Home / ಕವನ / ಕವಿತೆ / ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕನ್ನಡಿ ಕೊಳವೆ (ಕಲೀಡೋಸ್ಕೋಪ್)

ಕ್ಷಣ ಕ್ಷಣಕೂ ಏರುಬ್ಬರವಾಗಿ
ಭಗ್ನವಾಗುವ ಕನಸುಗಳ ಎಸೆಯದಿರಿ
ತುಂಬು ಕತ್ತಲೆಯ ಹೆಜ್ಜೆಗಳಿಗೆ
ಚುಕ್ಕೆಗಳ ಭರವಸೆಯ ಮಾತುಗಳು
ಗಜಿಬಿಜಿ ಹಾದಿಯಲ್ಲೂ
ಕುರುಡನಿಗೆ ಕೋಲು, ನಿರಾಳ ಉಸಿರು

ಅಂತರಂಗದ ಮಾತುಗಳು
ಮೂಕ ಕುರುಡು ಹೆಳವುಗಳೆಂದು
ನಿರಾಶರಾದರೆ ಹೇಗೆ?
ಮೌನ ಮುರಿದು ಮಾತು ಚಿಗಿತು
ಕಣ್ಣಂಚಿನ ಹನಿಗಳು
ಗಲ್ಲ ಸ್ಪರ್ಶಿಸಿ ಮುಂಗೈಗೆ ಬಿದ್ದದ್ದೇ
ಹೃದಯ ಹಗುರು ಸಂತೃಪ್ತ ಉಸಿರು

ವರ್ತಮಾನ ಭವಿಷ್ಯವೆಲ್ಲಾ
ಅರ್ಥವಿಲ್ಲದ್ದು ಎಂದಿರಾ !
ಹುಷಾರು, ಕಸಕಡ್ಡಿ ಬೆಳೆದು
ಬರಡಾದೀತು ಮನಸು
ಸುಟ್ಟು ಸುಣ್ಣವಾದಾವು ಕನಸುಗಳು,
ಮೇಲೆ ಕಟ್ಟಿಬಿಟ್ಟಾರು ಸಮಾಧಿ-
ನೋಡಿ ಆಕಾಶದಂಗಳ
ತೆರ ತೆರನಾದ ಬೆಳ್ಳಿಮೋಡಗಳ
ಕ್ಷಣ ಕ್ಷಣದ ಸಂತಸ
ಇದ್ದರೆ ಇರಲಿ ಏನಂತೆ ನಡುವೆ
ಕಪ್ಪು ಹಳದಿ ಮೋಡಗಳೂ-
ಕೆನ್ನೆ ಮೇಲಿನ ಗುಳಿಯಂತೆ.

ಬಿಸಿಲು ಬೇಗೆ
ಎಲ್ಲೆಲ್ಲೂ ದಾವಾನಲ, ನೀರಡಿಕೆ
ಎದುರಿಗೆ ಸಮುದ್ರದ ಭೋರ್ಗರೆತ
ಸಮುದ್ರಕ್ಕೆ ಬಾಯಿಹಚ್ಚಿ
ತಣಿಯುವ ತವಕ
ಆದರೆ, ಉಪ್ಪುಪ್ಪು ಜಿಗುಟು ಎಂದರೆ ಹೇಗೆ?
ಇರಲಿ, ಮುಖದ ಮೇಲಾದರೂ
ನೀರು ಚಿಮುಕಿಸಿಕೊಳ್ಳಿ
ಕಡಲಿನಲಿ ಕಾಲಾದರೂ ಎದ್ದಿ
ತಂಪಡರೀತು ಮೈಮನ.

ಬಿಡಿ ಆತ್ಮ ನಿಂದನೆ
ಮನದಾಳದ ಮೌನ, ನಿರಾಶೆ
ಒಂದೊಂದೆ ಒಡಲಾಳಕ್ಕೆ (ಕಲೀಡೋಸ್ಕೋಪ್) ಇಳಿಸಿ.

ಆಹಾ !!
ಎಷ್ಟೊಂದು ಮಾತುಗಳು
ಎಷ್ಟೊಂದು ಚಿತ್ರಗಳು
ಎಷ್ಟೊಂದು ಅರ್ಥಗಳು
ಈ ಮಗ್ಗಲು ಆ ಮಗ್ಗಲು
ಮತ್ತೊಂದು ಮಗ್ಗಲು ಇನ್ನೊಂದು ಮಗ್ಗಲು
ಹಾಗೇ ಮತ್ತೆ ಮತ್ತೆ
ತಡಕಾಟ ಹುಡುಕಾಟ

ಏನಿದು ಸಂಭ್ರಮ
ಬಿರಿದ ನೆಲಕೆ ಮಳೆ ಹನಿಯ ಸ್ಪರ್ಶ
ಮೊಗ್ಗೊಡೆದು ಘಮ್ಮೆನ್ನುವ ಸಮಯ.
*****
ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...