ಸಬ್ ವೇ

ಅಲ್ಲಿ ಬೇಸರವಿಲ್ಲ
ಸುಮ್ಮನೆ ಅಡ್ಡಾಡಬಹುದು ಒಂದರ್ಧಗಂಟೆ
ಛಿ ! ಥೂ ! ಅಣಕೂಡದು ಮುಖ ಸಿಂಡರಿಸಲೇಬಾರದು
ಹಸನ್ಮುಖರಾಗಿರಬೇಕು.
ತೆರೆದ ಕಣ್ಣು ಬಿಚ್ಚಿದ ಮನಸ್ಸುಗಳಷ್ಟಿದ್ದರೂ ಸಾಕು
ಹಣವಿಲ್ಲದಿದ್ದರೂ ನಡೆದೀತು
ಗಡಿಬಿಡಿ ಇರಬಾರದಷ್ಟೆ !
ಕೊಂಡುಕೊಳ್ಳಲೇಬೇಕೆಂದೇನಿಲ್ಲ
ಧಾರಾಳ ಅವಕಾಶ ಹತ್ತಿಪ್ಪತ್ತು ರೂಪಾಯಿಗಳ
ಸಾಮಾನು ನೋಡಲು
ಹೆಚ್ಚು ಮಾತನಾಡಬಾರದಷ್ಟೆ.

ಅಬ್ಬಬ್ಬಾ ಒಮ್ಮೊಮ್ಮೆ ಅದೇನು ಚೆಂದ
ಜನಜಂಗುಳಿ ಕೆಂಡಹಾಯ್ದು ಓಡುವಂಥಾ ಗಡಿಬಡಿ
ಆಚೆ ಕಾಯುತ್ತಿರಬಹುದೆ ಹುಡುಗಿ –
ಗೇಟ್ ಹಾಕಬಹುದೆ ಪ್ಯಾಕ್ಟರಿಯ ವಾಚಮನ್ –
ಕಾಲೇಜು ಬೆಲ್ ಬಾರಿಸಿತೋ ಏನೋ –
ದೂರದೂರಿನ ಬಸ್ಸು ಹೋಗಿದ್ದರೆ ! –
ಹೇಗಿದ್ದಾನೋ ಕೌನ್ಸಿಲರ್ ಅವನೊಬ್ಬ –
ಹೀಗೆ ಹೀಗೆ ಅದೇನೇನೋ ಕಾರಣದವರು.

ಮೆಟ್ಟಲಿನಾಚೆ ಈಚೆ ಹೊಟ್ಟೆಪಾಡಿಗರ ದೈನ್ಯತೆ
ಒಂದು ಕೊಂಡರೆ ಇನ್ನೊಂದು ಫ್ರಿ ಸರ್
ಪೆನ್ನು ಪೆನ್ಸಿಲ್ ಅಷ್ಟೇ ಅಲ್ಲ
ವಾಚು ಇಲೆಕ್ಟ್ರಿಕ್ ಸಾಮಾನುಗಳೂ
ಮೇಡ್ ಇನ್ ಚೈನಾ ಕೋರಿಯಾದವುಗಳು

ಅಲ್ಲಲ್ಲಿ ಜಪಾನದವುಗಳೂ ಅದೆಂತಹ ಮಿಂಚು
ಅಷ್ಟಷ್ಟೇ ಕೊಂಡು ಕೊಡುವ
ಜಾಣ ಜಿಪುಣರಿಗೆ ಜಾತ್ರೆಯೋ ಜಾತ್ರೆ
ಅಲ್ಲಿ ಏನುಂಟು ಏನಿಲ್ಲ
ಚಿನ್ನ ಚಿನ್ನ ಆಸೆ…..

