ಹೀಗೂ ಆಯಿತೊಮ್ಮೆ

ತೀರ ಇತ್ತೀಚಿಗೆ ಸಂಜೆಹೊತ್ತಿನ
ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ
ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು
ಅದು ~ಆಕ್ಸಿಡೆಂಟೇ ಅಲ್ಲ
ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು
ಕಿರುಗುಟ್ಟಿದ ಗಾಲಿ –
ಮುಂದಿನ ಕಾರು ಚಾಲಕ ಅರ್ಧಬೋಳು ತಲೆಯ
ಕರಿಯ ಹೊಟ್ಟಡುಮ್ಮ ಹೈದಗಳು
‘ಏನು ಗುಂಡಹಾಕಿ
ಕಾರು ಹೊಡೆತಾ ಇದ್ದಿಯಾ ಅಮ್ಮಣ್ಣಿ
ಕೆಳಗಿಳಿದು ದಂಡಕೊಟ್ಟು ಹೋಗು
ಕಾಸಿಲ್ಲದೆ ಕಾರು ಬಿಡುವುದಿಲ್ಲ’ ಕಿರುಚಾಟ ಕೂಗಾಟ
ಕೈಗೆ ಸಿಕ್ಕ ಶಾಪಿಂಗ್ ಬ್ಯಾಗ್ ಕಿತ್ತು
ದುರುಗುಟ್ಟುತ್ತ ಹೋದವು.

ಮರೆತು ಬಿಡಬಹುದಾದಂತಹುದೇ ವಿಷಯ
ನಾಲ್ಕಾರು ದಿನ ಕಳೆದರೂ ಪದೇ ಪದೇ
~ಆಕ್ಸಿಡೆಂಟ್ ಅಲ್ಲದ ~ಆಕ್ಸಿಡೆಂಟದ್ದೆ ಚಿತ್ರ
ಮನೆಯಲ್ಲಿ ಹೇಳಿ ಹಗುರಾಗಿದ್ದರೂ
ಮತ್ತದೇ ರಸ್ತೆ, ಕಾರು ಗಲಾಟೆ ಗಜಿಬಿಜಿ ಚಿತ್ರ.

ಮೊನ್ನೆ ಇದ್ದಕ್ಕಿದ್ದಂತೆ ಬಂತು
ಅದೇ ಹೈದಗಳ ಕಾರು ಮನೆಮುಂದಿನ
ರಸ್ತೆಯ ಆಚೆಗೆ
ತಬ್ಬಿಬ್ಬಾದೆ
ಒಳಗಡೆಯ ಮುಖಗಳೆಲ್ಲಾ ಅವೇ

ಭಯ ನಡುಕ ಸಣ್ಣಗೆ ಬೆವರು
ಹಾಗಾಗಬಾರದಿತ್ತು ನನಗೆ
ಐದು ಹತ್ತು ನಿಮಿಷ ಅರ್ಧಗಂಟೆ
ಇಳಿಯಲೊಲ್ಲವು ಹೋಗಲೊಲ್ಲವು ಪಾಪಿಗಳು
ಇಳಿಯತೊಡಗಿದವು ಒಂದೊಂದಾಗಿ.

ಅದೇನೇನೋ ಹುಡುಕತೊಡಗಿದವು
ಇಳಿಬಿಟ್ಟ ಬಗಲ ಚೀಲದಲಿ
ಇರಬಹುದೆ ಬಾಂಬು ಬಂದೂಕು ಚಾಕು ಚೂರಿ
(ಪೇಪರ ಸುದ್ದಿಗಳು ಒಬ್ಬೊಂಟಿಮಹಿಳೆಯ ಕೊಲೆ, ಹತ್ಯ)
ಒತ್ತಿದವು ಕರೆಗಂಟೆ ನೆತ್ತಿಗೆ ಬಂತು ಜೀವ
ಕಿಟಕಿ ಈಚೆಯಿಂದಲೇ ಯಾರು? ಎಂದೆ
ಏನೇನೂ ಗೊತ್ತಿಲ್ಲದವರಂತೆ.

ನಾವು ನಾವು ಅದೇs…….
ಕ್ಷಮಿಸಿ ಮೇಡಂ ನೀವು….
ನಿಮ್ಮ ಬ್ಯಾಗಿನಲ್ಲಿ ಸಿಕ್ಕ ಪುಸ್ತಕಗಳು….
ಕ್ಷಮಿಸಿ ಮೇಡಂ…..
ನಿಮ್ಮೊಂದಿಗೆ ಮಾತನಾಡಬೇಕು…..

ಸಾವರಿಸಿಕೊಂಡು
ಒಳಗೆ ಕರೆಯದೆ ಗೇಟಿನವರೆಗೆ ನಾನೇ ಹೋದೆ
’ನಮಸ್ಕಾರ ಮೇಡಂ ನೀವು ಅಂತಾ ಗೊತ್ತಾಗ್ಲಿಲ್ಲ
ಹೊರರಾಜ್ಯದವರ ಐಟಿ ಬಿಟಿ ಯವರ ಹಾವಳಿ
ಜಾಸ್ತಿ ನೋಡಿ ನಾವು ಕನ್ನಡಾಭಿಮಾನಿಗಳು’
‘ಮಾತನಾಡಿದಿರಲ್ಲ ಕನ್ನಡದಲ್ಲಿ’ ಅಂದೆ

ಮತ್ತೆ ಮತ್ತೆ ಬಗಲಚೀಲದಲಿ
ಕೈಯಾಡಿಸುವುದ ನೋಡಿ ಇದೇನೋ
ಆಪತ್ಕಾಲ ಬಂತೆಂದೆ
ದೊಡ್ಡಮಾಲೆ ತೆಗೆದು ಕೈಗಿಟ್ಟು
’ಕ್ಷಮಿಸಿಮೆಡಂ’ ಎಲ್ಲಾ ಒಟ್ಟಾಗಿ ಅಂದವು
ಬೆವೆತು ಕಂಪಿಸಿದೆ ಮಂಪರು ಏನಾದರು ಇದ್ದರೆ –

‘ನಮ್ಮ ಸಂಘದ ರಾಜ್ಯೋತ್ಸವ ಅಧ್ಯಕ್ಷತೆಗೆ
ನೀವು ಬರಲೇಬೇಕು
ನಿಮ್ಮ ಒಪ್ಪಿಗೆ ಬೇಕು ಮೆಡಂ’
ನಾನು ಮರೆತೂ ಒಳಗಡೆ ಕರೆಯಲಿಲ್ಲ
ಯಾರಿಗೆಗೊತ್ತು ಯಾವಯಾವ ರೂಪಿನವರೆಂದು
ಫೋನ್‌ದಲ್ಲಿ ಹೇಳುವುದಾಗಿ ಕಳಿಸಿ
ಅದು ಬರದೇ ಇದ್ದರೆ ಸಾಕಪ್ಪ ದೇವರೆ
ಎಂದೆನ್ನುತ್ತ ಒಳಗೆ ಬಂದು
ಸೋಫಾದಲ್ಲಿ ದೊಪ್ಪನೆ ಬಿದ್ದುಕೊಂಡೆ.
*****

ಪುಸ್ತಕ: ಇರುವಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಳಾಕ್ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂತಾನ್ರಿ ಕೊಮಾರರಾಮ!
Next post ಶಂಕೆಯೆಂಬ ಬೆಂಕಿ ಸೋಕಿ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…