Home / ಬಾಲ ಚಿಲುಮೆ / ಕಥೆ / ಯುಧಿಷ್ಠಿರನ ಕಥೆ

ಯುಧಿಷ್ಠಿರನ ಕಥೆ

ಒಂದಾನೊಂದು ಊರಿನಲ್ಲಿ ಒಬ್ಬ ಕುಂಬಾರನಿದ್ದನು. ಅವನ ಹೆಸರು ಯುಧಿಷ್ಠಿರ. ಅವನು ಒಂದಾನೊಂದು ದಿನ ಬಹು ವೇಗವಾಗಿ ಓಡಿಬರುತ್ತಾ ಒಡೆದ ಮಡಕೆಯ ತುಂಡಿನ ಮೇಲೆ ಬಿದ್ದು ತಲೆಯನ್ನು ಒಡೆದುಕೊಂಡನು. ಮೈಯೆಲ್ಲಾ ರಕ್ತವಾಗಿ ಹೇಗೆ ಹೇಗೋ ಮನೆಗೆ ಬಂದು ಸೇರಿದನು. ಗಾಯಕ್ಕೆ ಎನೋ ಅಪಥ್ಯವಾಗಿ, ಅದು ಕೀವು ಕಟ್ಟಿಕೊಂಡು ವಾಸಿಯಾಗುವುದೇ ಅಸಾಧ್ಯವಾಗಿ, ಕೊನೆಗೆ ಹೇಗೆ ಹೇಗೋ ವಾಸಿಯಾಯಿತು.
ಒಂದು ಸಲ ಅವನಿದ್ದ ದೇಶದಲ್ಲೆ ಕ್ಷಾಮವು ಬರಲು, ಅವನು ದೇಶಾಂತರ ಹೋಗಿ ಒಬ್ಬ “ರಾಜನ ಬಳಿ ಸೇವಕನಾದನು. ಆ ರಾಜನು ಅವನ ಹಣೆಯಲ್ಲಿರುವ ಭಾರಿಯ ಕಲೆಯನ್ನು ನೋಡಿ “ಇವನು ವೀರಪುರುಷನಿರಬೇಕು. ಇವನ ಹಣೆಯ ಮೇಲಿನ ಕಲೆಯು ಮಖಾಮಖಿ ಯುದ್ಧಮಾಡಿದಾಗ ಆದದ್ದು ಇರಬೇಕು.” ಎಂದುಕೊಂಡು ಅವನಿಗೆ ಬೇಕಾದ ಮಾನ ಮರ್ಯಾದೆಗಳನ್ನು ಮಾಡಿ ರಾಜಪುತ್ರರ ಬಳಿ ಇಟ್ಟುಕೊಂಡಿದ್ದನು.
ಒ೦ದು ದಿನ ಅರಸನು ವೀರ ಸಂಭಾವನೆಯನ್ನು ಕೊಡಲು ಎಲ್ಲರನ್ನೂ ಕರೆಸಿದನು. ಆನೆ ಕುದುರೆ ಮೊದಲಾದುವುಗಳೂ ವೀರ ಪುರುಷರೂ ಬಂದು ನಿಂತಿದ್ದರು. ಆಗ ಅಗಸನು ಕುಂಬಾರನನ್ನು ಕರೆದು, “ಎಲೈ ರಾಜಪುತ್ರ, ನಿನ್ನ ಹೆಸರೇನು? ನೀನು ಯಾವ  ಜಾತಿಯವನು? ಯಾವ ಯುದ್ಧದಲ್ಲಿ ಏಟು ತಿಂದು ನಿನಗೆ ಈ ಹಣೆಯು ಹೀಗಾಯಿತು?” ಎಂಡು ಕೇಳಿದನು. ಕುಂಬಾರನು “ದೇವ, ಇದು ಶಸ್ತ್ರದ ಗಾಯವಲ್ಲ. ಯುಧಿಸ್ಠಿರನೆಂಬ ಕುಂಬಾರನು ನಾನು. ನಮ್ಮ ಮನೆಯಲ್ಲಿ ಎಷ್ಟೋ ಓಡುಗಳು ಇದ್ದವು. ಒಂದು ದಿನ ನಾನು ಓಡಿಬರುತ್ತಾ ಒಂದು ಓಡಿನ ಮೇಲೆ ಬಿದ್ದೆನು. ಅದು ತಗಲಿ ಇಷ್ಟು ಗಾಯವಾಯಿತು” ಎಂದು
ಹೇಳಿದನು.
ರಾಜನು ಅದನ್ನು ಕೇಳಿ. “ಮೋಸವಾಯಿತು,” ಎಂದು ಕೊಂಡು ಮೊದಲು ಇವನನ್ನು ಹೊರಕ್ಕೆ ತಳ್ಳಿ ಎಂದನು. ಕುಂಬಾರನು, “ಅರಸಾ, ತಡೆ, ತಡೆ, ಯುದ್ಧ ಬರಲಿ, ನನ್ನ ಕೈ ತೋರಿಸುವೆನು.” ಎನ್ನಲು ಅರಸನು ಹೇಳಿದನು: “ಆಹಾ, ಅಲ್ಲವೇ? ನೀನು ಸರ್ವ ಗುಣ ಸಂಪನ್ನನು. ಆದರೂ ನಮಗೆ ಬೇಡ, ಕೇಳಲಿಲ್ಲವೇ?”
ಶೂರನೆ ಅಹುದು, ಸುಂದರನಹುದು, ಪಂಡಿತನಹುದು ॥
ಆದರು ಮಗನೆ, ನಿನ್ನವರಾನೆಯ ಕೊಂದವರಲ್ಲಾ ॥ ೨೦ ॥
ಕುಂಬಾರನು “ಅದು ಹೇಗೆ?” ಎನ್ನಲು : ಅರಸನು ಹೇಳಿದನು:-
*****
ನರಿಯ ಮರಿಯ ಕಥೆ ಓದಿ.
Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...