Home / ಕವನ / ಕವಿತೆ / ಅಂದೊಂದು ದಿನದಲ್ಲಿ

ಅಂದೊಂದು ದಿನದಲ್ಲಿ

ಅಂದೊಂದು ದಿನದಲ್ಲಿ,- ನಿಶಿಯ ನೀರವದಲ್ಲಿ-
ಇಂದುವಿನ ತಿಳಿಯಾದ ಬೆಳದಿಂಗಳಲ್ಲಿ-
ಒ೦ದಿಯಾನಂದವನು ಬಗೆಯ ಬೇಸರ ಕಳೆಯೆ,
ಮಂದಿರದ ಹೊರಜಗಲಿಯಲ್ಲೊರಗಿದೆ


ಮೇಲೆ ನೀಲಾಕಾರವನ್ನ ದಿಟ್ಟಿಯನಟ್ಟೆ-
ಲೀಲೆಯಿಂದಲಿ ಚಂದ್ರ ಸಾಗುತಿಹನು.
ಹಲಕೆಲವು ತಾರೆಗಳು ತಮ್ಮ ಪತಿ ವಿರಹವನು,
ತಾಳಲಾರದೆ ಮೆಲ್ಲಿನಡಿಯಿಡುವುವು


ಬಂಧು ಬಳಗವನೆಲ್ಲ ಬಿಟ್ಟು, ಕಾಲನಗಾಧ
ಕಂದರದಿ ಮರೆಯಾಗುತಿರುವ ನರರಂತೆ.
ಅಂದು ಕೆಲ ತಾರೆಗಳು ತಮ್ಮ ಸಹಚರರನ್ನು
ಹಿಂದುಳಿದು, ಕೆಳ ಬಿದ್ದು ಮರೆಯಾಗುತಿಹವು


ನೀಲಿಮೆಯ ನಭದಲ್ಲಿ ರಜತ ಚಂದ್ರನ ಕಿರಣ-
ಮಾಲೆ ಸಾಲಿಟ್ಟೆಸೆಯೆ ತೆರೆಯ ತೆರದಲ್ಲಿ,
ಹಾಲ ಕಡಲಿನ ಪೆಂಪ ಲೀಲೆಯಿಂದೊಳಗೊ೦ಡು
ಮೇಲೆಯಾಗಸವಿಂದು ತೊಳಗುತಿಹುದು


ಎತ್ತಲೂ ಪ್ರಕೃತಿಯದು ಮೌನ ರಾಜ್ಯದ ಮರೆಯೊ-
ಳೊತ್ತರದಿ ಮಲಗಿ ನಿದ್ದೆಯ ಗೈಯುತಿರಲು,
ಸುತ್ತಲಿರುತಿಹ ಬೆಡಗ ನೋಡಿಯರೆಚಣ ಸರಿಯೆ
ಎತ್ತಣಿಂದಲೊ ಬ೦ತು ನಿದ್ದೆಯಾವರಿಸಿ,


ರಾತ್ರಿಯೆಲ್ಲವು ಸವೆಯೆ ಸವಿಯಾದ ಕನಸಿನಲಿ,
ಮತ್ತೆನ್ನನೆಬ್ಬಿಸಿತು ಮೈದಡವುತ-
ಹತ್ತಿರದ ಮರ-ಬಳ್ಳಿ-ಗಿಡಗಳೆಲೆಯೆಡೆಯಲ್ಲಿ
ಸುತ್ತಿ ಸುಳಿಯುತಲಿದ್ದ ತಂಗಾಳಿಯು


ತಂಬೆಲರು ತನ್ನ ಸುವಿಲಾಸದಿಂದೆಸೆಯುತ್ತ,
ತುಂಬಿ ನವಶಕ್ತಿಯನು ಅಂಗಾ೦ಗದಲ್ಲಿ,
ಬೆಂಬಿಡದೆ ಮೆಯ್ಯನ್ನು ಹಾದು ಹೋಗಲು, ನವಿರು
ಬಿಂಬಿಸಿತು; ನಲವೊಲಿಯಿತೆನ್ನ ಮನಕೆ


ಎಂದಿಗೂ ಬಾರದಿಹ ಹೊಸ ಹುರುಪು ಬಗೆಯೊಳಗೆ
ಬಂದು ಶಾ೦ತಿಯ ಕೊಡಲು, ಎದ್ದು ಕುಳಿತೆ.
ಮುಂದೆ ನಾ ಸುತ್ತಲೂ ಸರಿಯಿಸಲು ನೋಟವನು,
ಸುಂದರದ ದೃಶ್ಯವದು ಕಂಡಿತೆನಗೆ-


ಉಷೆಯು, ಹೊಸ ಮಿರುಗು ಮೈವೆತ್ತು ರಂಜಿಸುತಿರುವ
ಹೊಸ ವಸ್ತ್ರವುಡಿಸಿಹಳು ಪ್ರಕೃತಿರತಿಗೆ.
ಮಿಸುನಿ ಬಣ್ಣವನದಕೆ ಹಚ್ಚುತಿದ್ದನು ಮೂಡು-
ದೆಸೆಯೊಳರುಣನ ಕೂಡಿ ಬರುವ ರವಿಯು

೧೦
ಉದಯಿಸುವ ನೇಸರಿಗೆ ಸ್ವಾಗತವನೀವಂತೆ,
ಉದಯ ಗಾನವನೆಲ್ಲ ವಿಹಗ ತತಿಯು
ಮುದದಿ ಮಾಡುತಲಿದ್ದುವಲ್ಲದೇ ಬಳ್ಳಿಗಳು
ಇದಿರಿನಲಿ ಹಿಡಿದಿದ್ದುವಲರುಗಳನು

೧೧
ಇಂತೆಸೆವ ನೋಟವನು ಮನದಣಿಯೆ ನೋಡುತ್ತ,
ಸಂತಸವನಾ೦ತೆದ್ದು, ಈ ತಿರೆಯನು
ಇಂತು ಕಂಗೊಳಪಂತೆ ಗೈದ ದೇವಗೆ ನಾನು
ಅಂತರಂಗದಿ ಧನ್ಯವಾದವರ್ಪಿಸಿದ್ದೆ.
*****
೧೯೩೫

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...