ತಿದ್ದಾರೆ.

ವೇದಿಕೆಯ ಮೇಲೆ
ಮಹಿಳಾವಾದ ಸ್ವಾತಂತ್ರ್ಯ ಸಮಾನತೆ
ಭಾಷಣಮಾಡಿ ಏನೋ ಸಾಧಿಸಿದಂತೆ
ಮನೆಯವರೊಂದಿಗೆ ವಿರೋಧ
ಕಟ್ಟಿಕೊಂಡ ಆಕೆ
ನಾಳೆ ಕೋರ್ಟಿಗೆ
ಯಾವುದಕ್ಕೊ ಅರ್ಜಿಸಲ್ಲಿಸಲು
ಕಣ್ಣೀರು ಚೀರಾಟ ಭರಾಟೆಗಳಲಿ
ಏನೇನೋ ಗೀಚಾಡುತ್ತಿದ್ದಾಳೆ

ಬೆಳಗಾದರೆ ಮತ್ತೆಲ್ಲ
ರಾಕ್ಷಸೀ ಚಟುವಟಿಕೆಗಳು
ಬಿಸಿಲು ಉರಿಬಿಸಿಲು ಬಿಸುಲ್ಗುದುರೆಯ
ಧಗೆ ಇವರುಗಳ ಒಳಹೊರಗೆಲ್ಲ

ರಾತ್ರಿಯೇ ನಿನ್ನ ಕತ್ತಲೆಯ
ಕಪ್ಪು ಹರವು ತೆಕ್ಕೆಯೊಳಗೆ
ಇವರನ್ನೆಲ್ಲಾ ಎಳೆದು ತಬ್ಬಿ
ಸುಮ್ಮನೆ ಮಲಗಿ ಬಿಡಬಾರದೆ
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...