Home / ಲೇಖನ / ಇತರೆ / ೫೧ ಎರಿಡನಿ ಬಿ ಗ್ರಹ

೫೧ ಎರಿಡನಿ ಬಿ ಗ್ರಹ

ಮೊನ್ನೆ ಆಗಸ್ಟ್ ೨೦೧೫ ರ ಸೈನ್ಸ್ ಪತ್ರಿಕೆಯನ್ನು ಬಹಳ ಕುತೂಹಲದಿಂದ ಓದುತ್ತಿದ್ದೆ. ನನಗೆ ಚಿಕ್ಕಂದಿನಿಂದಲೂ ಸೈನ್ಸ್ ಬಗ್ಗೆನೂ ತೀವ್ರ ಆಸಕ್ತಿ.

ಭವ್ಯ ಭಾರತದ ಮೂಲ ಇಬ್ಬರು ಮಹಾ ವಿಜ್ಞಾನಿಗಳಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಂಡವೊಂದು ಲಾಸ್ ಎಂಜಲಿಸ್‌ನಲ್ಲಿ ಭೂಮಿಯಿಂದ ೧೦೦ ಜ್ಯೋರ್ತಿವರ್ಷ ಸೆಕೆಂಡ್‌ಗೆ ೩.೮೬ ಲಕ್ಷ ಕಿಲೋಮೀಟರ್ ವೇಗದಲ್ಲಿ ಒಂದು ವರ್ಷ ಸವೆಸುವ ದೂರದೂರ ಬಹುದೂರದಲ್ಲಿ ಮಿಥೇನ್ ಭರಿತ ಗ್ರಹವೊಂದನ್ನು ಪತ್ತೆ ಮಾಡಿರುವರು.

ಓದುತ್ತಾ ಓದುತ್ತಾ ಅಬ್ಬಾ! ಎಂದೆ. ವಿಜ್ಞಾನಿಗಳೆ ಹೀಗೆ ಯಾರೂ ಪತ್ತೆ ಹಚ್ಚದ್ದನ್ನು ಪತ್ತೆ ಹಚ್ಚಿ ಸಂಭ್ರಮಿಸುವರು.

ಈ ಗ್ರಹ ಸಂಪೂರ್ಣವಾಗಿ ಮಿಥೇನ್‌ನಿಂದ ಕೂಡಿದೆ. ಇದನ್ನು “೫೧ ಎರಿಡನಿ ಬಿ ಗ್ರಹ” ಎಂದು (ಕೂಸು) ಕರೆದಿರುವರು. ಇದು ಗುರು ಗ್ರಹದಂತಿರುವುದರಿಂದ ಇದನ್ನು ಗುರು ಗ್ರಹದ “ತಮ್ಮ” ಎಂದಿರುವರು.

ಭಲೇ ಭಲೇ ವಿಜ್ಞಾನಿಗಳೂ ಕೂಡಾ ಒತ್ತಡವನ್ನು ನಿವಾರಿಸಿಕೊಳ್ಳಲು ಏನೆಲ್ಲ ಪರಿಭಾಷೆಯಲ್ಲಿ ಕರೆದು ನಗುವರಲ್ಲದೆ, ಈ ಗ್ರಹದಲ್ಲಿ ನೀರಿರುವ ಬಗ್ಗೆ ಸಂಶಯ ವ್ಯಕ್ತ ಪಡಿಸಿರುವರು.

ಈ ಗ್ರಹ ಸುಮಾರು ೨ ಕೋಟಿ ವರ್ಷಗಳಷ್ಟು ಹಳೆಯದೆಂದು ಅಭಿಪ್ರಾಯ ಪಟ್ಟಿರುವರು.

