ಹೀಗೂ ಆಯಿತೊಮ್ಮೆ

ತೀರ ಇತ್ತೀಚಿಗೆ ಸಂಜೆಹೊತ್ತಿನ
ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ
ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು
ಅದು ~ಆಕ್ಸಿಡೆಂಟೇ ಅಲ್ಲ
ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು
ಕಿರುಗುಟ್ಟಿದ ಗಾಲಿ –
ಮುಂದಿನ ಕಾರು ಚಾಲಕ ಅರ್ಧಬೋಳು ತಲೆಯ
ಕರಿಯ ಹೊಟ್ಟಡುಮ್ಮ ಹೈದಗಳು
‘ಏನು ಗುಂಡಹಾಕಿ
ಕಾರು ಹೊಡೆತಾ ಇದ್ದಿಯಾ ಅಮ್ಮಣ್ಣಿ
ಕೆಳಗಿಳಿದು ದಂಡಕೊಟ್ಟು ಹೋಗು
ಕಾಸಿಲ್ಲದೆ ಕಾರು ಬಿಡುವುದಿಲ್ಲ’ ಕಿರುಚಾಟ ಕೂಗಾಟ
ಕೈಗೆ ಸಿಕ್ಕ ಶಾಪಿಂಗ್ ಬ್ಯಾಗ್ ಕಿತ್ತು
ದುರುಗುಟ್ಟುತ್ತ ಹೋದವು.

ಮರೆತು ಬಿಡಬಹುದಾದಂತಹುದೇ ವಿಷಯ
ನಾಲ್ಕಾರು ದಿನ ಕಳೆದರೂ ಪದೇ ಪದೇ
~ಆಕ್ಸಿಡೆಂಟ್ ಅಲ್ಲದ ~ಆಕ್ಸಿಡೆಂಟದ್ದೆ ಚಿತ್ರ
ಮನೆಯಲ್ಲಿ ಹೇಳಿ ಹಗುರಾಗಿದ್ದರೂ
ಮತ್ತದೇ ರಸ್ತೆ, ಕಾರು ಗಲಾಟೆ ಗಜಿಬಿಜಿ ಚಿತ್ರ.

ಮೊನ್ನೆ ಇದ್ದಕ್ಕಿದ್ದಂತೆ ಬಂತು
ಅದೇ ಹೈದಗಳ ಕಾರು ಮನೆಮುಂದಿನ
ರಸ್ತೆಯ ಆಚೆಗೆ
ತಬ್ಬಿಬ್ಬಾದೆ
ಒಳಗಡೆಯ ಮುಖಗಳೆಲ್ಲಾ ಅವೇ

ಭಯ ನಡುಕ ಸಣ್ಣಗೆ ಬೆವರು
ಹಾಗಾಗಬಾರದಿತ್ತು ನನಗೆ
ಐದು ಹತ್ತು ನಿಮಿಷ ಅರ್ಧಗಂಟೆ
ಇಳಿಯಲೊಲ್ಲವು ಹೋಗಲೊಲ್ಲವು ಪಾಪಿಗಳು
ಇಳಿಯತೊಡಗಿದವು ಒಂದೊಂದಾಗಿ.

ಅದೇನೇನೋ ಹುಡುಕತೊಡಗಿದವು
ಇಳಿಬಿಟ್ಟ ಬಗಲ ಚೀಲದಲಿ
ಇರಬಹುದೆ ಬಾಂಬು ಬಂದೂಕು ಚಾಕು ಚೂರಿ
(ಪೇಪರ ಸುದ್ದಿಗಳು ಒಬ್ಬೊಂಟಿಮಹಿಳೆಯ ಕೊಲೆ, ಹತ್ಯ)
ಒತ್ತಿದವು ಕರೆಗಂಟೆ ನೆತ್ತಿಗೆ ಬಂತು ಜೀವ
ಕಿಟಕಿ ಈಚೆಯಿಂದಲೇ ಯಾರು? ಎಂದೆ
ಏನೇನೂ ಗೊತ್ತಿಲ್ಲದವರಂತೆ.

ನಾವು ನಾವು ಅದೇs…….
ಕ್ಷಮಿಸಿ ಮೇಡಂ ನೀವು….
ನಿಮ್ಮ ಬ್ಯಾಗಿನಲ್ಲಿ ಸಿಕ್ಕ ಪುಸ್ತಕಗಳು….
ಕ್ಷಮಿಸಿ ಮೇಡಂ…..
ನಿಮ್ಮೊಂದಿಗೆ ಮಾತನಾಡಬೇಕು…..

ಸಾವರಿಸಿಕೊಂಡು
ಒಳಗೆ ಕರೆಯದೆ ಗೇಟಿನವರೆಗೆ ನಾನೇ ಹೋದೆ
’ನಮಸ್ಕಾರ ಮೇಡಂ ನೀವು ಅಂತಾ ಗೊತ್ತಾಗ್ಲಿಲ್ಲ
ಹೊರರಾಜ್ಯದವರ ಐಟಿ ಬಿಟಿ ಯವರ ಹಾವಳಿ
ಜಾಸ್ತಿ ನೋಡಿ ನಾವು ಕನ್ನಡಾಭಿಮಾನಿಗಳು’
‘ಮಾತನಾಡಿದಿರಲ್ಲ ಕನ್ನಡದಲ್ಲಿ’ ಅಂದೆ

ಮತ್ತೆ ಮತ್ತೆ ಬಗಲಚೀಲದಲಿ
ಕೈಯಾಡಿಸುವುದ ನೋಡಿ ಇದೇನೋ
ಆಪತ್ಕಾಲ ಬಂತೆಂದೆ
ದೊಡ್ಡಮಾಲೆ ತೆಗೆದು ಕೈಗಿಟ್ಟು
’ಕ್ಷಮಿಸಿಮೆಡಂ’ ಎಲ್ಲಾ ಒಟ್ಟಾಗಿ ಅಂದವು
ಬೆವೆತು ಕಂಪಿಸಿದೆ ಮಂಪರು ಏನಾದರು ಇದ್ದರೆ –

‘ನಮ್ಮ ಸಂಘದ ರಾಜ್ಯೋತ್ಸವ ಅಧ್ಯಕ್ಷತೆಗೆ
ನೀವು ಬರಲೇಬೇಕು
ನಿಮ್ಮ ಒಪ್ಪಿಗೆ ಬೇಕು ಮೆಡಂ’
ನಾನು ಮರೆತೂ ಒಳಗಡೆ ಕರೆಯಲಿಲ್ಲ
ಯಾರಿಗೆಗೊತ್ತು ಯಾವಯಾವ ರೂಪಿನವರೆಂದು
ಫೋನ್‌ದಲ್ಲಿ ಹೇಳುವುದಾಗಿ ಕಳಿಸಿ
ಅದು ಬರದೇ ಇದ್ದರೆ ಸಾಕಪ್ಪ ದೇವರೆ
ಎಂದೆನ್ನುತ್ತ ಒಳಗೆ ಬಂದು
ಸೋಫಾದಲ್ಲಿ ದೊಪ್ಪನೆ ಬಿದ್ದುಕೊಂಡೆ.
*****

ಪುಸ್ತಕ: ಇರುವಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಳಾಕ್ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂತಾನ್ರಿ ಕೊಮಾರರಾಮ!
Next post ಶಂಕೆಯೆಂಬ ಬೆಂಕಿ ಸೋಕಿ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

cheap jordans|wholesale air max|wholesale jordans|wholesale jewelry|wholesale jerseys