Home / ಕವನ / ಕವಿತೆ / ತುಂತುರುಗಳು

ತುಂತುರುಗಳು

ಪೋಪೋಪೆಡೆ ಹಿಟ್ಲರ ಪಡೆ
ಹಾಕಿದರೂ ಮಟ್ಟ
ಧೃತಿಗೆಡದಲೆ ಹೊಗೆಯುಗುಳುವ
ಚರ್ಚಿಲ್ಲನ ಚುಟ್ಟ;
ಜಡಿದರು ಮಳೆ, ಪೊತ್ತರು ಇಳೆ
ಉರಿಬಿಸಿಲಿನ ಕಾಟ
ವಿರಮಿಸುತಲಿ ಮಲಗುವ ಸೋ-
ಮಾರಿಯ ಸಿಗರೇಟ;
ಜ್ಞಾಪಿಸುವೊಲು ನಿಂತಿವೆ ಭ-
ದ್ರಾವತಿಯೊಳು, ರಮಣಿ
ಗಗನವನೇ ತಿನಿಯುವವೊಲು
ಹೊಗೆಯುಗುಳುವ ಚಿಮಣಿ!
* * *

“ಯಾವ ಅಟಾಮಿಕ್ಯು ಬಾಂಬು
ನನ್ನ ಮಂದೆ ನಿಲ್ವುದು?
ಯಾವ ಡೈನಮೈಟು ತಾನೆ
ನನ್ನ ಧುರದಿ ಗೆಲ್ವುದು?
ಯಾವುದಕ್ಕೊ ಈ ಜಗದಿ
ನನ್ನ ಮಾನ ಸಲ್ವುದು?”
ಎಂದು ವೃಥಾ ಕೂಗಿ ಕರಟ
ಆರ್ಭಟಿಸುತಲುರಿವುದು!
* * *

ಬಿಸಿನೀರ ಕಾವಿನಿಂ
ದವಳ ಮೊಗ ಕೆಂಪೇರಿ
ದುದ ಕಂಡು ನನ್ನ ಮನ ಕುದಿಯಿತಲ್ಲ!
ಬಿಸಿನೀರೆ! ನೀ ಧನ್ಯ!
ಅವಳ ಮೊಗವನು ನೀನು
ಮುತ್ತಿಟ್ಟು ಕೆಂಪೇರಿಸಿರುವೆಯಲ್ಲ!
* * *

“ಹಗಲು ಇರುಳು ನಾನು ಕಾದ
ಸವಿಯ ಹಣ್ಣ ತಿರುಳನು
ಸವಿದು ತಿಂಬರಲಾ ಜನರು
ಬಗೆಯುತೆನ್ನ ಕರುಳನು
ಹಾಳು ಜನರು ಕಾಲನಿಡಲಿ
ಕೈಯಕೊಡುವೆ” ನೆನ್ನುತ
ಬಾಳೆ ಹಣ್ಣ ಸಿಪ್ಪೆಯಿಹುದು
ರಸ್ತೆಯೊಳೇ ಕಾಯುತ!
* * *

“ಧೂಳು ಹಾರದಿರಲೆನುತ್ತ
ಟಾರ ರೋಡು ಹಾಕಿದ!
ಅಹುದು, ಒಪ್ಪಿಕೊಂಬೆ, ನನ್ನ
ನೇನೊ ಸೋಲ್ಗೆ ನೂಕಿದ!
ಆದರೇನು ಮಾಡಬಲ್ಲ?
ನಾನುಗುಳ್ವೆ ಕರಿಹೊಗೆ!”
ಎನುತದೊಂದು ಮುರುಕು ಕಾರು
ಸಾರುತಿತ್ತು ಊರಿಗೇ!
* * *

ಭೂತವಾದರು ಸರಿಯೆ ಮನುಜಗೆ
ಹೆದರಿ ನಿಲ್ಲದು ಅರೆಚಣ,
ಎಷ್ಟು ಧೈರ್ಯವೊ ಮೂಗ ಮೇಲೆಯೆ
ಬಂದು ಕೂರ್ವುದು ಈ ನೊಣ!

* * *
ಕರಿಯ ಹುಡುಗಿಯು ನಗಲು ಕಾಣುವ
ಬಿಳಿಯ ಹಲ್ಲಿನ ಮಿಂಚೊಲು
ಬೆಂಗಳೂರಿನ ಟಾರ ರೋಡೊಳು.
ಬೆಣಚು ಕಲ್ಲಿನ ಗೊಂಚಲು!
* * *

ಮರಗಳೆಲೆಯ ನಡುವೆ ಕಾಂಬ
ತುಂಬುವೆರೆಯ ಚೆಲುವಿಗೆ
ಸಾಟಿಯೇನು ಬರಿಯ ಕಣ್ಗೆ
ತೋರ್ವ ಚಂದ್ರಮಂಡಲ?-
ಒಡಲು ಕಂಡು ಕಾಣದಂಥ
ಅರ್ಧ ನಗ್ನ ಸುಂದರಿ
ಮನ ಸೆಳೆವೊಲು ಸೆಳೆವಳೇನು
ಪೂರ್ಣನಗ್ನ ರಮಣಿಯು!
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...