ಶ್ರೀ ಕೃಷ್ಣನಂತೊಂದು ಮುಗಿಲು

ಶ್ರೀ ಕೃಷ್ಣನಂತೊಂದು ಮುಗಿಲು
ರಾಧೆಯಂತಿನ್ನೊಂದು ಮುಗಿಲು
ಹೊಳೆದಾರಿ ಕಾಯುವ ಮುಗಿಲು
ಜರತಾರಿ ಸೆರಗಿನ ಮುಗಿಲು

ಬೆಣ್ಣೆಯ ಗಿರಿಯಂತೆ ಮುಗಿಲು ಅಲ್ಲೆ
ಬಳಸುವ ಯಮುನೆಯ ಮುಗಿಲು
ಗೋಪಿಯರ ತಂಡದ ಮುಗಿಲು ಬಲ್ಲೆ
ಹರಿಗೋಲು ಹುಣ್ಣಿಮೆ ಹೊನಲು

ಬಳ್ಳಿಯ ಮನೆಯಂತೆ ಮುಗಿಲು ಅಲ್ಲಿ
ಹಳ್ಳಿಯ ಹಾಡಿನ ಹುಯಿಲು
ಹೆಣ್ಣಿಗೆ ಎಷ್ಟೊಂದು ದಿಗಿಲು ನಿಲ್ಲಿ
ಕೆನ್ನೆಗೆ ಹೂವಿನ ನೆಳಲು

ಕಿರುತಾರೆ ಮುಡಿದೊಂದು ಮುಗಿಲು ತನ್ನ
ಚೆಲುವಿಗೆ ಬೆರಗಾದ ಮುಗಿಲು
ಕೊಳಲನು ತುಟಿಗಿಟ್ಟ ಮುಗಿಲು ನಿನ್ನ
ತುಟಿ ನನ್ನ ಕೊಳಲೆನುವ ಮುಗಿಲು

ಬಾ ಬಾರೆ ಎನ್ನುವ ಮುಗಿಲು ಅಲ್ಲಿ
ಬರಲಾರೆನೆನ್ನುವ ಮುಗಿಲು
ಕೆನ್ನೆ ಕೆಂಪಾದೊಂದು ಮುಗಿಲು ಎಲ್ಲಿ
ಇನ್ನೊಂದು ಮುತ್ತೆನುವ ಮುಗಿಲು

ಶ್ರೀ ಕೃಷ್ಣನಂತೊಂದು ಮುಗಿಲು
ರಾಧೆಯಂತಿನ್ನೊಂದು ಮುಗಿಲು
ಅಲ್ಲೊಂದು ಇಲ್ಲೊಂದು ಮುಗಿಲು
ಮುಗಿಲೆಲ್ಲ ಕೃಷ್ಣನ ಕೊಳಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಬ್ಬಾ! ಯೀ ಯೆಂಗ್ಸ್ರೇ ಯೀಗೇ…
Next post ಚಂದಿರ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…