Home / ಕವನ / ಕವಿತೆ / ಮದಿರೆಯ ಮಹಿಮೆಯು

ಮದಿರೆಯ ಮಹಿಮೆಯು

ಸುಧೆಯಂ ಪಡೆದುಂ ಮರಣವತಪ್ಪಿಸೆ ಕಡಲನು ಕಡೆದರು ದಾನವದಿವಿಜರು|
ಅದರೊಳು ಪಡೆದರು ಈರೆಳು ಮಣಿಗಳ ಕುಣಿದರು ಅಗಣಿತ ಸಂತಸದಿ ||
ಸುಧೆಯೊಂದಿಗೆ ತಾ ಹೊರಟಿತು ಸುರೆತಾಕುಡಿಯುತ ದೈತ್ಯರು ಮದಿಸಿದರು|
ಸುಧೆಯನು ಈ೦ಟುತೆ ಮರಣವ ತಪ್ಪಿಸಿ ಮೆರೆದರು ವಿಶ್ವದಿಬಿಡುಗಣ್ಣಿಗರೂ || ೧ ||

ಸುರೆಯಂ ಕುಡಿಯತೆ ಕಡುಮದದಿಂದಲಿ ಅಡರಿಸಿದರು ಕೇಡನು ರಕ್ಕಸರು |
ದುರುಳರ ಕಡಿಯಲು ಕಡುತ್ವರೆಯಿಂದಲಿ ದುಡುಕಿದನವಹರಿ ಅವತರಿಸಿ ||
ಮರುಳನುಹರಿತಾಮದಿರೆಯ ಕೊಲ್ಲದೆ ಕುಡುಕರಮರಣವ ನೊಡರಿಸಿದ |
ಸರುವರ ಕಿಡಿಸಲು ಮದಿರೆಯೆ ಮೂಲವು ಕಡುನಾಶಕವದ ನರಿಯದಲೆ || ೨ ||

ಸಿ೦ದಿಯೆಂಬುದದು ಮೊಲೆವಾಲ್ತಾಡದ ಬಂಧಿಸೆ ಶಾಸನ ಕುಂದನು ಹೊ೦ದದು |
ಅ೦ದಿನ ಚಣದೊಳ್ನೀರೆಯಾಗುತೆ ಬ೦ದು ಮೋಹಿಪುದು ಮಾನವ ಕೋಟಿಯ ||
ಬ೦ದುಮಾಡೆ ಶೆರೆಯ೦ದೆ ಭಟ್ಟಿಯೊಳ್ನಿ೦ದು ಗೌಪ್ಯದೊಳ್ನಲಿಯುವದು |
ಮಂದಹಾಸದಿಂ ತಾನಭಿಸಾರಿಕೆ ಯಂದದೆ ಮನೆಮನೆತಿರುಗುವದು || ೩ ||

ಹಿಂದು ದೇಶಪಿತ ಗಾಂಧಿಯಮಂತ್ರವ ನೋಂದನರಿಯೆ ಶೆರೆ ಸಿ೦ದಿಗಳು |
ಕುಂದುಕೊರತೆಗಳ ಪೊಂದಿ ವಿಶ್ವದಿಂ ಕಂದಿಹೋಗಿ ಕಾಲ್ತಗೆಯುವವು ||
ಇಂದುನಮ್ಮಯ ರಾಷ್ಟಶಕಟದನೊಗದಿ ಕುಂತಿಹರು ತಂದೆಯ ಸಮರು |
ಒಂದುಗೂಡಿ ಜನರೊಂದೆ ಮನದಿತಾ೦ ಗಾ೦ಧಿತತ್ವವವನು ಹರಡುವುದು || ೪ ||

ಸಿಂದಿಶೆರೆಗಳ ಬಂದು ಮಾಳ್ಪ ಹೊರೆಸಂದುದು ನಾಯ್ಕರ್ಗೆಂದೆನದೆ |
ಮುಂದುವರೆಯುತೆ ತಮ್ಮಯ ಸೇವೆಯಚಂದದಿ ನೀಡಲು ತಾಸುಖವು ||
ಬಂದುಕುಣಿಯುವದು ಸಗ್ಗದಿ ಗಾಂಧಿಯು ಸಂದಸಂತಸವ ತಾಪಡೆದು |
ಕುಂದುಕೊರತೆಗಳನರಿಯದೆ ಬಾಳಿರಿಯಂದವವರಗಳ ನೀಡುವನು || ೫||
*****

Tagged:

Leave a Reply

Your email address will not be published. Required fields are marked *

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...