ಅದೋ ಅಲ್ಲಿ ಗೌಜು ಗದ್ದಲದಲ್ಲೂ ತಣ್ಣಗೆ
ಪಿಟಿಲು ಬಾರಿಸಿ ಎದೆಕೊರೆಯುವ ಕುರುಡ
ಚಿಂದಿತೊಟ್ಟು ನಿಶ್ಚಿಂತತೆಯಲಿ ಬಿದ್ದ ಹೆಳವ
ಪಿಳಿ ಪಿಳಿ ಕಣ್ಣು ಕೈ ಸನ್ನೆಯ ಮೂಗ
ಹೇಳಿ ಯಾರಿಗಿದ್ದೀತು ಹಾದಿಹೋಕರಿಗೆ
ಹೃದಯ, ಸಮಯ ಇಲ್ಲಿ
ಕಿಸೆಗೆ ಭಾರವಾಗಿದ್ದರೆ ಎರಡು ಬಿಲ್ಲೆ
ಚೆಲ್ಲಿ ಹಗುರಾಗಿ ಓಡುವ
ಮನಸುಗಳ ಹೊರತಾಗಿ –
ಇಲ್ಲಿ ಗೋಡೆಯ ಪಿಚಕಾರಿಗೆ
ಹೊಂದಿ ಕುಳಿತ ಭಿಕ್ಷುಕರು
ಅಲ್ಲಿ ಗುಮಾನಿಯಾಗಿ ನಿಂತು
ನೋಡುವ ಕಳ್ಳ ಕದೀಮ ಪ್ರಚಂಡರು
ಅರೆಬರೆ ಬೆಳಕಿನಲ್ಲಿಯೇ ಎದೆ ಬಿರಿದುಕೊಂಡು
ಹಾದಿಹೋಕರ ಕಣ್ಣೆಳೆಯುತ
ಹದಿಹರೆಯದ ಮಾಂಸ ಮಾರಿಕೊಳ್ಳುವ
ಕೆಂಪು ದೀಪಿಕೆಯರು-

ಮತ್ತೊಂದೆಡೆ ಗಾಲಿಯ ಖುರ್ಚಿಯ ಮೇಲೊಬ್ಬ ಅಜ್ಜ
ಸುಸಂಸ್ಕೃತ ವೇಷ ಭೂಷಣಧಾರಿ
ಆಯಾ ದೇಶಗಳ ಪ್ರವಾಸಿಗರ ನೋಡುತ
ಅವರವರದೇ ದೇಶಗೀತೆಗಳಲಿ ಪಿಟಿಲಿಸಿ ಗಮನ ಸೆಳೆಯುವವ
ಇಲ್ಲಿ ಇವರ ಹಿಂದೆಯೇ ಅವನ ಮೊಮ್ಮಕ್ಕಳು
ಪಿಕ್ ಪಾಕೇಟ್‌ಮಾಡಿ ಮೆಲ್ಲಗೆ ಸರಿಯುವ ಸಮಯ
ಒಂದು ಜಾಲ, ಲೀಲಾಜಾಲ, ಕೈಚಳಕ.

ಇಲ್ಲಿ ಸುರಂಗದಲ್ಲಿ
ಸೂರ್ಯ ಒಳಗೆ ಬರಲೊಲ್ಲ
ಕನಸುಗಳು ಚಿಗಿತಾವು ಹೇಗೆ?
ಕತ್ತಲಗರ್ಭದಲ್ಲಿ ನಡೆಯುವ ತಳಮಳಕೆ
ಕೇವಲ ವರ್ತಮಾನ.

ಪೋಲಿಸನದೋ, ಹಪ್ತಾ ವಸೂಲಿಯವನದೋ
ಚಾಟಿ ಕಟ ಕಟ, ಅದರೊಳಗಿನ ಮಾತು ಗೊತ್ತಷ್ಟೇ

ಹೆದರಿದಂತೆ ಗಂಟು ಕಟ್ಟುವ ಓಡುವ ನಾಟಕ
ಕಳ್ಳ ಕಾಕರು ಮೆತ್ತಗೆ ಕಾಲುಕೀಳುವ ಸಮಯ
ಸೂರ್ಯ ಮುಳುಗುತ್ತಾನೆ,
ಸಂಜೆ ಮತ್ತದೇ ಗರಿಗರಿ ಮುದುರಿದ
ಸುಕ್ಕಾದ ಸುಸ್ತಾದ ದೇಹಗಳು
ಬೂದಿ ತುಳಿಯುತ ತೆವಳುತ ಸಾಗುವ ರೀತಿ.
*****

ಪುಸ್ತಕ: ಇರುವಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿಡಿ, ಟಿಪ್ಪು ಠುಸ್ : ಸೋಭಾಯಾತ್ರೆ ಬುಸ್
Next post ಧೋ ಎಂದು ಸುರಿಯುತಿದೆ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys