Home / ಕವನ / ಕವಿತೆ / ಅಶಾಂತ ಮನಸ್ಸುಗಳ ನಡುರಾತ್ರಿ

ಅಶಾಂತ ಮನಸ್ಸುಗಳ ನಡುರಾತ್ರಿ

ಈಗಷ್ಟೇ ನಡುರಾತ್ರಿ
ಬಿ.ಪಿ. ಸದ್ದುಗಳೆಲ್ಲ
ಒಂದೊಂದಾಗಿ ಅಡಗುತ್ತಿವೆ
ಬ್ರೇನ್ ಹೆಮರೇಜಕ್ಕೆ ಹತ್ತಿರವಿದ್ದ
ಉದ್ಯಮಿಗಳು ಇನ್ನೂ
ಲೆಕ್ಕಾಚಾರದಲ್ಲಿದ್ದಾರೆ

ಇರಲಿ ನಾಳಿನ ಜಗಳಕ್ಕೆಂದು
ಹೊಸಪದಗಳಿಗೆ ಹುಡುಕಾಡುವ
ಬುದ್ದಿ ಜೀವಿಗಳು ನೆತ್ತಿಯೊಳಗೆ ಕಣ್ಣಿಟ್ಟು
ಏನೋ ಸಾಧನೆಗೆ ಉರಿಯುತ್ತ
ಹೊರಳಾಡುತ್ತಿದ್ದಾರೆ.

ಜಾಗತೀಕರಣದ ನೆಪಮಾಡಿ
ಬೇಡವಾದುದೆಲ್ಲ ನಮ್ಮ ಅಂಗಳಕೆ
ಬಂದು ಬೀಳುತ್ತಿವೆಯಲ್ಲ ಎಂದೇ ಹೊರಗೆ
ಭಾಷಣ ಮಾಡಿದವರು
ರಾತ್ರಿ ಇನ್ನೂ ಇಸ್ತ್ರಿ ಮಾಡುತ್ತಿದ್ದಾರೆ

ಮೌಲ್ಯಗಳು ಗಾಳಿಗೆ ತೂರಿ
ಕನಸಿನಂಗಳಕೆ ಚಂದಿರನ ಕರೆದು ನಾಗಾಲೋಟದ ಕುದುರೆ ಏರಿ
ಇದ್ದುದೆಲ್ಲ ಇಲ್ಲದಂತೆ
ಇಲ್ಲದ್ದೆಲ್ಲ ಇದ್ದಂತೆ ಕಾಣುವ ಹದಿಹರೆಯದವರು
ಇನ್ನೂ ಕನವರಿಸುತ್ತಿದ್ದಾರೆ.

ವೇದಿಕೆಯ ಮೇಲೆ
ಮಹಿಳಾವಾದ ಸ್ವಾತಂತ್ರ್ಯ ಸಮಾನತೆ
ಭಾಷಣಮಾಡಿ ಏನೋ ಸಾಧಿಸಿದಂತೆ
ಮನೆಯವರೊಂದಿಗೆ ವಿರೋಧ
ಕಟ್ಟಿಕೊಂಡ ಆಕೆ
ನಾಳೆ ಕೋರ್ಟಿಗೆ
ಯಾವುದಕ್ಕೊ ಅರ್ಜಿಸಲ್ಲಿಸಲು
ಕಣ್ಣೀರು ಚೀರಾಟ ಭರಾಟೆಗಳಲಿ
ಏನೇನೋ ಗೀಚಾಡುತ್ತಿದ್ದಾಳೆ

ಬೆಳಗಾದರೆ ಮತ್ತೆಲ್ಲ
ರಾಕ್ಷಸೀ ಚಟುವಟಿಕೆಗಳು
ಬಿಸಿಲು ಉರಿಬಿಸಿಲು ಬಿಸುಲ್ಗುದುರೆಯ
ಧಗೆ ಇವರುಗಳ ಒಳಹೊರಗೆಲ್ಲ

ರಾತ್ರಿಯೇ ನಿನ್ನ ಕತ್ತಲೆಯ
ಕಪ್ಪು ಹರವು ತೆಕ್ಕೆಯೊಳಗೆ
ಇವರನ್ನೆಲ್ಲಾ ಎಳೆದು ತಬ್ಬಿ
ಸುಮ್ಮನೆ ಮಲಗಿ ಬಿಡಬಾರದೆ
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...