Home / ಬಾಲ ಚಿಲುಮೆ / ಕಥೆ / ಹುಲಿಯಾಗಿದ್ದ ಕತ್ತೆಯ ಕಥೆ

ಹುಲಿಯಾಗಿದ್ದ ಕತ್ತೆಯ ಕಥೆ

ಒಂದಾನೊಂದು ಊರಿನಲ್ಲಿ ಶುದ್ಧ ಪಟನೆಂಬ ಅಗಸನು ಇದ್ದನು. ಅವನಿಗೆ ಒಂದು ಕತ್ತೆಯಿತ್ತು. ಅದು ಹೊಟ್ಟೆಗಿಲ್ಲದೆ ಬಹಳ ಇಳಿದುಹೋಗಿ ನಿಶ್ಶಕ್ತಿಯಾಗಿತ್ತು. ಆ ಅಗಸನು ಒ೦ದು ದಿನ ಎಲ್ಲಿಯೋ ಹೋಗಿ ಬರುತ್ತಿದ್ದಾಗ ಕಾಡಿನಲ್ಲಿ ಸತ್ತು ಬಿದ್ದಿದ್ದ ಹುಲಿಯೊಂದನ್ನು ಕಂಡನು. ಅಹಾ, ಇದರ ಚರ್ಮವನ್ನು “ತಗೆದು ಕೊಂಡು ಹೋಗಿ ನಮ್ಮ ಕತ್ತೆಗೆ ಹೊದಿಸಿ ಹೊಲಗಳಲ್ಲಿ ಬಿಟ್ಟು ಬಿಟ್ಟರೆ, ಕಾವಲುಗಾರರು ಹುಲಿಯೆಂದುಕೊಳ್ಳುವರು; ಇದನ್ನು ಯಾರೂ ಓಡಿಸುವುದಿಲ್ಲ. ಹಾಗೆ ಆದಕ್ಕೆ, ಕತ್ತೆಯು ಚೆನ್ನಾಗಿ ಮೇದು ಬಲವಾಗುವುದು” ಎಂದು ಯೋಚನೆ ಬಂತು. ಅವನು ಹಾಗೆಯೇ ಮಾಡಿದನು. ರಾತ್ರಿಯೆಲ್ಲವೂ ಕತ್ತೆಯು ಬೆಳೆದ ಹೊಲದಲ್ಲಿ ಮೇಯುವುದು.  ಬೆಳಗಾಗುವುದಕ್ಕೆ ಮುಂಚೆಯೇ ಅಗಸನು ಬಂದು ಅದನ್ನು ಹೊಡೆದುಕೊಂಡು ಹೋಗುವನು.
“ಹೀಗೆಯೇ ಕೆಲವು ಕಾಲ ನಡೆಯಲು ಕತ್ತೆಯು ಚೆನ್ನಾಯಿತು. ಅವನ್ನು ಹಿಡಿಯುವುದೇ ಕಷ್ಟವಾಯಿತು. ಹೀಗಿರಲು ಒಂದು ದಿನ ಹೊಲದಲ್ಲಿ ಮೇಯುತ್ತಿದ್ದ ಕತ್ತೆಯು ದೂರದಲ್ಲಿ ಎಲ್ಲಿಯೋ ಇನ್ನೊ೦ದು ಕತ್ತೆಯು ಕೂಗಿದುದನ್ನು ಕೇಳಿತು. ಅದು ಹೆಣ್ಣು ಕತ್ತೆಯೆಂದುಕೊಂಡು‌ ತಾನೂ ಕೂಗುವುದಕ್ಕೆ ಆರಂಭಿಸಿತು.
ಕೂಡಲೇ ಕಾವಲುಗಾರರು “ಎಲೆಲಾ ಇದು ಹುಲಿಯಲ್ಲ. ಹುಲಿಯ ಚರ್ಮ ಹೊದ್ದ ಕತ್ತೆ” ಎಂದು ತಿಳಿದುಕೊಂಡು ಬಂದು ಕಲ್ಲು ದೊಣ್ಣೆ ಮುಂತಾದವುಗಳಿಂದ ಹೊಡೆದು ಕೊಂದರು.
