Home / ಕವನ / ಕವಿತೆ / ಗುಬ್ಬಚ್ಚಿ ಅಂದರೇನಮ್ಮ

ಗುಬ್ಬಚ್ಚಿ ಅಂದರೇನಮ್ಮ

ಪಾಪ ! ಅವು ಸುಸ್ತಾಗಿಯೇ ಹಾರುತ್ತಿದ್ದರೂ
ಮುದ್ದಾಗಿಯೇ ಕಾಣುವ ಹಕ್ಕಿಗಳು
ತೀರ ಇತ್ತೀಚೆಗೆ ಒಮ್ಮಿಂದೊಮ್ಮೆಲೆ
ಎಲ್ಲಿಯೋ ಹೋಗಿಬಿಟ್ಟವು.

ಎಲ್ಲೆಲ್ಲೂ ಬೋರು ಹೊಡೆದ ಪುರಾವೆಗಳು
ನೆಲದೊಡಲಾಳಕ್ಕಿಳಿದವು ಕೆರೆ ಒರತೆಗಳ ನೀರು
ಪ್ರೀತಿ ಸ್ಪರ್ಷಿವಿಲ್ಲದ ಮೋಡ
ತುಂಬ ಮೌನ, ಜಡ ಹೆಳವನವತಾರ
ಎಲ್ಲಿಗೋ ಹೋಗಿಬಿಡಬೇಕೆನ್ನುವ
ನಿರಾಸೆಯಿರಬೇಕವಕೆ ನೋಡು ನೋಡುತ್ತಿದ್ದಂತೆಯೇ
ಪಾಪ ! ಅವು ಎಲ್ಲಿಯೋ ಹೋಗಿಬಿಟ್ಟವು

ಹುಲ್ಲಿನೆಸಳಿಲ್ಲ ಗೂಡಿಗೆ
ಗಿಡಪೊಟರೆ ಏನೆಲ್ಲ ಬುಲ್‌ಡೋಜರಿಸಿದ್ದಾಯಿತು
ಮುಗಿಲೆತ್ತರೆತ್ತರಕೆ ಏರುವ ಮನೆಗಳು
ರೆಕ್ಕೆ ಮುದುರಿ ಉಲಿ‌ಅಡಗಿತೇನೊ
ಹಿತ್ತಲಿಗೆ ಕೇರಿ ತೂರಿದ ಕಾಳುಗಳೂ ಕಾಣಿಸದೆ
ಪಾಪ ! ಅವು ಎಲ್ಲಿಗೋ ಹೋಗಿಬಿಟ್ಟವು

ಗುಬ್ಬಚ್ಚಿ ಅಂದರೇನಮ್ಮ ಹಾರುತ್ತವೆ ಹೇಗೆ –
ಬಾ ಕಂದ ತೋರಿಸುವೆನು –
ಕೆಂಪನೆಯ ಆಕಾಶದಂಚಿನಲಿ
ಸೂರ್ಯ ಇಳಿಯುವ ಹೊತ್ತು
ಹಕ್ಕಿ ಮರಳಿ ಮನೆಗೆ ಹೋಗಲೇಬೇಕು

ಸೂರ್ಯ ಮುಳುಗಿದ ಹಕ್ಕಿಗಳು ಕಾಣಲಿಲ್ಲ
ಪಾಪ ! ಅವು ಎಲ್ಲಿಯೋ ಹೋಗಿಬಿಟ್ಟವು
ಏನೆಂದು ಹೇಳುವುದು ಕಂದನಿಗೆ
ಅದು ಹೇಗೆಂದು ತಿಳಿಸುವುದು

ತಂದಿದ್ದೇವೆ
ರಸೆಲ್ ಮಾರುಕಟ್ಟೆಯ
ರೆಕ್ಕೆ ಕಿತ್ತಿಸಿಕೊಂಡ ಗುಬ್ಬಚ್ಚಿಗಳ
ಆಕಾಶದಲ್ಲಿ ಹಾರಲೂ ಇಲ್ಲ
ನೆಲದೆದೆಗೆ ಕುಣಿದು ಕುಪ್ಪಳಿಸಲೂ ಇಲ್ಲ
ಪಾಪ ! ಇವು ಎಲ್ಲಿ ಹೋಗಬೇಕಿನ್ನು
ಕಾಪಾಡುವುದೊಂದೇ ಕೊನೆ ಹಾವು ಬೆಕ್ಕಿನಿಂದ

ಪಂಜರ ಹಾಕದೆ ಮನೆಯೊಳಗೆ ಬಿಟ್ಟಿದೆ
ಪುಟ್ಟನೊಡನೆ ಪುಟಾಣಿಗಳಾಗಿ
ಮನೆತುಂಬ ಮನತುಂಬ ಅಷ್ಟಿಷ್ಟು
ಹಾರಾಡಿ ಕುಪ್ಪಳಿಸಿ ಆಗೀಗ
ಏನೇನೋ ಹೇಳುತಿವೆ
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...