Home / ಕವನ / ಕವಿತೆ / ಹೀಗೂ ಆಯಿತೊಮ್ಮೆ

ಹೀಗೂ ಆಯಿತೊಮ್ಮೆ

ತೀರ ಇತ್ತೀಚಿಗೆ ಸಂಜೆಹೊತ್ತಿನ
ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ
ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು
ಅದು ~ಆಕ್ಸಿಡೆಂಟೇ ಅಲ್ಲ
ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು
ಕಿರುಗುಟ್ಟಿದ ಗಾಲಿ –
ಮುಂದಿನ ಕಾರು ಚಾಲಕ ಅರ್ಧಬೋಳು ತಲೆಯ
ಕರಿಯ ಹೊಟ್ಟಡುಮ್ಮ ಹೈದಗಳು
‘ಏನು ಗುಂಡಹಾಕಿ
ಕಾರು ಹೊಡೆತಾ ಇದ್ದಿಯಾ ಅಮ್ಮಣ್ಣಿ
ಕೆಳಗಿಳಿದು ದಂಡಕೊಟ್ಟು ಹೋಗು
ಕಾಸಿಲ್ಲದೆ ಕಾರು ಬಿಡುವುದಿಲ್ಲ’ ಕಿರುಚಾಟ ಕೂಗಾಟ
ಕೈಗೆ ಸಿಕ್ಕ ಶಾಪಿಂಗ್ ಬ್ಯಾಗ್ ಕಿತ್ತು
ದುರುಗುಟ್ಟುತ್ತ ಹೋದವು.

ಮರೆತು ಬಿಡಬಹುದಾದಂತಹುದೇ ವಿಷಯ
ನಾಲ್ಕಾರು ದಿನ ಕಳೆದರೂ ಪದೇ ಪದೇ
~ಆಕ್ಸಿಡೆಂಟ್ ಅಲ್ಲದ ~ಆಕ್ಸಿಡೆಂಟದ್ದೆ ಚಿತ್ರ
ಮನೆಯಲ್ಲಿ ಹೇಳಿ ಹಗುರಾಗಿದ್ದರೂ
ಮತ್ತದೇ ರಸ್ತೆ, ಕಾರು ಗಲಾಟೆ ಗಜಿಬಿಜಿ ಚಿತ್ರ.

ಮೊನ್ನೆ ಇದ್ದಕ್ಕಿದ್ದಂತೆ ಬಂತು
ಅದೇ ಹೈದಗಳ ಕಾರು ಮನೆಮುಂದಿನ
ರಸ್ತೆಯ ಆಚೆಗೆ
ತಬ್ಬಿಬ್ಬಾದೆ
ಒಳಗಡೆಯ ಮುಖಗಳೆಲ್ಲಾ ಅವೇ

ಭಯ ನಡುಕ ಸಣ್ಣಗೆ ಬೆವರು
ಹಾಗಾಗಬಾರದಿತ್ತು ನನಗೆ
ಐದು ಹತ್ತು ನಿಮಿಷ ಅರ್ಧಗಂಟೆ
ಇಳಿಯಲೊಲ್ಲವು ಹೋಗಲೊಲ್ಲವು ಪಾಪಿಗಳು
ಇಳಿಯತೊಡಗಿದವು ಒಂದೊಂದಾಗಿ.

ಅದೇನೇನೋ ಹುಡುಕತೊಡಗಿದವು
ಇಳಿಬಿಟ್ಟ ಬಗಲ ಚೀಲದಲಿ
ಇರಬಹುದೆ ಬಾಂಬು ಬಂದೂಕು ಚಾಕು ಚೂರಿ
(ಪೇಪರ ಸುದ್ದಿಗಳು ಒಬ್ಬೊಂಟಿಮಹಿಳೆಯ ಕೊಲೆ, ಹತ್ಯ)
ಒತ್ತಿದವು ಕರೆಗಂಟೆ ನೆತ್ತಿಗೆ ಬಂತು ಜೀವ
ಕಿಟಕಿ ಈಚೆಯಿಂದಲೇ ಯಾರು? ಎಂದೆ
ಏನೇನೂ ಗೊತ್ತಿಲ್ಲದವರಂತೆ.

ನಾವು ನಾವು ಅದೇs…….
ಕ್ಷಮಿಸಿ ಮೇಡಂ ನೀವು….
ನಿಮ್ಮ ಬ್ಯಾಗಿನಲ್ಲಿ ಸಿಕ್ಕ ಪುಸ್ತಕಗಳು….
ಕ್ಷಮಿಸಿ ಮೇಡಂ…..
ನಿಮ್ಮೊಂದಿಗೆ ಮಾತನಾಡಬೇಕು…..

ಸಾವರಿಸಿಕೊಂಡು
ಒಳಗೆ ಕರೆಯದೆ ಗೇಟಿನವರೆಗೆ ನಾನೇ ಹೋದೆ
’ನಮಸ್ಕಾರ ಮೇಡಂ ನೀವು ಅಂತಾ ಗೊತ್ತಾಗ್ಲಿಲ್ಲ
ಹೊರರಾಜ್ಯದವರ ಐಟಿ ಬಿಟಿ ಯವರ ಹಾವಳಿ
ಜಾಸ್ತಿ ನೋಡಿ ನಾವು ಕನ್ನಡಾಭಿಮಾನಿಗಳು’
‘ಮಾತನಾಡಿದಿರಲ್ಲ ಕನ್ನಡದಲ್ಲಿ’ ಅಂದೆ

ಮತ್ತೆ ಮತ್ತೆ ಬಗಲಚೀಲದಲಿ
ಕೈಯಾಡಿಸುವುದ ನೋಡಿ ಇದೇನೋ
ಆಪತ್ಕಾಲ ಬಂತೆಂದೆ
ದೊಡ್ಡಮಾಲೆ ತೆಗೆದು ಕೈಗಿಟ್ಟು
’ಕ್ಷಮಿಸಿಮೆಡಂ’ ಎಲ್ಲಾ ಒಟ್ಟಾಗಿ ಅಂದವು
ಬೆವೆತು ಕಂಪಿಸಿದೆ ಮಂಪರು ಏನಾದರು ಇದ್ದರೆ –

‘ನಮ್ಮ ಸಂಘದ ರಾಜ್ಯೋತ್ಸವ ಅಧ್ಯಕ್ಷತೆಗೆ
ನೀವು ಬರಲೇಬೇಕು
ನಿಮ್ಮ ಒಪ್ಪಿಗೆ ಬೇಕು ಮೆಡಂ’
ನಾನು ಮರೆತೂ ಒಳಗಡೆ ಕರೆಯಲಿಲ್ಲ
ಯಾರಿಗೆಗೊತ್ತು ಯಾವಯಾವ ರೂಪಿನವರೆಂದು
ಫೋನ್‌ದಲ್ಲಿ ಹೇಳುವುದಾಗಿ ಕಳಿಸಿ
ಅದು ಬರದೇ ಇದ್ದರೆ ಸಾಕಪ್ಪ ದೇವರೆ
ಎಂದೆನ್ನುತ್ತ ಒಳಗೆ ಬಂದು
ಸೋಫಾದಲ್ಲಿ ದೊಪ್ಪನೆ ಬಿದ್ದುಕೊಂಡೆ.
*****

ಪುಸ್ತಕ: ಇರುವಿಕೆ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...