Home / ಕವನ / ಕವಿತೆ / ‘ಶಾರ್ ಕಣಿವೆ’ಯಲ್ಲಿ

‘ಶಾರ್ ಕಣಿವೆ’ಯಲ್ಲಿ

ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ
ಧೂಳು ತುಂಬಿದ ಭಯಾನಕ ಪೊದೆಗಳು
ಕಣಿವೆ ಎದೆಗೆ ತಬ್ಬಿದ್ದ
ಮುಳ್ಳು ಗೋರಂಟಿಗಳ
ಹಳದಿ ಹೂವುಗಳ ತುಂಬ
ಜೇಡರ ಬಲೆಗಳು
ಹಾರಾಡುತ್ತಿವೆ ಹುಳು ಹುಪ್ಪಡಿಗಳು
ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ
ಕಂದಕದಾಳಕ್ಕೆ ಬೈನಾಕ್ಯುಲರ್ ಸ್ಪರ್ಶಿಸದೆ
ಪಕ್ಷಿಗಳ ಕೀಟಗಳ
ಒಂದಕ್ಕೊಂದರ ಬೇಟೆಯಾಟ
ಕಪ್ಪು ಪತಂಗಗಳ, ರಣಹದ್ದುಗಳ
ಕಿಚ್ ಕಿಚ್ ಶಬ್ದ
ಹರಿದಾಡುವ ಪೆಟ್ರೋ ವಾಹನಗಳಲ್ಲಿ
ಹೆಪ್ಪುಗಟ್ಟಿವೆ ಪುರಾತನ
ಅರೇಬಿಯ ವ್ಯಾಪಾರಿ ಮಾರ್ಗಗಳು
ಆದರೂ ಕಾಣುತ್ತೇನೆ ಅಲ್ಲಲ್ಲಿ
ಕಾಲ್ನಡಿಗೆಯಿಂದಲೇ
ಹಾದಿಕೊಂದ ಜನರನ್ನು
ಸೊಂಟಕ್ಕೆ ಬಿಗಿದ ಖಡ್ಗಗಳನ್ನು
ತಲೆಗೆ ಸುತ್ತಿದ ‘ಘೋತ್ರಾ’ ಗಳನ್ನು
ನನ್ನದು ನಿನ್ನದು ಎಂದು
ಕಾದಾಡಿದ ಜನರನ್ನು
ಕೊಳ್ಳೆ ಹೊಡೆದ ಕೊಲೆಗಡುಕರನ್ನು
ಕೊಳ್ಳಕ್ಕೆ ಹರಿದ ನೆತ್ತರನ್ನು
ಮರುಭೂಮಿಯಲ್ಲಿ ಹೂತು ಹೋದ
ಎಲುಬುಗಳನ್ನು, ಅವುಗಳೆದೆಯ ಮೇಲೆ
ಬೆಳೆದ ಪೊದೆಗಳನ್ನು.
ಇಂದು ಒಂಟೆಗಳು
ಸ್ವತಂತ್ರತೆಯ ಖುಷಿಯಲ್ಲಿ
ಧ್ವನಿ ಕಳೆದುಕೊಂಡಿವೆ.
ಬುರ್ಕಾದ ಕಾಲು ತೊಡೆತಕ್ಕೆ ಬಿದ್ದೇಳುವ
ಕುರಿ ಕಾಯುವ ತುಂಟು ಹುಡುಗಿಯರು
ಕೆಂಡ ಸಂಪಿಗೆಯಂತೆ
ತುಂಬು ಗುಲಾಬಿಗಳಂತೆ
ಅರಳುತ್ತಿದ್ದಾರೆ, ಅಷ್ಟೇ
ಕನಸು ಕಾಣದ ಕೋಮಲೆಯರು
ಸುಡುತ್ತಲೂ ಇದ್ದಾರೆ.
ಈಗ ಎಲ್ಲವೂ ನಿಶ್ಶಬ್ದ
ಶತ ಶತಮಾನಗಳ
ಪರಿಪೂರ್ಣತೆಗೆ ಕೃತಜ್ಞತೆಗಳು ಎಂದು
ಸೂರ್ಯ ತೆಪ್ಪಗಾಗುತ್ತಿದ್ದಾನೆ.
ಹೊಸ ಶತಮಾನದ ಉಬ್ಬರಕ್ಕೆ
ಸ್ವಾಗತದ ಹೆಜ್ಜೆಗಳು
ಪುಟಿ ಪುಟಿದು ಓಡಾಡುತ್ತಿವೆ.

(ಅರೇಬಿಯದ ದಕ್ಷಿಣ ಭಾಗದಲ್ಲಿ ಆಳವಾದ ‘ಶಾರ್ ಕಣಿವೆ’ ಮಾರ್ಗಗಳಲ್ಲಿ ಪ್ರವಾಸ ಕೈಗೊಂಡಾಗ ನೋಡಿದ ದೃಶ್ಯ)
*****

ಪುಸ್ತಕ: ಗಾಂಜಾ ಡಾಲಿ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...