Home / ಕವನ / ಕವಿತೆ / ಗುಬ್ಬಚ್ಚಿ ಅಂದರೇನಮ್ಮ

ಗುಬ್ಬಚ್ಚಿ ಅಂದರೇನಮ್ಮ

ಪಾಪ ! ಅವು ಸುಸ್ತಾಗಿಯೇ ಹಾರುತ್ತಿದ್ದರೂ
ಮುದ್ದಾಗಿಯೇ ಕಾಣುವ ಹಕ್ಕಿಗಳು
ತೀರ ಇತ್ತೀಚೆಗೆ ಒಮ್ಮಿಂದೊಮ್ಮೆಲೆ
ಎಲ್ಲಿಯೋ ಹೋಗಿಬಿಟ್ಟವು.

ಎಲ್ಲೆಲ್ಲೂ ಬೋರು ಹೊಡೆದ ಪುರಾವೆಗಳು
ನೆಲದೊಡಲಾಳಕ್ಕಿಳಿದವು ಕೆರೆ ಒರತೆಗಳ ನೀರು
ಪ್ರೀತಿ ಸ್ಪರ್ಷಿವಿಲ್ಲದ ಮೋಡ
ತುಂಬ ಮೌನ, ಜಡ ಹೆಳವನವತಾರ
ಎಲ್ಲಿಗೋ ಹೋಗಿಬಿಡಬೇಕೆನ್ನುವ
ನಿರಾಸೆಯಿರಬೇಕವಕೆ ನೋಡು ನೋಡುತ್ತಿದ್ದಂತೆಯೇ
ಪಾಪ ! ಅವು ಎಲ್ಲಿಯೋ ಹೋಗಿಬಿಟ್ಟವು

ಹುಲ್ಲಿನೆಸಳಿಲ್ಲ ಗೂಡಿಗೆ
ಗಿಡಪೊಟರೆ ಏನೆಲ್ಲ ಬುಲ್‌ಡೋಜರಿಸಿದ್ದಾಯಿತು
ಮುಗಿಲೆತ್ತರೆತ್ತರಕೆ ಏರುವ ಮನೆಗಳು
ರೆಕ್ಕೆ ಮುದುರಿ ಉಲಿ‌ಅಡಗಿತೇನೊ
ಹಿತ್ತಲಿಗೆ ಕೇರಿ ತೂರಿದ ಕಾಳುಗಳೂ ಕಾಣಿಸದೆ
ಪಾಪ ! ಅವು ಎಲ್ಲಿಗೋ ಹೋಗಿಬಿಟ್ಟವು

ಗುಬ್ಬಚ್ಚಿ ಅಂದರೇನಮ್ಮ ಹಾರುತ್ತವೆ ಹೇಗೆ –
ಬಾ ಕಂದ ತೋರಿಸುವೆನು –
ಕೆಂಪನೆಯ ಆಕಾಶದಂಚಿನಲಿ
ಸೂರ್ಯ ಇಳಿಯುವ ಹೊತ್ತು
ಹಕ್ಕಿ ಮರಳಿ ಮನೆಗೆ ಹೋಗಲೇಬೇಕು

ಸೂರ್ಯ ಮುಳುಗಿದ ಹಕ್ಕಿಗಳು ಕಾಣಲಿಲ್ಲ
ಪಾಪ ! ಅವು ಎಲ್ಲಿಯೋ ಹೋಗಿಬಿಟ್ಟವು
ಏನೆಂದು ಹೇಳುವುದು ಕಂದನಿಗೆ
ಅದು ಹೇಗೆಂದು ತಿಳಿಸುವುದು

ತಂದಿದ್ದೇವೆ
ರಸೆಲ್ ಮಾರುಕಟ್ಟೆಯ
ರೆಕ್ಕೆ ಕಿತ್ತಿಸಿಕೊಂಡ ಗುಬ್ಬಚ್ಚಿಗಳ
ಆಕಾಶದಲ್ಲಿ ಹಾರಲೂ ಇಲ್ಲ
ನೆಲದೆದೆಗೆ ಕುಣಿದು ಕುಪ್ಪಳಿಸಲೂ ಇಲ್ಲ
ಪಾಪ ! ಇವು ಎಲ್ಲಿ ಹೋಗಬೇಕಿನ್ನು
ಕಾಪಾಡುವುದೊಂದೇ ಕೊನೆ ಹಾವು ಬೆಕ್ಕಿನಿಂದ

ಪಂಜರ ಹಾಕದೆ ಮನೆಯೊಳಗೆ ಬಿಟ್ಟಿದೆ
ಪುಟ್ಟನೊಡನೆ ಪುಟಾಣಿಗಳಾಗಿ
ಮನೆತುಂಬ ಮನತುಂಬ ಅಷ್ಟಿಷ್ಟು
ಹಾರಾಡಿ ಕುಪ್ಪಳಿಸಿ ಆಗೀಗ
ಏನೇನೋ ಹೇಳುತಿವೆ
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...