Home / ಕವನ / ಕವಿತೆ / ಮಳಿ ಬಂತು

ಮಳಿ ಬಂತು

ಮಳಿ ಬಂತು ನೋಡು ಮೂಡಲಿನ್ಯಾಗ-
ಮರಡೀಯ ತಲಿಯ ಮ್ಯಾಗ
ಗುಡು ಗುಡುಡು ಎಂದು ಗುಡಗ್ತದ ಕಾಡು ಕರಿಮುಗಿಲು-
ಕೇಳ್ದವರ ಎದೆಗೆ ಭುಗಿಲು
ಗಡಗಡಡ ಎ೦ದು ನಡಗ್ತದ ನಿಂತ ನೆಲದೊಡಲು-
ನೆರೆದವರಿಗೆಲ್ಲ ದಿಗಿಲು
ಇದನೋಡಿ ರವಿಯು ತಾನೋಡಿ ಹೋದನಪ ಚದರಿ
ಬರಲಿಲ್ಲ ಚಿಕ್ಕಿಗಳು ಬೆದರಿ
ಮಳಿಬಂತು ನೋಡು ಮೂಡಲಿನ್ಯಾಗ-
ಮರಡೀಯ ತಲಿಯ ಮ್ಯಾಗ

ಬಾನಿ೦ದ ಬಿದ್ದು ಮೇಲೆದ್ದು ಮಣ್ಣಿನೊಡನಿದ್ದು-
ಹೊರಟೀತು ನೀರು ನೆಲದುದ್ದು
ಹನಿ ಹನಿ ಕೂಡಿ ಹಳ್ಳಾಗಿ ತುಂಬಿ ಹರಿದಾವ ಹೊಳೆಯ ಕಡಿಗಾಗಿ-
ಅಲ್ಲಲ್ಲಿ ನಿಂತು ಮಡುವಾಗಿ
ಹೊಲ ತುಂಬಿ ತುಳಕಿ ಕೆರೆನೀರ ಕುಲುಕಿ ನದಿನೀರನೆಲ್ಲ ಕಲಕಿ-
ಹಾಕೀತು ನೀರು ತಳಕಿ
ಗಿಡಮರ ಬಳ್ಳಿ ಎಲಿಸಾಲು ಕಳ್ಳಿ ನಿಂತಾವ ಜಳಕ ಮಾಡಿ-
ತಣಿದಾವು ನೀರ ನೋಡಿ
ಮಳಿ ಬಂತು ನೋಡು ಮೂಡಲಿನ್ಯಾಗ-
ಮರಡೀಯ ತಲಿಯ ಮ್ಯಾಗ
ದಿಕ್ಕೆಟ್ಟು ಹಾರಿ ಸಿಕ್ಕಲ್ಲೆ ಸೇರಿ ಹುದುಗ್ಯಾವ ಹಕ್ಕಿ ಪಕ್ಕಿ-
ಆಗ್ಯಾವ ಕಕ್ಕ ಬಿಕ್ಕಿ
ಗಿಡದಿಂದ ಗಿಡಕೆ ಹಾರಾಡಿ ನಡಕ ಬದ್ದಾವ ಕೋತಿ ಜೋತು-
ಮಳೆಗೂಡ ಹೆಣಗಿ ಸೋತು
ದನಕರುಗಳೆಲ್ಲ ನಿಂತಾವ ಹುಲ್ಲ ತಿನಲಾರ್ದ ಅಡವಿಯಲ್ಲಿ-
ಬೆಪ್ಪಾಗಿ ಅಲ್ಲಿ ಇಲ್ಲಿ
ದನಕಾವ ಹುಡುಗಹುಡುಗಿಯರು ಮನೆಗೆ ಬಂದಾರ ಓಡಿತೊಯ್ದು-
ಬಿಟಗೊಟ್ಟ ಹುಲ್ಲ ಕೊಯ್ದು
ಮಳಿ ಬಂದಿ ನೋಡು – ಮೂಡಿಲಿನ್ಯಾಗ
ಮರಡೀಯ ತಲಿಯ ಮ್ಯಾಗ

ಬೇಸಿಗೆಯ ಬಿಸಿಲ ಬೇಗೆಯಲಿ ಬಳಲಿ ಬೆಂದಾಳ ಭೂಮಿತಾಯಿ-
ನೀರಡಿಸಿ ಬಿಟ್ಟು ಬಾಯಿ
ಗುಡ್ಡಕ್ಕೆ ತಾಗಿ ಹತ್ತಿದ್ದ ಬ್ಯಾಗಿ ಸುಟ್ಟಂಥ ಮೈಯ ಚಾಚಿ
ಹಲುಬ್ಯಾಳ ಆಂಗಲಾಚಿ
ಬಾಯಾರಿ ಬಾಯ್ಬರದೆ ಬಿದ್ದಲ್ಲೆ ಇದ್ದಽರು ಆಸರಕೆ ದೈವ ಬ೦ತು-
ಮರೆಯಲ್ಲಿ ಇತ್ತು ನಿಂತು
ಆಕಾಶ ತಂದೆ ಎದೆ ಕರಗಿ ಬ೦ದೆ ಮಳೆಯಾಗಿ ನೆಲಕೆ ನಿಂದೆ
ಬರುವಾಗ ಅಮೃತ ತಂದೆ
ಮಳೆ ಬಂತು ನೋಡು ಮೂಡಲಿನ್ಯಾಗ
ಮರಡೀಯ ತಲಿಯಮ್ಯಾಗ
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...