Home / ಕವನ / ಕವಿತೆ / ಇತಿಹಾಸಾವಲೋಕನ ನಿರ್ವೇದ

ಇತಿಹಾಸಾವಲೋಕನ ನಿರ್ವೇದ

ಪರಶಿವಗು ತಪದಿಚ್ಛೆಯೊಮ್ಮೆಗೆ ಹರಿಗು ಯೋಗದ ನಿದ್ದೆಯು
ಭಾರತಾತ್ಮವೆ, ನಿನಗು ಅಂತರ್ಮುಖತೆಯಾಯಿತೆ ಸಹಜದಿ?
ನೀನು ಸಾಸಿರವರುಷ ಜಡರೊಳೆಯಿದ್ದೆ ಹರಣವ ಹದುಗಿಸಿ
ತವರ ಸೇರಿದ ಮೇಲೆ ಜಾನಕಿ ರಾಮರಾಜ್ಯವಿದೋ ಎನೆ.

ಕೃಷಿಯುಪೇಕ್ಷಿತವಾಗಿ ಹುಲುಸದ ನೆಲಕೆ ಚಿಚ್ಚರದೊಕ್ಕಲು
ಗೊಬ್ಬರವನಿಕ್ಕೊವೊಲು ತಂದನು ಪರಜನವ ಪಶುಪತಿಯೆನೆ
ಶಕರು ಹೂಣರು ತುರುಕರಾಫ್ಘನರಂತೆ ಮುಘಲರು ತಮ್ಮಯ
ತನುಮನವ ಬೆರಸಿದರು ನಿನ್ನಯ ಮಣ್ಣಿನೊಳು ರಸವೂರಲು.

ಬೇಸಾಯ ಬೆಳೆಯಪ್ಪ ಕಾಲಕೆ ಕಳೆಗಳೇಳ್ವವು ಹುಳುಗಳೂ
ಹಾಲು ತೆನೆಗೂಡುತಿರೆ ಪೈರೊಳು ಬೆಳ್ಳಕ್ಕಿ ಸಾಲಿಡುವುವು
ಇಂತೆ ಆಯಿತೊ ಏನೊ ನಮ್ಮೀನಾಡಿನೈಸಿರಿ ಸುಗ್ಗಿಗೆ
ಈ ನೆಲದಿ ಹುಳು ಹುಪಟೆ ಹೆಚ್ಚಿತು, ಬಿಳಿಯ ಜನ ಕಾಲೂರಿತು.

ಮೇದನಿಯ ಬಲದಿಂದಲೊಯ್ಯುವ ಹಿರಣ್ಯಾಕ್ಷರೊ ಎಂಬೊಲು
ಆಸುರವ ಮೆರೆಸುತ್ತ ಸೆಳೆದರು ಭಾರತಾತ್ಮವನಾಂಗ್ಲರು
ವಿಜ್ಞಾನ ಪಾಶಗಳ ಬೀಸುತ ಬಂಧಿಸುತ ಕೊಂಡೊಯ್ದರು
ಸಪ್ತಸಾಗರದಾಚೆ ತಮ್ಮಯ ನಾಡ ಮಂಚಕೆ ಬಿಗಿದರು.

ಎಲೆ, ಹರಿಪ್ರಿಯೆ, ನಿನ್ನ ತನುಜರ ಭಂಗಕಾವನು ಮರುಗನು
ನಿನ್ನ ಋಷಿಕವಿದೇವಗಮನವ ಸೆಳೆದೆಯಾ ನಿಟ್ಟುಸಿರೊಳು?
ಮುಕ್ತರವರನುತಪಿಸಿ ಬಿದ್ದರೆ ಪುನರ್ಜನ್ಮದ ಬವಣೆಗೆ
ನಿನ್ನ ಮಣ್ಣೊಳೆ ತನುವನಾನುತ ನಿನ್ನ ನಿಭವವ ಮರಳಿಸೆ?
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...