ನಕ್ಷತ್ರಗಳ ಸುತ್ತ ದೈತ್ಯ ಅನಿಲ ಗ್ರಹಗಳು ರೂಪುಗೊಳ್ಳುವ ಪ್ರಕ್ರಿಯೆಯನ್ನು ಈ ಗ್ರಹದ ಸ್ಥಿತಿಯನ್ನು ಆಧರಿಸಿ ಅರಿಯಬಹುದೆಂದು ಹತ್ತಿರದ ನಕ್ಷತ್ರಗಳನ್ನು ಸುತ್ತುತ್ತಿರುವ ಗ್ರಹಗಳನ್ನು ಪತ್ತೆ ಮಾಡುವ ಘನ ಉದ್ದೇಶದಿಂದ ರೂಪಿಸಿರುವ “ಜೆಮಿನಿ ಪ್ಲಾನೆಟ್ ಇಮೇಜರ್” ನಿಂದ ಪತ್ತೆ ಮಾಡಿರುವ ಮೊತ್ತ ಮೊದಲ ಗ್ರಹವಿದೆಂದು ವಿಜ್ಞಾನಿಗಳ ತಂಡ ತಮ್ಮ ಸಂಶೋಧನೆಯ ವಿವರಗಳನ್ನು ಹಂಚಿಕೊಂಡಿದೆ.

ಜೆಪಿ‌ಐನಲ್ಲಿರುವ ಅತ್ಯಾಧುನಿಕ ಸ್ಪೆಕ್ಟ್ರೊ ಮೀಟರ್‌ನ ಸಹಾಯದಿಂದ ಈ ಗ್ರಹದಲ್ಲಿ ಮಿಥೇನ್ ಅಂಶವಿರುವುದನ್ನು ಪತ್ತೆ ಮಾಡಲಾಗಿದೆಯೆಂದು ವಿಜ್ಞಾನಿಗಳ ತಂಡ ಹೇಳಿದೆಯಲ್ಲದೆ, ಈತನಕ ನಮ್ಮ ಹಾಲು ಹಾದಿಯ ಹೊರಗಿನ ಆಕಾಶ ಗಂಗೆಯಲ್ಲಿ ಪತ್ತೆಯಾಗಿರುವ ಅತ್ಯಂತ ಹೆಚ್ಚಿನ ಮಿಥೇನ್ ಸಾಂದ್ರತೆಯಿರುವ ಗ್ರಹವಾಗಿದೆ ಎಂದಿರುವರು!

ಈ ಗ್ರಹದಲ್ಲಿ ನೀರಿದೆ ಮಿಥೇನ್ ಇದೆ. ಹೀಗಾಗಿ ಇತರೆ ನಮ್ಮ ಸೌರವ್ಯೂಹದ ಗ್ರಹಗಳಲ್ಲಿರುವಂತೆ ತಂಪಿದೆ. ಇಲ್ಲಿ ೪೨೭ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಇತರೆ ಗ್ರಹಗಳಲ್ಲಿ ೫೩೭ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆಯೆಂದು ಭವ್ಯ ಭಾರತದ ಮೂಲ ವಿಜ್ಞಾನಿಗಳಾದ ಸ್ಟೋನಿ ಬ್ರೂಕ್ ವಿಶ್ವವಿದ್ಯಾಲಯದ ರಾಹುಲ್ ಪಟೇಲ್ ಬಾಲ್ಟಿಮೋರ್‌ನ ಸ್ಪೇಸ್ ಟೆಲಿಸ್ಕೋಪ್ ಸೈನ್ಸಸ್ ಇನ್ಸ್‌ಟಿಟ್ಯೂಟ್‌ನ ಅಭಿಜಿತ್‌ ರಾಜನ್‌ ಅವರೆಲ್ಲ ಸೇರಿ ಈ ಸಂಶೋಧನೆ ಕೈಗೊಂಡು ಸಫಲರಾಗಿರುವರು.

ಈ ತಂಡದಲ್ಲಿ ಭವ್ಯ ಭಾರತದ ವಿಜ್ಞಾನಿಗಳಿದ್ದಾರೆಂಬುದೇ ಹೆಮ್ಮೆಯ ಸಂಗತಿಯಲ್ಲವೇ?

ಈಗೀಗ ಭಾರತ ದೇಶ ಯಾವುದರಲ್ಲಿ ಕಮ್ಮಿಯಿಲ್ಲ ಅಲ್ಲವೇ??
*****

Tagged:

Leave a Reply

Your email address will not be published. Required fields are marked *

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...