ಅದರಿಂದ ಹೇಳಿದೆನು. “ಕತ್ತೆಗಂದು ಕೂಗಿಕೊಂಡುದೆ ಮೃತ್ಯುವಾಯ್ತು ಎಂದು” ಎಂದು ಕಪಿಯು ಕಥೆಯನ್ನು ಮುಗಿಸುತ್ತಿದ್ದ ಹಾಗೆಯೇ ಒಂದು ಜಲಚರವು (ನೀರಿನ ಪ್ರಾಣಿ) ಬಂದು “ಎಲೆ ಮೊಸಳೆ ನಿನ್ನ ಹೆಂಡತಿಯು ನೀನು ಬರಲಿಲ್ಲವೆಂದು ಉಪವಾಸಮಾಡಿ ಬಿಟ್ಟಳು? ಎಂದು ಹೇಳಿತು. ಸಿಡಿಲಿನಂತಹ ಆ ಕೆಟ್ಟ ಸುದ್ದಿಯನ್ನು ಕೇಳಿ ಮೊಸಳೆಯು ಹೋ ಎಂದು ಅತ್ತಿತು.
“ಅಯ್ಯೋ, ನನ್ನ ಅದೃಷ್ಟಟವೇ! ಹೀಗಾಗಬಹುದೇ? ಕೇಳಿಲ್ಲವೆ?
ಎಲ್ಲಿ ತಾಯಿಯಿಲ್ಲವೋ; ನುಡಿವ ಮುದ್ದು
ಮಡದಿ ಎಲ್ಲಿಯಿಲ್ಲವೋ, ಆ ಮನೆಯು
ಮನೆಯೇ? ಅದರಲಿಲ್ಲದಿದ್ದರೇನಿದ್ದರೇನು? ॥
ಅಡವಿಗಾಮನೆಗುಂ ನೋಡಲಾಗಿ ಭೇದವೇನು? ॥೨೪॥
ಆದದ್ದು ಆಗಿ ಹೋಯಿತು. ನನ್ನ ಅಪರಾಧವನ್ನು ಮನ್ನಿಸು. ನನ್ನ ಹೆ೦ಡಿತಿಯೂ ಹೋದಳು. ಆ ದುಃಖವನ್ನು ನಾನು ತಡೆಯಲಾರೆ. ನಾನು ಬೆಂಕಿಗೆ ಬೀಳುವೆನು” ಎಂದು ಬಹಳವಾಗಿ ಅತ್ತು ಕೊಂಡಿತು.
ಅದನ್ನು ಕೇಳಿ ಕಪಿಯು ನಕ್ಕುಬಿಟ್ಟತು. “ಎಲೆಲಾ, ಈಗ ತಿಳಿಯಿತು. ನೀನು ಕೇವಲ ಸ್ತ್ರೀವಶನು ಮಾತ್ರವಲ್ಲ ಹೆಣ್ಣಿಗೆ ಸೋತವನೂ ಹೌದು. ಅದರಿಂದ ನೀನು ಅಪರಾಧಿಯಲ್ಲ ಎಂದು ನಂಬಿಕೆಯಾಯಿತು. ಮೂಢ, ಇದು ಆನಂದ ಪಡುವ ಸಮಯ. ಅಳುವ ಸಮಯವಲ್ಲ. ಅಂತಹ ಹೆಂಡತಿಯು ಸತ್ತರೆ ಹಬ್ಬ ಮಾಡಬೇಕು.” ಎಂದಿತು.
ಮೊಸಳೆಯು ಹೇಳಿತು. “ಮಿತ್ರ, ನೀನು ಹೇಳುವುದಿರಲಿ, ಈಗ ನೋಡು,” ನನಗೆ ಎರಡು ನಷ್ಟವಾಯಿತು. ಮೊದಲನೆಯದಾಗಿ ಮನೆಯು ಹಾಳಾಗಿ ಹೋಯಿತು. ಎರಡನೆಯದಾಗಿ ನಿನ್ನಂತಹ ಸ್ನೇಹಿತನ ಸ್ನೇಹವು ಹೋಯಿತು. ಇದಿಷ್ಟೂ ನನ್ನ ಹಣೆಯ ಬರೆಹ! ಕೇಳಿಲ್ಲವೆ?
ನನ್ನ ಜಾಣಿಗೆರಡುಪಾಲು ನಿನ್ನ ಜಾಣು ॥ 
ಗಂಡನಿಲ್ಲ ಮಿಂಡನಿಲ್ಲ ಆದೆ ಬೆತ್ತಲೆ ॥೨೫ ॥ 
ಕಪಿಯು “ಅದು ಹೇಗೆ?” ಎಂದು ಕೇಳಲು, ಮೊಸಳೆಯು ಹೇಳಿತು:-
*****
ಎರಡೂ ಇಲ್ಲವಾದ ಕಥೆ ಓದಿ
Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...