Home / ಕವನ / ಕವಿತೆ / ಎಳೆ ನೇಸರು

ಎಳೆ ನೇಸರು

ಭುವಿಯಲ್ಲಿ ಹಿಮದ ಖುತು ಅರೆಗಣ್ಣ ತೆರದಿತ್ತು
ರವಿ ಮೂಡಿ ಮೇಲ್ಬಂದು ಇರ್ಗಳಿಗೆ ಸ೦ದಿತ್ತು

ಮುಚ್ಚಿದ್ದ ಬೆಳ್ಮಂಜು ತೆರೆಯುಗಿದ ತೆರನಿತ್ತು
ಹೆಚ್ಚಿದ್ದ ಕುಳಿರೊರತೆ ಕಾವಿಂಗೆ ಬಾಗಿತ್ತು

ನೇಸರಿನ ಎಳೆಗದಿರು ಹಿಮ ಮಣಿಯ ಮಾಲೆಯನು
ನೇಯ್ದು, ನಲಿಯುತಲಿತ್ತು ರಿಂಗಣಂಗುಣಿತವನು

ದಿನಕರನ ಸಂಖ್ಯಾತ ಕಿರಣಗಳು ಪೂರ್ವದಿಂ
ಸುಸ್ಪಷ್ಟತೆಯನಾಂತು, ವಿವಿಧ ವಿಧ ವರ್ಣದಿ೦-

ಹರಿತಂದು ಮೋದದಿಂ ತಿರೆವೆಣ್ಣನಪ್ಪುತ್ತ,
ಮೃದು ಚುಂಬನವನಿತ್ತು ಪುಲಕವನ್ನಾಗಿಸುತ.-

ಮಿರುಗಿರೆ, ‘ಸಹಸ್ರಕರ’ ನೆಂಬ ಸಂಕುಚಿತಾಖ್ಯೆ
ಮಿಥ್ಯವಾಗಲಸಂಖ್ಯಕರನೆಂಬ ನವ್ಯಾಖ್ಯೆ-

ಸಮನಿಸಿದ ತೆರನಾಯ್ತು! ಹೂಬಿಸಿಲು ಹೂಗಳಗೆ
ಎಸಳೆವೆಯನಲರಿಸಲು, ಹಿಮಬಿಂದು ಜೇನ್‌ಪನಿಗೆ-

ಬೆರೆದೊಂದು ಗೂಡುತ್ತ, ತುಂಬಿಗಳಿಗಾಹ್ವಾನ-
ವೀಯಲವು ಬ೦ದೊಲಿದು ಮಾಡಿದುವು ಮಧುಪಾನ,

ಸೌಸವದ ತನಿಜೇನನೊಲಿದೀಂಟಿ, ಸೊಕ್ಕೇರಿ,
ಅಳಿಗಳೊಂದೇ ಸರದಿ ಸೂಸಿದುವು ಹಾಡ ಸರಿ.

ಹಕ್ಕಿಗಳ ಕೊರಲುಲಿಯು ಕಟ್ಟೊಡೆದು, ಹೊನಲಾಗಿ,
ಬಾನ ದನಿಯಲೆಯಿ೦ದ ದುಂದುಮಿಸಿತಿ೦ಪಾಗಿ

ಬಯಲಿನೊಂದರೆಯಲ್ಲಿ ನಾನಾಗ ನಿಂದಿರಲು,
ಮೂಡಣದ ಬಾನ್ ಚೆಲುವು ಚೆಲುಮೆಯಲಿ ಚಿಮ್ಮಿರಲು,-

ಬಾಲಾರ್ಕನಿದಿರಾಗಿ ನನ್ನ ಕಣ್ಣೆವೆಗಳನು
ಅರಳಿಸುತ, ಮುಗುಳಿಸುತ, ನನ್ನೆಲ್ಲ ದೇಹವನು-

ಎಳೆಬಿಸಿಲ ಮಳೆಯಿಂದ ತೋಯಿಸುತ, ಸ್ವರ್ಗೀಯ
ಸಂತೋಷ ಸಾಗರದಿ ತೇಲಿಸುತಲಾತ್ಮೀಯ-

ಭಾವವನು ಬೆಳಗಿಸುತ, ಮುಗಿಲೋಳಿಗಳ ಮೇಲೆ
ಇರುವೆನಡಿಗೆಯ ನಡೆದು, ಬರುತಿದ್ದ ಮೇಲ್ಮೇಲೆ!

ಗಿಡ ಬಳ್ಳಿಯೆಲೆಗಳಲಿ ನೆಯ್ದಿರುವ ಜೇಡ ಬಲೆ
ನೂಲಿನೆಳೆಗಳು ಚಿನ್ನ ಸರಿಗೆಯಂತಿಹವು ಸಲೆ.

ಭೂದೇವಿಯುಟ್ಟಿರುವ ಹಸುರುಡಿಗೆಯ೦ತೆಸೆವ
ಎಳೆಗಳವೆ ಮಡಿಗಳಿಗೆ ಹೊ೦ಬಣ್ಣ ರವಿಯೀವ.

ಎತ್ತೆತ್ತಲೂ ತಿರೆಯು ಹೊನ್ನ ಹೊಳೆಯಲಿ ತೇಲಿ.
ತನ್ನತನವನು ಮರೆತು, ಹರಿದು ಸೊಗಗಡಲಿನಲಿ-

ಸಂಗಮ೦ಗೊಂಡಂತೆ ಭಾಸವಾಗುತ್ತಲಿತ್ತು.
ಒಂದಿನಿತು ಚಣ ಕಳೆಯಲೊಪ್ಪವೇ ಬೇರಾಯ್ತು:-

ಸ್ವರ್ಣ ಲೇಪದ ಮೇಲೆ ರಜತ ರಸ ಬೆರೆದಂತೆ.
ಬಿಸಿಲೊಸರು ಕಣ್ಗೂಟವನ್ನೂಡಿಸಿತು ಮುಂತೆ!
*****
೧೯೪೦

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...