Home / ಬಾಲ ಚಿಲುಮೆ / ಕಥೆ / ನರಿಯ ಮರಿಯ ಕಥೆ

ನರಿಯ ಮರಿಯ ಕಥೆ

ಒಂದಾನೊಂದು ಕಾಡಿನಲ್ಲಿ ಸಿಂಹ ದಂಪತಿಗಳು ಇದ್ದವು. ಸಿಂಹಿಯು ಒಂದು ಸಲ “ಎರಡು ಮರಿಗಳನ್ನು ಈದಿತು. ಸಿಂಹವು ದಿನವೂ ಹೋಗಿ ಬೇಟೆಯಾಡಿ ಆ ತಾಯಿ ಮಕ್ಕಳಿಗೆ ಮಾಂಸವನ್ನು ತಂದುಕೊಡುತ್ತಿತ್ತು. ಒಂದು ದಿನ ಬೇಟೆಯಿಂದ ಬರುವಾಗ ಒಂದು ನರಿಯ ಎಳೆಯ ಮರಿಯು ಸಿಕ್ಕಲು, ಸಿಂಹವು ಅದನ್ನು ತಂದು ಹೆಂಡತಿಗೆ ಕೊಟ್ಟಿತು. ಸಿಂಹಿಯು ಅದನ್ನು ಕೊಲ್ಲದೆ, ಅದಕ್ಕೂ ಹಾಲು ಕೊಟ್ಟು ಸಾಕಿತು. ಆಮರಿಗಳೊಡನೆ ಅದೂ ಬೆಳೆಯಿತು.
ಅವು ಒ೦ದು ದಿನ ಅರಣ್ಯದಲ್ಲಿ ಅಲೆಯುತ್ತಿರುವಾಗ ಅವುಗಳ ಎದುರಿಗೆ ಒ೦ದು ಆನೆಯು ಬಂತು. ಸಿಂಹದ ಮರಿಗಳು ಅದನ್ನು ಕಂಡು ರೇಗಿ ಅದರ ಮೇಲೆ ಬೀಳಲು ಹೋದುವು. ನರಿಯ ಮರಿಯು “ಬೇಡ ಬೇಡ” ಎಂದು ತಡೆಯಿತು; ಅವು ನಿಲ್ಲದಿರಲು ತಾನು ಮನೆಯ ಕಡೆಗೆ “ಓಡಿತು. ಇದು ಓಡುತ್ತಲೂ ಅವು ಏನೋ ಎಂತೋ ಎಂದು ಅದರ ಹಿಂದೆಯೇ ಬಂದುಬಿಟ್ಟುವು. ಕೇಳಿಲ್ಲವೆ?
ಉತ್ಸಾಹಿ ಧೀರನಿಂದುತ್ಸಾಹ ಸೇನೆಗೆಲ್ಲ | 
ಸೋತೊಬ್ಬನೋಡಲ್ಕೆ ಸೋತಂತೆ ಸೇನೆಯೆಲ್ಲ ॥೨೧॥ 
ಮನೆಗೆ ಬಂದಮೇಲೆ ಸಿಂಹದ ಮರಿಗಳೆರಡೂ ತಾಯಿ ಬಳಿಯಲ್ಲಿ “ಅಮ್ಮಾ, ಅಣ್ಣ ಈ ವೊತ್ತು ಹೆದರಿ ಓಡಿ ಬಂದುಬಿಟ್ಟ” ಎಂದು ಹಾಸ್ಯಮಾಡಿ ನಗುತ್ತ ನರಿಯ ಮರಿಯು ಮಾಡಿದುದನ್ನೆಲ್ಲಾ ಹೇಳಿದುವು. ಅದನ್ನು ಕೇಳಿ ನರಿಯ ಮರಿಗೆ ಕೋಪ ಬಂತು. ಅವರನ್ನು ಗದರಿಸಿಕೊಂಡು ಬಯ್ಯಿತು.
