Home / ಕವನ / ಕವಿತೆ / ಅಂದೊಂದು ದಿನದಲ್ಲಿ

ಅಂದೊಂದು ದಿನದಲ್ಲಿ

ಅಂದೊಂದು ದಿನದಲ್ಲಿ,- ನಿಶಿಯ ನೀರವದಲ್ಲಿ-
ಇಂದುವಿನ ತಿಳಿಯಾದ ಬೆಳದಿಂಗಳಲ್ಲಿ-
ಒ೦ದಿಯಾನಂದವನು ಬಗೆಯ ಬೇಸರ ಕಳೆಯೆ,
ಮಂದಿರದ ಹೊರಜಗಲಿಯಲ್ಲೊರಗಿದೆ


ಮೇಲೆ ನೀಲಾಕಾರವನ್ನ ದಿಟ್ಟಿಯನಟ್ಟೆ-
ಲೀಲೆಯಿಂದಲಿ ಚಂದ್ರ ಸಾಗುತಿಹನು.
ಹಲಕೆಲವು ತಾರೆಗಳು ತಮ್ಮ ಪತಿ ವಿರಹವನು,
ತಾಳಲಾರದೆ ಮೆಲ್ಲಿನಡಿಯಿಡುವುವು


ಬಂಧು ಬಳಗವನೆಲ್ಲ ಬಿಟ್ಟು, ಕಾಲನಗಾಧ
ಕಂದರದಿ ಮರೆಯಾಗುತಿರುವ ನರರಂತೆ.
ಅಂದು ಕೆಲ ತಾರೆಗಳು ತಮ್ಮ ಸಹಚರರನ್ನು
ಹಿಂದುಳಿದು, ಕೆಳ ಬಿದ್ದು ಮರೆಯಾಗುತಿಹವು


ನೀಲಿಮೆಯ ನಭದಲ್ಲಿ ರಜತ ಚಂದ್ರನ ಕಿರಣ-
ಮಾಲೆ ಸಾಲಿಟ್ಟೆಸೆಯೆ ತೆರೆಯ ತೆರದಲ್ಲಿ,
ಹಾಲ ಕಡಲಿನ ಪೆಂಪ ಲೀಲೆಯಿಂದೊಳಗೊ೦ಡು
ಮೇಲೆಯಾಗಸವಿಂದು ತೊಳಗುತಿಹುದು


ಎತ್ತಲೂ ಪ್ರಕೃತಿಯದು ಮೌನ ರಾಜ್ಯದ ಮರೆಯೊ-
ಳೊತ್ತರದಿ ಮಲಗಿ ನಿದ್ದೆಯ ಗೈಯುತಿರಲು,
ಸುತ್ತಲಿರುತಿಹ ಬೆಡಗ ನೋಡಿಯರೆಚಣ ಸರಿಯೆ
ಎತ್ತಣಿಂದಲೊ ಬ೦ತು ನಿದ್ದೆಯಾವರಿಸಿ,


ರಾತ್ರಿಯೆಲ್ಲವು ಸವೆಯೆ ಸವಿಯಾದ ಕನಸಿನಲಿ,
ಮತ್ತೆನ್ನನೆಬ್ಬಿಸಿತು ಮೈದಡವುತ-
ಹತ್ತಿರದ ಮರ-ಬಳ್ಳಿ-ಗಿಡಗಳೆಲೆಯೆಡೆಯಲ್ಲಿ
ಸುತ್ತಿ ಸುಳಿಯುತಲಿದ್ದ ತಂಗಾಳಿಯು


ತಂಬೆಲರು ತನ್ನ ಸುವಿಲಾಸದಿಂದೆಸೆಯುತ್ತ,
ತುಂಬಿ ನವಶಕ್ತಿಯನು ಅಂಗಾ೦ಗದಲ್ಲಿ,
ಬೆಂಬಿಡದೆ ಮೆಯ್ಯನ್ನು ಹಾದು ಹೋಗಲು, ನವಿರು
ಬಿಂಬಿಸಿತು; ನಲವೊಲಿಯಿತೆನ್ನ ಮನಕೆ


ಎಂದಿಗೂ ಬಾರದಿಹ ಹೊಸ ಹುರುಪು ಬಗೆಯೊಳಗೆ
ಬಂದು ಶಾ೦ತಿಯ ಕೊಡಲು, ಎದ್ದು ಕುಳಿತೆ.
ಮುಂದೆ ನಾ ಸುತ್ತಲೂ ಸರಿಯಿಸಲು ನೋಟವನು,
ಸುಂದರದ ದೃಶ್ಯವದು ಕಂಡಿತೆನಗೆ-


ಉಷೆಯು, ಹೊಸ ಮಿರುಗು ಮೈವೆತ್ತು ರಂಜಿಸುತಿರುವ
ಹೊಸ ವಸ್ತ್ರವುಡಿಸಿಹಳು ಪ್ರಕೃತಿರತಿಗೆ.
ಮಿಸುನಿ ಬಣ್ಣವನದಕೆ ಹಚ್ಚುತಿದ್ದನು ಮೂಡು-
ದೆಸೆಯೊಳರುಣನ ಕೂಡಿ ಬರುವ ರವಿಯು

೧೦
ಉದಯಿಸುವ ನೇಸರಿಗೆ ಸ್ವಾಗತವನೀವಂತೆ,
ಉದಯ ಗಾನವನೆಲ್ಲ ವಿಹಗ ತತಿಯು
ಮುದದಿ ಮಾಡುತಲಿದ್ದುವಲ್ಲದೇ ಬಳ್ಳಿಗಳು
ಇದಿರಿನಲಿ ಹಿಡಿದಿದ್ದುವಲರುಗಳನು

೧೧
ಇಂತೆಸೆವ ನೋಟವನು ಮನದಣಿಯೆ ನೋಡುತ್ತ,
ಸಂತಸವನಾ೦ತೆದ್ದು, ಈ ತಿರೆಯನು
ಇಂತು ಕಂಗೊಳಪಂತೆ ಗೈದ ದೇವಗೆ ನಾನು
ಅಂತರಂಗದಿ ಧನ್ಯವಾದವರ್ಪಿಸಿದ್ದೆ.
*****
೧೯೩೫

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...