ಸಿಂಹಿಯು ನರಿಯ ಮರಿಯನ್ನು ಬೇರೆಯಾಗಿ ಕರೆದು “ಮಗು, ನೀನು ಹೀಗೆಲ್ಲ ಹಾರಾಡಬಾರದು. ನಿನ್ನ ತಮ್ಮಂದಿರು ಅವರು” ಎನ್ನಲು, ಅದು ಇನ್ನೂ ರೇಗಿ ಹಾರಾಡಿತು. “ನಾನೇನು ಇವರಿಗಿಂತ ಕಡಿಮೆಯೋ? ನನಗೆ ಶೌರ್ಯವಿಲ್ಲವೋ? ರೂಪವಿಲ್ಲವೋ? ವಿದ್ಯೆಯಿಲ್ಲವೋ? ನನ್ನನ್ನು ಇವರು ಏಕೆ ಹಾಸ್ಯ ಮಾಡುವುದು?” ಎಂದು ಕೂಗಿತು. ಆಗ ಸಿಂಹಿಯು ನಗುತ್ತ ಹೇಳಿತು:-“ನೀನು ಎಲ್ಲವೂ ಅಹುದು. ಅದರೂ ನಿನ್ನವರು ಆನೆಯನ್ನು ಕೊಂದವರಲ್ಲ. ನೀನು ನರಿಯ ಮಗನು. ನಾನು ನಿನ್ನನ್ನು ಕಾಪಾಡಿದೆ ಅಷ್ಟೆ? ನನ್ನ ಮರಿಗಳಿಗೆ ನೀನು ನರಿಯೆಂಬುದು ಇನ್ನೂ ತಿಳಿಯದು. ಈಗಲೇ ಹೊರಟು ಹೋಗಿ ನಿನ್ನವರ ಜೊತೆ ಸೇರಿಕೊ. ಇಲ್ಲದಿದ್ದರೆ ಇವರ ಏಟು ತಿಂದು ಸತ್ತೀಯೆ” ಎಂದು ಹೇಳಿ ಅದನ್ನು ಅಲ್ಲಿಂದ ಕಳುಹಿಸಿ ಕೊಟ್ಟಿತು.
ಅದರಂತೆಯೇ ನೀನೂ ಈ ರಾಜಪುತ್ರರು ನೀನು ಕುಂಬಾರನೆಂದು ತಿಳಿಯುವುದಕ್ಕಿಂತ ಮುಂಚೆಯೇ ಓಡಿಬಿಡು.ಇಲ್ಲವಾದರೆ ಇವರ ಕೈಗೆ ಸಿಕ್ಕಿ ಬದುಕವುದೇ ಕಷ್ಟವಾದೀತು.” ಎಂದು ಹೇಳಲು ಅವನೂ ಹೋಗಿ ಬದಕಿದನು.
“ಎಲೆ ಮೊಸಳೆ, ನೀನು ನಿಜವಾಗಿ ಮೂರ್ಖನು. ಹೆಂಗಸಿನ ಮಾತು ಕೇಳಿ ಕೆಟ್ಟೆ. ಕಥೆಯನ್ನು ಕೇಳಿಲ್ಲವೇ?
ಹೆಣ್ಣು ಮಾಡೆನೆ ಗಂಡು ಮಾಡನದೇನ? 
ಕುದುರೆಯಿಲ್ಲದ ಅರಸು ಕೆನೆಯುವ ॥ ಪರ್ವ 
ಕಾಲವೆನ್ನದೆ ಮಂತ್ರಿ ಬೋಳಿಪ ತಲೆಯನು ॥ 
ಮೊಸಳೆಯು ಅದು ಹೇಗೆ ಎನ್ನಲು ಕಪಿಯು ಹೇಳಿತು: –
*****
ಅರಸು ಮಂತ್ರಿಗಳ ಕಥೆ ಓದಿ
Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...